ಆಧಾರ್ನಿಂದ ಮೂಲ ಹಕ್ಕುಗಳಿಗೆ ಕುತ್ತು
Team Udayavani, Jan 18, 2018, 10:29 AM IST
ಹೊಸದಿಲ್ಲಿ: “ಆಧಾರ್ನಿಂದಾಗಿ ದೇಶದ ನಾಗರಿಕರ ಮೂಲಭೂತ ಹಕ್ಕುಗಳೇ ಸಾಯಬಹುದು. ಅದೊಂದು ದೊಡ್ಡ ಇಲೆಕ್ಟ್ರಾನಿಕ್ ಜಾಲ ಇದ್ದಂತೆ. ಅದರ ಮೂಲಕ ನಾಗರಿಕರ ಮೇಲೆ ನಿಗಾ ಇರಿಸಲು ಪ್ರಯತ್ನಿಸಲಾಗುತ್ತದೆ’. ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಯೋಜನೆಗಳಿಗೆ ಆಧಾರ್ ಲಿಂಕ್ ಮಾಡುವುದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದವರ ಪರ ವಾದ ಮಂಡಿಸಿದ ಖ್ಯಾತ ನ್ಯಾಯವಾದಿ ಶ್ಯಾಮ್ ದಿವಾನ್ ಈ ರೀತಿಯ ವಾದ ಮಂಡಿಸಿದ್ದಾರೆ.
ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಸಾಂವಿಧಾನಿಕ ಪೀಠದಲ್ಲಿ ಆಧಾರ್ ಲಿಂಕ್ ಮಾಡುವ ಬಗ್ಗೆ ಅಂತಿಮ ವಿಚಾರಣೆ ನಡೆಸುತ್ತಿದೆ. ನ್ಯಾಯಮೂರ್ತಿ ಗಳಾದ ಎ.ಎಂ.ಖಾನ್ವಿಲ್ಕರ್, ಆದರ್ಶ ಕುಮಾರ್ ಸಿಕ್ರಿ, ಡಿ.ವೈ.ಚಂದ್ರಚೂಡ್ ಮತ್ತು ಅಶೋಕ್ ಭೂಷಣ್ ಪೀಠದಲ್ಲಿರುವ ಇತರ ನ್ಯಾಯಮೂರ್ತಿಗಳು.
ವಿಚಾರಣೆಯ ಒಂದು ಹಂತದಲ್ಲಿ ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಸರಕಾರ ಆಧಾರ್ ಕಾರ್ಡ್ ಹೊಂದುವುದು ಕಡ್ಡಾಯ ಮಾಡಿದರೆ ಹೇಗಿರುತ್ತದೆ ಎಂದು ನ್ಯಾ| ಡಿ.ವೈ.ಚಂದ್ರಚೂಡ್ ಪ್ರಶ್ನೆ ಮಾಡಿ ದಾಗ ಶ್ಯಾಮ್ ದಿವಾನ್ ಅವರು “ಸಮಾಜ ದಲ್ಲಿರುವ ಎಲ್ಲರೂ ಅದನ್ನು ಹೊಂದಲೇ ಬೇಕಾಗುತ್ತದೆ. ಆದರೆ ಒತ್ತಡದಿಂದ ಯೋಜನೆ ಜಾರಿಗೊಳಿಸಿದರೆ ಅದು ನಿಗಾ ಇರಿಸುವ ಸರಕಾರವಾಗುತ್ತದೆ ಮತ್ತು ನಿರಂಕುಶ ಪ್ರಭುತ್ವವಾಗುತ್ತದೆ’ ಎಂದರು ಶ್ಯಾಮ್ ದಿವಾನ್. ಜನರಿಗಾಗಿ ಇದ್ದ ಸಂವಿಧಾನ ಸರಕಾರದ ಸಂವಿಧಾನ ವಾಗುತ್ತದೆ ಎಂದರು. ವಾದ ಮಂಡನೆ ಗುರುವಾರವೂ ಮುಂದುವರಿಯಲಿದೆ.
ಸಿಜೆಐ- ನ್ಯಾಯಮೂರ್ತಿಗಳ ಭೇಟಿ ಇಂದು: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ದೀಪಕ್ ಮಿಶ್ರಾ ಮತ್ತು ಅವರ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ ನಾಲ್ವರು ನ್ಯಾಯಮೂರ್ತಿಗಳ ಭೇಟಿ ಬುಧವಾರ ನಡೆಯಲಿಲ್ಲ. ನ್ಯಾ| ಜಸ್ತಿ ಚಲಮೇಶ್ವರ್ ಅನಾರೋಗ್ಯದ ನಿಮಿತ್ತ ಸುಪ್ರೀಂ ಕೋರ್ಟ್ಗೆ ಬಂದಿರಲಿಲ್ಲ. ಹೀಗಾಗಿ, ಭೇಟಿ ಗುರುವಾರಕ್ಕೆ ಮುಂದೂಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ