ಆದಿವಾಸಿಗಳ ಬೆನ್ನೆಲುಬು ಮುರಿದ ಪ್ರಧಾನಿ ಮೋದಿ: ರಾಹುಲ್ ಟೀಕೆ
Team Udayavani, Dec 8, 2017, 11:19 AM IST
ಹೊಸದಿಲ್ಲಿ : ”ಪ್ರಧಾನಿ ನರೇಂದ್ರ ಮೋದಿ ಅವರು ಆದಿವಾಸಿಗಳ ಬೆನ್ನೆಲುಬು ಮುರಿದಿದ್ದಾರೆ. ಅವರಿಗೆ ನೆರವು ನೀಡುವ ಭರವಸೆಯನ್ನು ಅವರು ಹುಸಿಗೊಳಿಸಿದ್ದಾರೆ. ಮೋದಿ ಭರವಸೆ ಕೊಟ್ಟಿದ್ದ 55 ಕೋಟಿ ರೂ. ವಿನಿಯೋಗದ ವನಬಂಧು ಕಲ್ಯಾಣ ಯೋಜನೆಯ ಗತಿ ಏನಾಗಿದೆ ಎಂಬುದನ್ನು ಅವರೀಗ ದೇಶದ ಜನರಿಗೆ ತಿಳಿಸಬೇಕಾಗಿದೆ” ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಗುಡುಗಿದ್ದಾರೆ.
ಗುಜರಾತ್ ಚುನಾವಣೆ ಸಂಬಂಧ ಪ್ರಧಾನಿ ಮೋದಿಗೆ ದಿನನಿತ್ಯ ಒಂದು ಪ್ರಶ್ನೆಯನ್ನು ಕೇಳುವ ರಾಹುಲ್ ಗಾಂಧಿ ಅವರ ಸರಣಿ ಪ್ರಶ್ನಾವಳಿಯ 10ನೇ ಪ್ರಶ್ನೆಯಾಗಿ ಇಂದು ಪ್ರಧಾನಿ ಮೋದಿಯನ್ನು ಕಟಕಟೆಯಲ್ಲಿ ನಿಲ್ಲಿಸಿರುವ ರಾಹುಲ್, ‘ವಲಸಿಗರಿಗೆ ನೆರವಾಗುವ ನಿಮ್ಮ ಭರವಸೆ ಹುಸಿಯಾಯಿತೇಕೆ ?’ ಎಂದು ನೇರವಾಗಿ ಪ್ರಶ್ನಿಸಿದ್ದಾರೆ.
ಬುಡಕಟ್ಟು ಜನರ ಸಮಸ್ಯೆಗಳಿಗೆ ಒತ್ತು ನೀಡುತ್ತಾ ರಾಹುಲ್ ಗಾಂಧಿ ಅವರು, “ಬುಡಕಟ್ಟು ವಾಸಿಗಳ ಅನುಭೋಗದಲ್ಲಿದ್ದ ಭೂಮಿಯನ್ನು ಕಿತ್ತುಕೊಳ್ಳಲಾಗಿದೆ; ಅವರಿಗೀಗ ತಾವು ವಾಸಿಸಿಕೊಂಡಿರುವ ಅರಣ್ಯದ ಮೇಲೆ ಯಾವುದೇ ಹಕ್ಕು ಇಲ್ಲವಾಗಿದೆ. ಅವರಿಗೆ ಜನಸಾಮಾನ್ಯರಿಗೆ ಸಿಗುವಂತಹ ಶಾಲೆ, ಆಸ್ಪತ್ರೆ ಮೊದಲಾದ ಮೂಲ ಸೌಕರ್ಯಗಳೂ ಇಲ್ಲವಾಗಿದೆ” ಎಂದು ಟೀಕಿಸಿದರು.
ಪ್ರಧಾನಿ ಮೋದಿ ಅವರು ಈಚೆಗೆ ಮಾತನಾಡುತ್ತಾ, ಗುಜರಾತ್ ಸರಕಾರ ಬುಡಕಟ್ಟು ಜನರ ಕಲ್ಯಾಣಕ್ಕಾಗಿ 65,700 ಕೋಟಿ ರೂ. ಬಜೆಟ್ ವಿನಿಯೋಗದ ವನಬಂಧು ಕಲ್ಯಾಣ ಯೋಜನೆಯನ್ನು ಆರಂಭಿಸಲಾಗಿದೆ; ಇದರಿಂದಾಗಿ ಭಾರತೀಯ ಜನತಾ ಪಕ್ಷಕ್ಕೆ ಬುಡಕಟ್ಟು ಜನರ ಬಾಳ್ವೆಯಲ್ಲಿ ಕ್ರಾಂತಿಕಾರಕ ಬದಲಾವಣೆಯನ್ನು ತರಲು ಸಾಧ್ಯವಾಗಿದೆ’ ಎಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ