ಕಾಶಿನಾಥ್ ಅವರು ನನ್ನ ಪಾಲಿನ ದೇವರು: ಭಾವುಕರಾದ ಉಪೇಂದ್ರ
Team Udayavani, Jan 18, 2018, 3:14 PM IST
ಬೆಂಗಳೂರು: ‘ಕಾಶಿನಾಥ್ ಅವರು ನನ್ನ ಪಾಲಿನ ದೇವರು, ಅವರ ಮನೆ ನನ್ನ ಪಾಲಿಗೆ ದೇವಸ್ಥಾನ’ ಎಂದು ನಟ,ಕೆಪಿಜೆಪಿ ಸ್ಥಾಪಕ ಉಪೇಂದ್ರ ಕಣ್ಣೀರಿಟ್ಟಿದ್ದಾರೆ.
ಕಾಶಿನಾಥ್ ಅವರ ಪಾರ್ಥಿವ ಶರೀರ ಜಯನಗರದ ಮನೆಗೆ ತಂದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಉಪೇಂದ್ರ ತೀವ್ರ ಭಾವುಕರಾಗಿ ಕಣ್ಣೀರು ಸುರಿಸಿದರು.
‘ನಾನು ಚಿತ್ರರಂಗದ ಎಬಿಸಿಡಿ ಕಲಿತದ್ದು ಕಾಶಿನಾಥ್ ಅವರಲ್ಲಿ. ಅವರು ನನ್ನ ಪಾಲಿಗೆ ದೇವರು. ಅವರ ಮನೆಯಲ್ಲಿ ನನಗೆ ಊಟ ಹಾಕಿದ್ದಾರೆ. ಅವರೊಬ್ಬ ಮಹಾನ್ ವ್ಯಕ್ತಿ.ಅವರ ನಿಧನದಿಂದ ನನಗೆ ತುಂಬಾ ಆಘಾತವಾಗಿದೆ. ಅವರ ಅನಾರೋಗ್ಯದ ವಿಚಾರ ನನಗೆ ಗೊತ್ತಿರಲಿಲ್ಲ. ಅವರು ಯಾವ ನೋವನ್ನೂ ಹೇಳಿಕೊಳ್ಳುತ್ತಿರಲಿಲ್ಲ’ಎಂದರು.
ತನ್ನ ಗುರು ಇಹಲೋಕ ತ್ಯಜಿಸಿದ ವಿಚಾರ ತಿಳಿದ ಕೂಡಲೇ ಶ್ರೀಶಂಕರ ಅಸ್ಪತ್ರೆಗೆ ಧಾವಿಸಿ ಬಂದಿದ್ದ ಉಪೇಂದ್ರ ಅಂತಿಮ ದರ್ಶನ ಪಡೆದಿದ್ದರು.
ಉಪೇಂದ್ರ ಅವರು ಸಹಾಯಕ ನಿರ್ದೇಶಕನಾಗಿ ಕಾಶಿನಾಥ್ ಅವರೊಂದಿಗೆ ಚಿತ್ರರಂಗದ ಪಯಣ ಆರಂಭಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
MUST WATCH
ಹೊಸ ಸೇರ್ಪಡೆ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್