ವಿವಿಗಳಿಗೆ ನಿಧಿ ಸಂಗ್ರಹ ಸ್ವಾತಂತ ನೀಡಲು ಆಗ್ರಹ
Team Udayavani, Jan 17, 2018, 6:15 AM IST
ನವದೆಹಲಿ: ವಿಶ್ವವಿದ್ಯಾಲಯಗಳು ಇತರ ಮಾದರಿಯಲ್ಲಿ ನಿಧಿ ಸಂಗ್ರಹಿಸಲು ಕೇಂದ್ರ ಅನುವು ಮಾಡಿಕೊಡಬೇಕು. ಜತೆಗೆ ಉನ್ನತ ಶಿಕ್ಷಣದಲ್ಲಿ ಲಾಭದ ಉದ್ದೇಶವಿಲ್ಲದ ಕಂಪನಿಗಳ ಮೂಲಕ ಹಣ ಸಂಗ್ರಹಿಸಲು ಅನುಮತಿ ನೀಡಬೇಕು ಎಂದು ಕರ್ನಾಟಕ ಸರ್ಕಾರ ಒತ್ತಾಯಿಸಿದೆ. ನವದೆಹಲಿಯಲ್ಲಿ ಮಂಗಳವಾರ ಮುಕ್ತಾಯವಾದ ಶಿಕ್ಷಣಕ್ಕಾಗಿ ಕೇಂದ್ರ ಸಲಹಾ ಮಂಡಳಿ (ಸಿಎಬಿಇ)ಸಭೆಯಲ್ಲಿ ಕರ್ನಾಟಕದ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಈ ಒತ್ತಾಯ ಮಾಡಿದ್ದಾರೆ. ಜತೆಗೆ ದೇಶದ ಪ್ರತಿ ರಾಜ್ಯದಲ್ಲಿಯೂ ಕೌಶಲ ವಿಶ್ವವಿದ್ಯಾನಿಲಯ (ಸ್ಕಿಲ್ ಯುನಿವರ್ಸಿಟಿ) ಆರಂಭಿಸುವ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ಮಾಡಿದ್ದಾರೆ.
ಉನ್ನತ ಶಿಕ್ಷಣಕ್ಕೆ ನೀಡುತ್ತಿರುವ ಹಣಕಾಸಿನ ನೆರವನ್ನು ಮುಂದಿನ ದಿನಗಳಲ್ಲಿ ಹೆಚ್ಚಿಸಬೇಕು. ವಿವಿಗಳಿಗೆ ಹಾಲಿ ಇರುವ ಹಣಕಾಸಿನ ಸ್ವಾತಂತ್ರ್ಯದ ಮಿತಿಯನ್ನು ಹೆಚ್ಚಿಸಬೇಕು ಎಂಬ ಅಂಶವನ್ನು ರಾಯರೆಡ್ಡಿ ಪ್ರತಿಪಾದಿಸಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೆರವು ನೀಡುವ ವಿವಿಗಳ ನಡುವೆ ಯಾವುದೇ ರೀತಿಯಲ್ಲಿ ತಾರತಮ್ಯ ಉಂಟಾಗಬಾರದು ಎಂದು ಸಲಹೆ ನೀಡಿದ್ದಾರೆ.
ಆನ್ಲೈನ್ ಕೋರ್ಸ್ಗಳು: ಈ ನಡುವೆ ಮತ್ತೂಂದು ಮಹತ್ವದ ಬೆಳವಣಿಗೆಯಲ್ಲಿ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ (ನ್ಯಾಕ್)ಯಿಂದ ಎ ಪ್ಲಸ್ ಮತ್ತು ಎ ಪ್ಲಸ್ ಪ್ಲಸ್ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಗಳು ಮೂರು ವರ್ಷಗಳ ಪದವಿ ಶಿಕ್ಷಣವನ್ನು ಆನ್ಲೈನ್ನಲ್ಲಿ ನೀಡಲಿವೆ. ಅವುಗಳನ್ನು ಇತರ ಸಾಮಾನ್ಯ ಪದವಿಯಂತೆಯೇ ಪರಿಗಣಿಸಲಾಗುತ್ತದೆ. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಈ ಬಗ್ಗೆ ನಿಯಮಗಳನ್ನು ಸಿದ್ಧಪಡಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ