ಜಾತಿ, ಮತ ಭೇದ ಬಿಟ್ಟು ಒಂದಾಗಿ: ಭಾಗವತ್ ಕರೆ
Team Udayavani, Jan 6, 2018, 10:30 AM IST
ಉಜ್ಜಯಿನಿ: ಭಾರತದ ನಾಗರಿಕರು ಜಾತಿ, ಮತ, ವಿಚಾರ ಭೇದ ಮರೆತು ತಾಯ್ನಾಡಿಗಾಗಿ ಒಂದಾಗಬೇಕೆಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿನ ಹಿಂಸಾಚಾರದ ಬೆನ್ನಲ್ಲೇ ಭಾಗವತ್ ನೀಡಿರುವ ಈ ಹೇಳಿಕೆ ಹೆಚ್ಚು ಮಹತ್ವ ಪಡೆದುಕೊಂಡಿದೆ. ಉಜ್ಜಯಿನಿಯಲ್ಲಿ ಶುಕ್ರವಾರ ಭಾರತ ಮಾತೆಯ 16 ಅಡಿ ಪ್ರತಿಮೆ ಉದ್ಘಾಟಿಸಿ ಮಾತನಾಡಿದ ಅವರು, “ಭಾರತ ಕೇವಲ ಭೂಮಿಯ ತುಣುಕಲ್ಲ. ಇದು ಎಲ್ಲಕ್ಕೂ ಮಿಗಿಲಾದದ್ದು. ಹಾಗಾಗಿ, ನಮ್ಮ ಗುರಿ ತಾಯ್ನೆಲದ ರಕ್ಷಣೆಗಾಗಿಯೇ ಇರಬೇಕು. ಜಾತಿವಾದ, ಈರ್ಷ್ಯೆಗಳಿಂದ ಹೊರಬರಬೇಕು” ಎಂದರು. ಡಿಎಂಕೆ ಸಂಸ್ಥಾಪಕ ಅಣ್ಣಾದುರೈ ಅವರನ್ನು ನೆನೆದ ಭಾಗವತ್, “ಹಿಂದೊಮ್ಮೆ ಅಣ್ಣಾದುರೈ ತಮಿಳುನಾಡನ್ನು ಪ್ರತ್ಯೇಕ ದೇಶವೆಂದು ಘೋಷಿಸಿಕೊಂಡಿದ್ದರು. ಆದರೆ, 1962ರಲ್ಲಿ ಚೀನ, ಭಾರತದ ಮೇಲೆ ಆಕ್ರಮಣ ಮಾಡಿದಾಗ ನಿಲುವು ಬದಲಿಸಿ ಭಾರತದ ಬೆಂಬಲಕ್ಕೆ ನಿಂತರು. ಇದೇ ನಿಜವಾದ ರಾಷ್ಟ್ರೀಯತೆ” ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…
MUST WATCH
ಹೊಸ ಸೇರ್ಪಡೆ
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ