ಪ್ರಜಾಸತ್ತೆ ಬಗ್ಗೆ ನಿಮ್ಮಿಂದ ನಮಗೆ ಪಾಠ ಬೇಡ: ಪಾಕಿಗೆ ಮೋದಿ
Team Udayavani, Dec 11, 2017, 4:36 PM IST
ಹೊಸದಿಲ್ಲಿ : ಗುಜರಾತ್ ಚುನಾವಣೆಯಲ್ಲಿ ಪಾಕಿಸ್ಥಾನ ಹಸ್ತಕ್ಷೇಪ ನಡೆಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ ಬೆನ್ನಿಗೇ ಪಾಕ್ ವಿದೇವ ಸಚಿವಾಲಯದ ವಕ್ತಾರ ಮೊಹಮ್ಮದ್ ಫೈಸಲ್ ಅವರು ಟ್ವಿಟರ್ನಲ್ಲಿ ಅವಹೇಳನಕಾರಿಯಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ಮೋದಿ ಸರಕಾರ ಪಾಕಿಗೆ ಖಡಕ್ ಉತ್ತರ ನೀಡಿದೆ.
“ಭಾರತ ತನ್ನ ಆಂತರಿಕ ಚುನಾವಣಾ ಚರ್ಚೆಗಳಲ್ಲಿ ಪಾಕಿಸ್ಥಾನವನ್ನು ಎಳೆದು ತರುವುದನ್ನು ನಿಲ್ಲಿಸಬೇಕು; ಭಾರತೀಯ ಜನತಾ ಪಕ್ಷ ತನ್ನ ಸ್ವಂತ ಬಲದಲ್ಲಿ ಚುನಾವಣೆಗಳನ್ನು ಗೆಲ್ಲಬೇಕೇ ವಿನಾ ನಿರಾಧಾರವೂ ಹೊಣೆಗೇಡಿತನದ್ದೂ ಆದ ತಥಾಕಥಿತ ಪಿತೂರಿ ಬಲದಿಂದಲ್ಲ’ ಎಂದು ಫೈಸಲ್ ಟೀಕಿಸಿದ್ದರು.
ಇದಕ್ಕೆ ಉತ್ತರವಾಗಿ ಪ್ರಧಾನಿ ನರೇಂದ್ರ ಮೋದಿ ಸರಕಾರ “ಇದೊಂದು ಅನಪೇಕ್ಷಿತ ಹೇಳಿಕೆ; ಪಾಕಿಸ್ಥಾನ ನಮಗೆ ಪಾಠ ಮಾಡುವುದನ್ನು ನಿಲ್ಲಿಸಬೇಕು’ ಎಂದು ಖಡಕ್ ಆಗಿ ಹೇಳಿದೆ.
“ಭಾರತದ ಆಂತರಿಕ ವ್ಯವಹಾರಗಳಲ್ಲಿ ಹೊರಗಿನವರು ಹಸ್ತಕ್ಷೇಪ ನಡೆಸುವುದನ್ನು ನಾವು ಸಂಪೂರ್ಣವಾಗಿ ಖಂಡಿಸುತ್ತೇವೆ. ಭಾರತದಲ್ಲಿ ಪಾಕಿಸ್ಥಾನ ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಪಾಕಿಸ್ಥಾನ ನಮಗೆ ಪಾಠ ಮಾಡುವುದನ್ನು ನಿಲ್ಲಿಸಬೇಕು; ನಮ್ಮ ಪ್ರಜಾಸತ್ತೆಯ ಬಗ್ಗೆ ನಮಗೆ ಹೆಮ್ಮೆ ಇದೆ’ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಕೂಡ ಪಾಕಿಗೆ ಬುದ್ದಿವಾದ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು
MUST WATCH
ಹೊಸ ಸೇರ್ಪಡೆ
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ