ಮೋದಿ ಸರಕಾರದಿಂದ ಆಧಾರ್ ಕಡ್ಡಾಯ ಅಸ್ತ್ರ : ರಾಹುಲ್ ಟೀಕೆ
Team Udayavani, Jan 18, 2018, 10:57 AM IST
ಹೊಸದಿಲ್ಲಿ : ನಾಗರಿಕರ ಅಧಿಕಾರವನ್ನು ಕಿತ್ತುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರ ಆಧಾರ್ ಅನ್ನು ಕಡ್ಡಾಯ ಅಸ್ತ್ರವನ್ನಾಗಿ ಬಳಸುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಟೀಕಿಸಿದ್ದಾರೆ.
ಯುಪಿಎ ಸರಕಾರದಡಿ ಆಧಾರ್, ನಾಗರಿಕರನ್ನು ಶಕ್ತಗೊಳಿಸುವ ಸ್ವಯಂ ಪ್ರೇರಣೆಯ ಉಪಕರಣವಾಗಿತ್ತು. ಆದರೆ ಎನ್ಡಿಎ ಸರಕಾರದಡಿ ಆಧಾರ್ ನಾಗರಿಕರನ್ನು ನಿಶ್ಶಕ್ತೀಕರಿಸುವ ಕಡ್ಡಾಯ ಅಸ್ತ್ರವಾಗಿ ಬಳಕೆಯಾಗುತ್ತಿದೆ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.
ಆಧಾರ್ ನಂಬರನ್ನು ಬಳಕೆದಾರರು ತಮ್ಮ ಮೊಬೈಲ್ ಸಂಖ್ಯೆ, ಬ್ಯಾಂಕ್ ಖಾತೆ ಮತ್ತು ಸರಕಾರಿ ಯೋಜನೆಗಳಿಗೆ ಜೋಡಿಸುವುದು ಜನರಿಗೆ ಸಂವಿಧಾನದತ್ತ ಖಾಸಗಿತನದ ಮೂಲಭೂತ ಹಕ್ಕಿನ ಉಲ್ಲಂಘನೆ ಆಗುತ್ತದೆಯೇ ಎಂಬುದನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ಎತ್ತಿಕೊಂಡಿರುವ ನಡುವೆಯೇ ರಾಹುಲ್ ಗಾಂಧಿ ಆಧಾರ್ ಕುರಿತ ಮೋದಿ ಸರಕಾರದ ನಿಲುವನ್ನು ಕಟುವಾಗಿ ಟೀಕಿಸಿದ್ದಾರೆ.
ನಿನ್ನೆ ಬುಧವಾರದ ವಿಚಾರಣೆಯಲ್ಲಿ ವಾದ ಮಂಡಿಸಿದ ಅರ್ಜಿದಾರರ ಪರ ವಕೀಲರು, ಆಧಾರ್ನಿಂದ ಪೌರ ಹಕ್ಕುಗಳ ಅವಸಾನವಾಗುತ್ತದೆ ಎಂದು ವಾದಿಸಿದ್ದಾರೆ. ವಿಚಾರಣೆ ಇಂದು ಮುಂದುವರಿಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ