ಜಾತಿ, ಮತ ಭೇದ ಬಿಟ್ಟು ಒಂದಾಗಿ: ಭಾಗವತ್ ಕರೆ
Team Udayavani, Jan 6, 2018, 10:30 AM IST
ಉಜ್ಜಯಿನಿ: ಭಾರತದ ನಾಗರಿಕರು ಜಾತಿ, ಮತ, ವಿಚಾರ ಭೇದ ಮರೆತು ತಾಯ್ನಾಡಿಗಾಗಿ ಒಂದಾಗಬೇಕೆಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿನ ಹಿಂಸಾಚಾರದ ಬೆನ್ನಲ್ಲೇ ಭಾಗವತ್ ನೀಡಿರುವ ಈ ಹೇಳಿಕೆ ಹೆಚ್ಚು ಮಹತ್ವ ಪಡೆದುಕೊಂಡಿದೆ. ಉಜ್ಜಯಿನಿಯಲ್ಲಿ ಶುಕ್ರವಾರ ಭಾರತ ಮಾತೆಯ 16 ಅಡಿ ಪ್ರತಿಮೆ ಉದ್ಘಾಟಿಸಿ ಮಾತನಾಡಿದ ಅವರು, “ಭಾರತ ಕೇವಲ ಭೂಮಿಯ ತುಣುಕಲ್ಲ. ಇದು ಎಲ್ಲಕ್ಕೂ ಮಿಗಿಲಾದದ್ದು. ಹಾಗಾಗಿ, ನಮ್ಮ ಗುರಿ ತಾಯ್ನೆಲದ ರಕ್ಷಣೆಗಾಗಿಯೇ ಇರಬೇಕು. ಜಾತಿವಾದ, ಈರ್ಷ್ಯೆಗಳಿಂದ ಹೊರಬರಬೇಕು” ಎಂದರು. ಡಿಎಂಕೆ ಸಂಸ್ಥಾಪಕ ಅಣ್ಣಾದುರೈ ಅವರನ್ನು ನೆನೆದ ಭಾಗವತ್, “ಹಿಂದೊಮ್ಮೆ ಅಣ್ಣಾದುರೈ ತಮಿಳುನಾಡನ್ನು ಪ್ರತ್ಯೇಕ ದೇಶವೆಂದು ಘೋಷಿಸಿಕೊಂಡಿದ್ದರು. ಆದರೆ, 1962ರಲ್ಲಿ ಚೀನ, ಭಾರತದ ಮೇಲೆ ಆಕ್ರಮಣ ಮಾಡಿದಾಗ ನಿಲುವು ಬದಲಿಸಿ ಭಾರತದ ಬೆಂಬಲಕ್ಕೆ ನಿಂತರು. ಇದೇ ನಿಜವಾದ ರಾಷ್ಟ್ರೀಯತೆ” ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು