ಪದ್ಮಾವತ್ ಸರ್ಟಿಫಿಕೇಟ್ ರದ್ದು ಕೋರಿದ ಅರ್ಜಿ ಸುಪ್ರೀಂನಿಂದ ವಜಾ
Team Udayavani, Jan 19, 2018, 12:18 PM IST
ಹೊಸದಿಲ್ಲಿ : ಸಂಜಯ್ ಲೀಲಾ ಭನ್ಸಾಲಿ ಅವರ ವಿವಾದಿತ ಐತಿಹಾಸಿಕ ಕಥಾ ಚಿತ್ರ “ಪದ್ಮಾವತ್’ಗೆ ಕೇಂದ್ರ ಸೆನ್ಸಾರ್ ಮಂಡಳಿ ನೀಡಿರುವ ಸರ್ಟಿಫಿಕೇಟನ್ನು ರದ್ದು ಮಾಡುವಂತೆ ತುರ್ತು ವಿಚಾರಣೆಯನ್ನು ಕೋರಿ ಸಲ್ಲಿಸಲಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ತಿರಸ್ಕರಿಸಿದೆ.
ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವುದು ಆಯಾ ರಾಜ್ಯ ಸರಕಾರಗಳಿಗೆ ಸಂಬಂಧಿಸಿದ ವಿಷಯ; ಅದನ್ನು ನಿಭಾಯಿಸುವುದು ಅವುಗಳ ಬದ್ಧತೆ ಎಂದು ಸುಪ್ರೀಂ ಕೋರ್ಟ್ ಹೇಳಿತು.
ನಿನ್ನೆಯಷ್ಟೇ ಸುಪ್ರೀಂ ಕೋರ್ಟ್ ಪದ್ಮಾವತ್ ಚಿತ್ರದ ದೇಶವ್ಯಾಪಿ ಬಿಡುಗಡೆಗೆ ಅವಕಾಶ ಮಾಡಿಕೊಟ್ಟಿತ್ತಲ್ಲದೆ ಸೆನ್ಸಾರ್ ಸರ್ಟಿಫಿಕೇಟ್ ಪಡೆದ ಚಿತ್ರವನ್ನು ಯಾವುದೇ ರಾಜ್ಯ ಸರಕಾರ ಬಹಿಷ್ಕರಿಸುವಂತಿಲ್ಲ ಎಂದು ಹೇಳಿತ್ತು.
ಈ ನಡುವೆ ಪದ್ಮಾವತ್ ವಿರುದ್ಧ ಮತ್ತೆ ಪ್ರಬಲ ಪ್ರತಿಭಟನೆಗೆ ಮುಂದಾಗಿರುವ ರಾಜಪೂತ ಕರ್ಣಿ ಸೇನೆ, ಸೆನ್ಸಾರ್ ಮಂಡಳಿ ಮುಖ್ಯಸ್ಥ ಪ್ರಸೂನ್ ಜೋಷಿ ಅವರಿಗೆ ನಾವು ರಾಜಸ್ಥಾನಕ್ಕೆ ಕಾಲಿಡಲು ಬಿಡುವುದಿಲ್ಲ’ ಎಂದು ಎಚ್ಚರಿಕೆ ನೀಡಿದೆ.
ಕರ್ಣಿ ಸೇನೆಯ ಸದಸ್ಯರಾಗಿರುವ ಸುಖದೇವ್ ಸಿಂಗ್ ಅವರು ಇಂದು ಶುಕ್ರವಾರ ಈ ಬೆದರಿಕೆಯನ್ನು ಹಾಕಿದರು. “ಪದ್ಮಾವತ್’ ಐತಿಹಾಸಿಕ ಕಥಾ ಚಿತ್ರಕ್ಕೆ ಸುಪ್ರೀಂ ಕೋರ್ಟ್ ಕ್ಲೀನ್ ಚಿಟ್ ನೀಡಿರುವ ಹೊರತಾಗಿಯೂ ರಾಜಪೂತ್ ಕರ್ಣಿ ಸೇನಾ ಕಾರ್ಯಕರ್ತರು ಇಂದು ಬಿಹಾರದ ಮುಜಫರನಗರದಲ್ಲಿನ ಚಿತ್ರಮಂದಿವೊಂದರ ಮೇಲೆ ದಾಳಿ ನಡೆಸಿ ಹಾನಿ ಉಂಟುಮಾಡಿದ್ದರು.
ಪದ್ಮಾವತ್ ಚಿತ್ರಕ್ಕೆ ಕ್ಲೀನ್ ಚಿಟ್ ನೀಡಿರುವ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ನಾವು ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸುತ್ತೇವೆ ಕರ್ಣಿ ಸೇನಾ ಹೇಳಿತ್ತು. ಇದೇ ಜನವರಿ 25ರಂದು ಪದ್ಮಾವತ್ ಚಿತ್ರ ತೆರೆ ಕಾಣಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್