ಬಾಲಿವುಡ್‌ ದಂತಕತೆ ಶಶಿಕಪೂರ್‌ ಇನ್ನಿಲ್ಲ


Team Udayavani, Dec 5, 2017, 6:00 AM IST

Shashi-Kapoor.jpg

ಮುಂಬೈ: ಮನೆತನದ ಮತ್ತೂಂದು ಧ್ರುವತಾರೆ ಸೋಮವಾರ ಅಸ್ತಂಗತವಾಗಿದೆ. ಹಿರಿಯ ನಟ, ಬಾಲಿವುಡ್‌ ದಂತಕತೆ ಹಾಗೂ 2015ರ ದಾದಾ ಸಾಹೇಬ್‌ ಪಾಲ್ಕೆ ಪ್ರಶಸ್ತಿ ಪುರಸ್ಕೃತ ಶಶಿಕಪೂರ್‌ (79) ನಿಧನರಾಗಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ, ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, 2014ರಲ್ಲಿ ಹೃದಯ ಸೋಂಕಿಗೆ ಒಳಗಾಗಿದ್ದರು. ಇದು ಉಲ್ಬಣಗೊಂಡಿದ್ದರಿಂದ ಇತ್ತೀಚೆಗೆ ಅವರು ಬೈಪಾಸ್‌ ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರು. 166 ಹಿಂದಿ ಚಿತ್ರಗಳಲ್ಲಿ ನಟಿಸಿರುವ ಅವರು, ಕೆಲವು ಇಂಗ್ಲಿಷ್‌ ಚಿತ್ರಗಳಲ್ಲೂ ಅಭಿನಯಿಸಿದ್ದರು.

ಅನೇಕ ಪ್ರಶಸ್ತಿ, ಗೌರವಗಳಿಗೆ ಭಾಜನರಾಗಿದ್ದ ಅವರು, 2011ರಲ್ಲಿ ಪದ್ಮಭೂಷಣ, 2015ರಲ್ಲಿ ದಾದಾ ಸಾಹೇಬ್‌ ಫಾಲ್ಕೆ ಪಡೆದಿದ್ದರು.

ಹಿನ್ನೋಟ:
ಹಿಂದಿ ಚಿತ್ರರಂಗದ ಮೇರು ಪರ್ವತಗಳಲ್ಲೊಂದಾದ ಪೃಥ್ವಿರಾಜ್‌ ಕಪೂರ್‌  (ಕನ್ನಡದ “ಸಾûಾತ್ಕಾರ’ ಚಿತ್ರದಲ್ಲಿ ಡಾ.ರಾಜ್‌ ಅವರ ತಂದೆಯ ಪಾತ್ರ ಮಾಡಿದ್ದರು)ಗರಡಿಯಲ್ಲಿ ಪಳಗಿದ ಅವರ ಮೊದಲಿಬ್ಬರು ಮಕ್ಕಳಾದ ರಾಜ್‌ ಕಪೂರ್‌ ಹಾಗೂ ಶಮಿ ಕಪೂರ್‌ ಅಕ್ಷರಶಃ ಬಾಲಿವುಡ್‌ ಚಿತ್ರರಂಗವನ್ನು ಆಳಿದವರು. ಅವರ ನೆರಳಿನಲ್ಲೇ ಬಂದ ಶಶಿಕಪೂರ್‌, ಪೃಥ್ವಿರಾಜ್‌ ಅವರ ಮೂರನೇ ಹಾಗೂ ಕಿರಿಯ ಪುತ್ರ. ಅಷ್ಟೇ ಅಲ್ಲ, 1960, 70ರ ದಶಕದಲ್ಲಿ ಆಗಿನ ಹುಡುಗಿಯರ ಡ್ರೀಮ್‌ ಬಾಯ್‌ ಆಗಿದ್ದ ಶಶಿಕಪೂರ್‌, ಹಿಂದಿಯ ಮೊದಲ ಚಾಕ್ಲೇಟ್‌ ಹೀರೋ ಇಮೇಜ್‌ ಪಡೆದವರು.

ಸಿನಿಮಾ ವಾತಾವರಣದಲ್ಲೇ ಬೆಳೆದ ಅವರು, ತಮ್ಮ ಮೂರನೇ ವಯಸ್ಸಿನಲ್ಲೇ ಬಣ್ಣ ಹಚ್ಚಿದ್ದರು. 40ರ ದಶಕದ ಆರಂಭದಲ್ಲಿ ಅವರು ತಮ್ಮ ತಂದೆಯ ನಿರ್ಮಾಣದ ಚಿತ್ರಗಳಲ್ಲಿ ಬಾಲನಟನಾಗಿ ಕಾಣಿಸಿಕೊಂಡಿದ್ದರು. ಆನಂತರ, 1950ರಲ್ಲಿ ತೆರೆಕಂಡ ಸಂಗ್ರಾಮ್‌, 1953ರಲ್ಲಿ ತೆರೆಕಂಡ ದಾನಾ ಪಾನಿ ಚಿತ್ರಗಳ ಗಮನಾರ್ಹ ಪಾತ್ರಗಳಲ್ಲಿ ಕಾಣಿಸಿಕೊಂಡರು. ಬಾಲನಟನಾಗಿ ಅವರಿಗೆ ಹೆಸರು ತಂದಿದ್ದು ಆಗ್‌ (1948) ಹಾಗೂ ಆವಾರಾ (1951).

ಚಿತ್ರಗಳಲ್ಲಿ ನಾಯಕರಾಗಿ ಮಿಂಚುವುದಕ್ಕೂ ಮೊದಲು ಅವರು ಸಹಾಯಕ ನಿರ್ದೇಶಕರಾಗಿ ತಮ್ಮ ಸಂಸ್ಥೆಯ ಚಿತ್ರಗಳಲ್ಲಿ ಕೆಲಸ ಮಾಡಿದ್ದರು. ಅವುಗಳಲ್ಲಿ ಪೋಸ್ಟ್‌ ಬಾಕ್ಸ್‌ 999, ಗೆಸ್ಟ್‌ ಹೌಸ್‌ ಪ್ರಮುಖವಾದವು. ಆನಂತರ, ಧರ್ಮಪುತ್ರ (1961) ಚಿತ್ರದ ಮೂಲಕ ಅವರು ನಾಯಕರಾಗಿ ಕಾಣಿಸಿಕೊಳ್ಳಲಾರಂಭಿಸಿದರು. 116 ಚಿತ್ರಗಳ ಅವರ ಸಿನಿಜೀವನದಲ್ಲಿ “ನಮಕ್‌ ಹಲಾಲ್‌’, “ಸತ್ಯಂ ಶಿವಂ ಸುಂದರಂ’, “ದೀವಾರ್‌’ ಹಾಗೂ “ವಖ್‌¤’ ಚಿತ್ರಗಳು ಅವರನ್ನು ಸದಾ ನೆನಪಿನಲ್ಲಿಟ್ಟುಕೊಳ್ಳುವಂತೆ ಮಾಡಿದ ಚಿತ್ರಗಳು.

1958ರಲ್ಲಿ ಇಂಗ್ಲೆಂಡ್‌ ಮೂಲದ ಜೆನ್ನಿಫ‌ರ್‌ ಕೆಂದಾಲ್‌ ಅವರನ್ನು ವಿವಾಹವಾಗಿದ್ದ ಶಶಿಕಪೂರ್‌, ಕುನಾಲ್‌ ಕಪೂರ್‌, ಕರಣ್‌ ಕಪೂರ್‌ ಹಾಗೂ ಸಂಜನಾ ಕಪೂರ್‌ ಎಂಬ ಮಕ್ಕಳನ್ನು ಅಗಲಿದ್ದಾರೆ. ಜೆನ್ನಿಫ‌ರ್‌ 1984ರಲ್ಲೇ ನಿಧನರಾಗಿದ್ದರು.

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

9

ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ತಾಪ್ಸಿ: ಗುಟ್ಟಾಗಿ ಹಸಮಣೆ ಏರಿದ ನಟಿ

12

ಮೀಟಿಂಗ್‌ ಮಾಡೋಕ್ಕೂ ರೇಟ್‌ ಫಿಕ್ಸ್‌: ನನ್ನ 10 ನಿಮಿಷ ಬೇಕಿದ್ರೆ 1ಲಕ್ಷ ಕೊಡಿ ಎಂದ ನಿರ್ದೇಶಕ

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕ ಚೋಪ್ರಾ ದಂಪತಿ

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ದಂಪತಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.