ಬಿಹಾರ ನೀರಾವರಿ ಜೂನಿಯರ್ ಇಂಜಿನಿಯರ್ಗೆ ಗುಂಡಿಟ್ಟು ಹತ್ಯೆ
Team Udayavani, Dec 12, 2017, 3:25 PM IST
ಪಟ್ನಾ : ರಾಜಧಾನಿಯಲ್ಲಿನ ತನ್ನ ಮನೆಗೆ ಮರಳುತ್ತಿದ್ದ ಬಿಹಾರ ನೀರಾವರಿ ಇಲಾಖೆಯ ಜೂನಿಯರ್ ಇಂಜಿನಿಯರ್ ವೀರಮಣಿ ಕುಮಾರ್ ಎಂಬವರನ್ನು ಅಪರಿಚಿತ ದುಷ್ಕರ್ಮಿಗಳು ಶರಣ್ ಜಿಲ್ಲೆಯಲ್ಲಿ ಗುಂಡಿಕ್ಕಿ ಸಾಯಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವೀರಮಣಿ ಕುಮಾರ್ ಅವರನ್ನು ನೆರೆಯ ವೈಶಾಲಿ ಜಿಲ್ಲೆಯ ಹಾಜಿಪುರದಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಅವರನ್ನು ನಿನ್ನೆ ಮಂಗಳವಾರ ತಡರಾತ್ರಿ ಸೋನೆಪುರ ಪೊಲೀಸ್ ಠಾಣೆ ವ್ಯಾಪ್ತಿ ಪ್ರದೇಶದಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಸಾಯಿಸಿದರು.
ಕುಮಾರ್ ಅವರು ಪಟ್ನಾದ ಕುರ್ಜಿ ಪ್ರದೇಶದಲ್ಲಿ ವಾಸವಾಗಿದ್ದರು. ಕಾರಿನಲ್ಲಿ ಬರುತ್ತಿದ್ದ ಅವರ ಮೇಲೆ ದುಷ್ಕರ್ಮಿಗಳು ಗುಂಡೆಸೆದು ಸಾಯಿಸಿದರು ಎಂದು ಶರಣ್ ಪೊಲೀಸ್ ಸುಪರಿಂಟೆಂಡೆಂಟ್ ಹರ್ಕಿಶೋರ್ ರಾಯ್ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಕುಮಾರ್ ಅವರು ಆಸ್ತಿ ಸಂಬಂಧಿತ ವಿವಾದದಲ್ಲಿ ಸಿಲುಕಿದ್ದು ಪಟ್ನಾ ಪೊಲೀಸ್ ಠಾಣೆಯೊಂದರಲ್ಲಿ ಕೇಸ್ ದಾಖಲಾಗಿತ್ತು ಎಂದು ರಾಯ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!