ಉಗ್ರ ದಾಳಿ: ನಾಲ್ವರು ಪೊಲೀಸರು ಹುತಾತ್ಮ


Team Udayavani, Jan 7, 2018, 6:00 AM IST

terror.jpg

ಶ್ರೀನಗರ: ಉತ್ತರ ಕಾಶ್ಮೀರದ ಸೋಪೋರ್‌ನಲ್ಲಿ ಉಗ್ರರು ಹೂತಿಟ್ಟಿದ್ದ ಐಇಡಿ(ಸುಧಾರಿತ ಸ್ಫೋಟಕ) ಸ್ಫೋಟಗೊಂಡ ಪರಿಣಾಮ ನಾಲ್ವರು ಪೊಲೀಸರು ಹುತಾತ್ಮರಾದ ಘಟನೆ ಶನಿವಾರ ನಡೆದಿದೆ. ಸ್ಫೋಟದ ಹೊಣೆಯನ್ನು ಜೈಶ್‌-ಎ- ಮೊಹಮ್ಮದ್‌ ಉಗ್ರ ಸಂಘಟನೆ ಹೊತ್ತುಕೊಂಡಿದೆ.

ಬಾರಾಮುಲ್ಲಾ ಜಿಲ್ಲೆಯ ಸೋಪೋರ್‌ನಲ್ಲಿ ಛೋಟಾ ಬಜಾರ್‌ನಿಂದ ಬಡಾ ಬಜಾರ್‌ಗೆ ಹೋಗುವ ದಾರಿಯಲ್ಲಿ ಮಾರ್ಗ ಮಧ್ಯೆಯೇ ಐಇಡಿ ಹೂತಿಡಲಾಗಿತ್ತು. ಶನಿವಾರ ಗಸ್ತು ಪಡೆಯ ವಾಹನದಲ್ಲಿ ಅಲ್ಲಿ ತಲುಪುತ್ತಿದ್ದಂತೆಯೇ, ಬಾಂಬ್‌ ಸ್ಫೋಟಗೊಂಡು ನಾಲ್ವರು ಪೊಲೀಸರು ಹುತಾತ್ಮರಾಗಿದ್ದಾರೆ. ಪ್ರತ್ಯೇಕತಾವಾದಿಗಳು ಮುಷ್ಕರಕ್ಕೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಪೊಲೀಸರು ಇಲ್ಲಿ ಗಸ್ತು ತಿರುಗುತ್ತಿದ್ದರು. ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಜಮ್ಮು-ಕಾಶ್ಮೀರ ಸಿಎಂ ಮೆಹಬೂಬಾ ಮುಫ್ತಿ, “ರಾಜ್ಯದಲ್ಲಿನ ಉಗ್ರರ ಜಾಲವನ್ನು ನಿರ್ಮೂಲನೆ ಮಾಡಲು ಪ್ರತಿಯೊಬ್ಬರು ಹೆಗಲಿಗೆ ಹೆಗಲು ಕೊಟ್ಟು ಶ್ರಮಿಸಬೇಕು’ ಎಂದಿದ್ದಾರೆ. ಜತೆಗೆ, ಹುತಾತ್ಮರಾದ ಪೊಲೀಸರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.

5,390 ಬಂಕರ್‌ ನಿರ್ಮಾಣ: ಇದೇ ವೇಳೆ, ಗಡಿಯಲ್ಲಿ ಆಗಾಗ್ಗೆ ಪಾಕ್‌ ಕಡೆಯಿಂದ ಗುಂಡಿನ ದಾಳಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಗಡಿ ಗ್ರಾಮದಲ್ಲಿರುವ ಸುಮಾರು 54 ಸಾವಿರ ನಿವಾಸಿಗಳಿಗೆ ಸುರಕ್ಷಿತ ವಸತಿ ವ್ಯವಸ್ಥೆ ಕಲ್ಪಿಸಲು ಸರಕಾರ ನಿರ್ಧರಿಸಿದೆ. ಅದರಂತೆ, ರಜೌರಿ ಜಿಲ್ಲೆಯಲ್ಲಿ 5,390 ವೈಯಕ್ತಿಕ ಮತ್ತು ಸಮುದಾಯ ಬಂಕರ್‌ಗಳನ್ನು ನಿರ್ಮಿಸಲಾಗುತ್ತದೆ. ಈಗಾಗಲೇ 100 ಬಂಕರ್‌ಗಳಿದ್ದು, ಹೆಚ್ಚುವರಿಯಾಗಿ 4,918 ವೈಯಕ್ತಿಕ ಬಂಕರ್‌ಗಳು ಮತ್ತು 372 ಕಮ್ಯೂನಿಟಿ ಬಂಕರ್‌ಗಳನ್ನು ನಿರ್ಮಿಸಲಾಗುತ್ತದೆ.  ಬಂಕರ್‌ 800 ಚ.ಅಡಿ. ವಿಸ್ತೀರ್ಣವಿದ್ದು, ಇದರಲ್ಲಿ 40 ಮಂದಿ ವಾಸಿಸಬಹುದಾಗಿದೆ ಎಂದು ರಜೌರಿಯ ಜಿಲ್ಲಾ ಅಭಿವೃದ್ಧಿ ಆಯುಕ್ತ  ಇಕ್ಬಾಲ್‌ ಚೌಧರಿ ತಿಳಿಸಿದ್ದಾರೆ.

ಸಿಮ್‌ಗೆ ಸೇನೆಯ ನಕಲಿ ದಾಖಲೆ!
ಸೇನೆಯ ನಕಲಿ ಸ್ಟಾಂಪ್‌ ಮತ್ತು ದಾಖಲೆಗಳನ್ನು ಬಳಸಿ ಸಿಮ್‌ ಕಾರ್ಡ್‌ ಪಡೆದುಕೊಂಡು, ಅದನ್ನು ಉಗ್ರರಿಗೆ ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಜಮ್ಮು-ಕಾಶ್ಮೀರ ಪೊಲೀಸರು ಶನಿವಾರ ಪತ್ತೆಹಚ್ಚಿದ್ದಾರೆ. ಈ ದಂಧೆಯಲ್ಲಿ ತೊಡಗಿದ್ದ 6 ಮಂದಿಯನ್ನು ಬಂಧಿಸಲಾಗಿದೆ. ಸೇನಾ ಗುಪ್ತಚರದ ಮಾಹಿತಿಯ ಆಧಾರದಲ್ಲಿ ತನಿಖೆ ನಡೆಸಿದಾಗ ಈ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ನೂರಾರು ಸಿಮ್‌ಗಳನ್ನು ಆರೋಪಿಗಳು ಈಗಾಗಲೇ ಮಾರಾಟ ಮಾಡಿದ್ದಾರೆ. ಈ ಹಿಂದೆ ಯೂ ಉತ್ತರ ಕಾಶ್ಮೀರದಲ್ಲಿ ಇಂಥ ಜಾಲ ಕಾರ್ಯನಿರ್ವಹಿಸುತ್ತಿತ್ತು. ಇವರು ಮಾರಿದ ಸಿಮ್‌ ಅನ್ನು ಉಗ್ರರು ಐಇಡಿ ಸ್ಫೋಟಕ್ಕೆ ಬಳಸುತ್ತಿದ್ದುದೂ ಬಯಲಾಗಿತ್ತು. 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.