ರಿಜ್ವಿಗೆ ಪಾತಕಿ ದಾವೂದ್ ಬೆದರಿಕೆ ಕರೆ
Team Udayavani, Jan 15, 2018, 6:05 AM IST
ಲಕ್ನೋ: ಉತ್ತರಪ್ರದೇಶ ಶಿಯಾ ವಕ್ಫ್ ಮಂಡಳಿಯ ಅಧ್ಯಕ್ಷ ವಾಸಿಂ ರಿಜ್ವಿ ಅವರಿಗೆ ಭೂಗತ ಪಾತಕಿ ದಾವೂದ್ ಇಬ್ರಾಹಿಂನಿಂದ ಬೆದರಿಕೆ ಕರೆ ಬಂದಿದೆ ಎಂದು ಅವರು ಆರೋಪಿಸಿದ್ದಾರೆ. ಶನಿವಾರ ರಾತ್ರಿ ವ್ಯಕ್ತಿಯೊಬ್ಬ ಕರೆ ಮಾಡಿದ್ದು, ತನ್ನನ್ನು ತಾನು ದಾವೂದ್ನ ಸಹಚರ ಎಂದು ಹೇಳಿಕೊಂಡಿದ್ದಲ್ಲದೆ, ನಿನ್ನನ್ನು ಮತ್ತು ನಿನ್ನ ಕುಟುಂಬವನ್ನು ಇಲ್ಲವಾಗಿಸುತ್ತೇವೆ ಎಂದು ಬೆದರಿಕೆ ಹಾಕಿದ್ದಾಗಿ ರಿಜ್ವಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಮದರಸಾಗಳಲ್ಲಿ ಭಯೋತ್ಪಾದಕರನ್ನು ಹುಟ್ಟುಹಾಕಲಾಗುತ್ತಿದೆ. ಹಾಗಾಗಿ, ದೇಶದಲ್ಲಿನ ಮದರಸಾಗಳನ್ನು ಮುಚ್ಚಬೇಕು ಎಂದು ಕೋರಿ ಪ್ರಧಾನಿ ಮೋದಿ ಅವರಿಗೆ ರಿಜ್ವಿ ಪತ್ರ ಬರೆದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ರಿಜ್ವಿ ಅವರ ದೂರಿನ ಆಧಾರದಲ್ಲಿ ಲಕ್ನೋ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಭಾನುವಾರ ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ ರಿಜ್ವಿ, “ಮದರಸಾ ಶಿಕ್ಷಣದ ವಿರುದ್ಧ ನೀಡಿದ ಹೇಳಿಕೆಯಿಂದ ದಾವೂದ್ ಆಕ್ರೋಶಗೊಂಡಿದ್ದಾರೆ. ಕೂಡಲೇ ನೀವು ಮೌಲಾನಾಗಳ ಕ್ಷಮೆ ಕೋರಬೇಕು. ಇಲ್ಲದಿದ್ದರೆ, ನೀವು ಮತ್ತು ನಿಮ್ಮ ಕುಟುಂಬವನ್ನು ಕೊಲ್ಲುತ್ತೇವೆ,’ ಎಂದು ಕರೆ ಮಾಡಿದ ವ್ಯಕ್ತಿ ಬೆದರಿಸಿದ್ದಾನೆ ಎಂದು ಹೇಳಿದ್ದಾರೆ.
ಕಳೆದ ವಾರವಷ್ಟೇ ಮದರಸಾಗಳನ್ನು ಮುಚ್ಚು ವಂತೆ ಕೋರಿ ರಿಜ್ವಿ ಅವರು ಪ್ರಧಾನಿ ಮೋದಿ ಹಾಗೂ ಸಿಎಂ ಯೋಗಿಗೆ ಪತ್ರ ಬರೆದಿದ್ದರು. ಅದಕ ೂR ಮೊದಲು ಅವರು ಅಯೋಧ್ಯೆಯ ವಿವಾದಿತ ಜಾಗದಲ್ಲಿ ಮಂದಿರವೇ ನಿರ್ಮಾಣ ವಾಗಲಿ, ಮಸೀದಿಯನ್ನು ಲಕ್ನೋದಲ್ಲಿ ನಿರ್ಮಿಸಿ ಎಂದು ಹೇಳಿದ್ದರು. ಈ ಕುರಿತ ತಮ್ಮ ನಿಲುವನ್ನು ಬೆಂಗಳೂರಿಗೆ ಬಂದು ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರಿಗೂ ಅರಿಕೆ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ