ಆಧಾರ್ನಿಂದ ಪೌರ ಹಕ್ಕುಗಳ ಅವಸಾನ: ಸುಪ್ರೀಂನಲ್ಲಿ ವಾದ
Team Udayavani, Jan 17, 2018, 4:25 PM IST
ಹೊಸದಿಲ್ಲಿ : ಆಧಾರ್ ಅಂಕಿ ಅಂಶಗಳನ್ನು ಹಂಚಿ ಕೊಳ್ಳುವ ಮೂಲಕ ನಾಗರಿಕರ ಪೌರ ಹಕ್ಕುಗಳ ಅವಸಾನವಾಗುತ್ತದೆ ಎಂದು ಸರ್ವೋಚ್ಚ ನ್ಯಾಯಾಲಯದಲ್ಲಿಂದು ಆಧಾರ್ ಕುರಿತ ವಿಚಾರಣೆಯಲ್ಲಿ ಅರ್ಜಿದಾರರನ್ನು ಪ್ರತಿನಿಧಿಸಿದ ಸುಪ್ರೀಂ ಕೋರ್ಟ್ ವಕೀಲ ಶ್ಯಾಮ್ ದಿವಾನ್ ವಾದಿಸಿದರು.
ಆಧಾರ್ ನಂಬರನ್ನು ಸರಕಾರದ ವಿವಿಧ ಜನ ಕಲ್ಯಾಣ ಯೋಜನೆಗಳಿಗೆ ಲಿಂಕ್ ಮಾಡುವಲ್ಲಿನ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಲಾದ ಅರ್ಜಿಗಳ ವಿಚಾರಣೆಯನ್ನು ಇಂದು ಬುಧವಾರ ಸುಪ್ರೀಂ ಕೋರ್ಟ್ ಕೈಗೆತ್ತಿಕೊಂಡಿದೆ.
“ಆಧಾರ್ ನಾಗರಿಕರ ಪೌರ ಹಕ್ಕುಗಳನ್ನು ಸಾಯಿಸುತ್ತದೆ; ಜನರ ಸಂವಿಧಾನವನ್ನು ಇದು ಸರಕಾರದ ಸಂವಿಧಾನವನ್ನಾಗಿ ಮಾರ್ಪಡಿಸುತ್ತದೆ’ ಎಂದು ಶ್ಯಾಮ್ ದಿವಾನ್ ಹೇಳಿದರು.
ಆಧಾರ್ ಸಾಂವಿಧಾನಿಕ ಸಿಂಧುತ್ವ ಕುರಿತ ವಿಚಾರಣೆಯನ್ನು ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಸುಪ್ರೀಂ ಕೋರ್ಟಿನ ಸಂವಿಧಾನ ಪೀಠವು ನಡೆಸುತ್ತಿದೆ. ಈ ಪೀಠದಲ್ಲಿ ವರಿಷ್ಠ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾ. ಎ ಎಂ ಖಾನ್ವಿಲ್ಕರ್, ನ್ಯಾ. ಆದರ್ಶ್ ಕುಮಾರ್ ಸಿಕ್ರಿ, ನ್ಯಾ. ಡಿ ವೈ ಚಂದ್ರಚೂಡ್ ಮತ್ತು ನ್ಯಾ. ಅಶೋಕ್ ಭೂಷಣ್ ಇದ್ದಾರೆ.
ಜನರ ಖಾಸಗಿತನವನ್ನು ಉಲ್ಲಂಘನೆ ಮಾಡುವ ರೀತಿಯಲ್ಲಿ ಆಧಾರ್ ಅಂಕಿ ಅಂಶ ಸೋರಿಕೆಯಾಗಿರುವ ಬಗ್ಗೆ ಹಲವಾರು ಸಂದೇಹಗಳಿವೆ. ಆಧಾರ್ ನಂಬರನ್ನು ಮೊಬೈಲ್ ಫೋನ್ಗಳಿಗೆ, ಬ್ಯಾಂಕ್ ಖಾತೆಗಳಿಗೆ ಮತ್ತು ಇತರ ಸರಕಾರಿ ಸೇವಾ ಸೌಲಭ್ಯಗಳ ಯೋಜನೆಗೆ ಜೋಡಿಸುವುದಕ್ಕೆ ಈ ಹಿಂದೆ ನಿಗದಿಯಾಗಿದ್ದ ಅಂತಿಮ ದಿನವನ್ನು 2018ರ ಮಾರ್ಚ್ 31ಕ್ಕೆ ವಿಸ್ತರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
MUST WATCH
ಹೊಸ ಸೇರ್ಪಡೆ
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ