ದಾಳಿಯನ್ನು ಸೆರೆಹಿಡಿದಿದ್ದು 16 ವರ್ಷದ ಜೈಶ್ ಉಗ್ರ!
Team Udayavani, Jan 2, 2018, 8:30 AM IST
ಹೊಸದಿಲ್ಲಿ: ಶುಕ್ರವಾರ ರಾತ್ರಿ ಐವರು ಯೋಧರ ಸಾವಿಗೆ ಕಾರಣವಾದ ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿನ ಸಿಆರ್ಪಿಎಫ್ ಶಿಬಿರದ ಮೇಲಿನ ಉಗ್ರರ ದಾಳಿ ಕುರಿತ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆಘಾತಕಾರಿ ಮಾಹಿತಿಯೊಂದು ಹೊರಬಿದ್ದಿದೆ. ಅದೇನೆಂದರೆ, ಭಯೋತ್ಪಾದಕರು ನಡೆಸಿದ ಈ ದಾಳಿಯ ವಿಡಿಯೋವನ್ನು ಸೆರೆಹಿಡಿದಿದ್ದು 16 ವರ್ಷದ ಬಾಲಕ!
ಹೌದು, ಇತ್ತೀಚೆಗಷ್ಟೇ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರ್ಪಡೆಯಾಗಿರುವ ಫರ್ದೀನ್ ಅಹ್ಮದ್ ಕಣಿವೆ ರಾಜ್ಯದ ಪೊಲೀಸ್ ಅಧಿಕಾರಿಯೊಬ್ಬರ ಪುತ್ರ. ಸಿಆರ್ಪಿಎಫ್ ಕ್ಯಾಂಪ್ ಮೇಲೆ ದಾಳಿ ಆಗುವ ಸ್ವಲ್ಪ ಹೊತ್ತಿಗೆ ಮುಂಚೆ ಈತನೇ ವಿಡಿಯೋವೊಂದನ್ನು ರೆಕಾರ್ಡ್ ಮಾಡಿದ್ದು, ದಾಳಿ ನಡೆಯುವ ಮಾಹಿತಿಯನ್ನೂ, ಹೇಗೆ ನಡೆಯುತ್ತದೆ ಎಂಬ ವಿವರವನ್ನೂ ನೀಡಿದ್ದಾನೆ. ಅಷ್ಟೇ ಅಲ್ಲ, “ದೇವರ ಇಚ್ಛೆಯಂತೆ, ಈ ಸಂದೇಶವು ನಿಮ್ಮನ್ನು ತಲುಪುವಾಗ ನಾನು ಸ್ವರ್ಗದಲ್ಲಿ ದೇವರ ಅತಿಥಿಯಾಗಿರುತ್ತೇನೆ,’ ಎಂದೂ, “ಯುವ ಜನರು ಜೈಶ್ಗೆ ಸೇರಬೇಕು’ ಎಂದೂ ವಿಡಿಯೋದಲ್ಲಿ ಹೇಳಿದ್ದಾನೆ. ನಂತರ ಈತನೂ ಸೇನೆಯ ಗುಂಡಿಗೆ ಬಲಿಯಾಗಿದ್ದಾನೆ. ಆತ್ಮಾಹುತಿ ದಾಳಿಕೋರನೊಬ್ಬ ದಾಳಿಗೆ ಮುಂಚೆ ಈ ರೀತಿ ವಿಡಿಯೋ ಮಾಡಿಕೊಂಡಿರುವುದು ಇದೇ ಮೊದಲು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜತೆಗೆ, ವಿಡಿಯೋದ ವಿಶ್ಲೇಷಣೆಯೂ ನಡೆಯುತ್ತಿದೆ.
ಕಣಿವೆ ರಾಜ್ಯದಲ್ಲಿ ಯುವಕರು ಉಗ್ರ ಸಂಘಟನೆಯತ್ತ ಆಕರ್ಷಿತರಾಗದಂತೆ ಇತ್ತೀಚೆಗೆ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅನೇಕ ಸ್ಥಳೀಯ ಯುವಕರನ್ನು ತಮ್ಮ ಕುಟುಂಬಗಳಿಗೆ ವಾಪಸ್ ಕರೆತರಲಾಗಿದೆ. ಇಂತಹುದೊಂದು ಸಕಾರಾತ್ಮಕ ಕೆಲಸ ನಡೆಯುತ್ತಿದ್ದರೂ, 16ರ ಬಾಲಕನೊಬ್ಬ ಉಗ್ರನಾಗಿ ಪರಿವರ್ತನೆಗೊಂಡಿರುವುದು ಅತ್ಯಂತ ಕಳವಳಕಾರಿ ಸಂಗತಿ ಎಂದು ಪೊಲೀಸರು ಅಭಿಪ್ರಾಯಪಟ್ಟಿದ್ದಾರೆ.
ಮೂರನೇ ಉಗ್ರನ ಮೃತದೇಹ ಪತ್ತೆ
ಸಿಆರ್ಪಿಎಫ್ ಶಿಬಿರದ ಮೇಲೆ ದಾಳಿ ನಡೆಸಿದ ಉಗ್ರರನ್ನು ನಿಗ್ರಹಿಸುವ ಕಾರ್ಯಾಚರಣೆ ಸೋಮವಾರದವರೆಗೂ ಮುಂದುವರಿದಿತ್ತು. ಸಂಜೆ ವೇಳೆಗೆ ಅದು ಅಂತ್ಯಗೊಂಡಿದ್ದು, ಶೋಧ ಕಾರ್ಯವೂ ಪೂರ್ಣಗೊಂಡಿದೆ. ರವಿವಾರದ ಕಾರ್ಯಾಚರಣೆಯಲ್ಲಿ ಹತ್ಯೆಗೀಡಾಗಿದ್ದ 3ನೇ ಉಗ್ರನ ಮೃತದೇಹ ಸೋಮವಾರ ಪತ್ತೆಯಾಗಿದೆ. ಮೂವರು ಉಗ್ರರನ್ನೂ ಹೊಡೆದುರುಳಿಸಲಾಗಿ ತ್ತಾದರೂ, ಒಬ್ಬನ ಮೃತದೇಹ ಸಿಕ್ಕಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ