ದೆಹಲಿಯಲ್ಲಿ ಪಟಾಕಿ ಫ್ಯಾಕ್ಟರಿಗೆ ಬೆಂಕಿ: 17 ಸಾವು
Team Udayavani, Jan 21, 2018, 9:27 AM IST
ನವದೆಹಲಿ: ಮುಂಬೈನ ಪಬ್ನಲ್ಲಿ ಅಗ್ನಿ ಅನಾಹುತ ಸಂಭವಿಸಿ 14 ಜನರು ಸಾವನ್ನಪ್ಪಿದ್ದ ದುರ್ಘಟನೆ ಮಾಸುವ ಮುನ್ನವೇ, ರಾಷ್ಟ್ರರಾಜಧಾನಿಯಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅನಾಹುತ ಸಂಭವಿಸಿ 17 ಮಂದಿ ಸಜೀವ ದಹನವಾಗಿದ್ದಾರೆ.
ಬವಾನಾ ಔದ್ಯಮಿಕ ಪ್ರದೇಶದಲ್ಲಿ ಈ ಪಟಾಕಿ ಕಾರ್ಖಾನೆ ಇದ್ದು, ಶನಿವಾರ ಸಂಜೆ ಅಗ್ನಿ ಅನಾಹುತ
ಸಂಭವಿಸಿದೆ. ಕಾರ್ಖಾನೆಯಲ್ಲಿ ಅಕ್ರಮದ ನಿರ್ಮಿತಿಗಳಿದ್ದವು. ಇದರಿಂದಾಗಿ ಸಿಲುಕಿಹಾಕಿಕೊಂಡವರು ತಪ್ಪಿಸಿಕೊಳ್ಳಲಾಗಲಿಲ್ಲ. ಅಲ್ಲದೆ ಕೆಲವರು ಕಿಟಕಿಯಿಂದ ಹಾರಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿ ಸಾವನ್ನಪ್ಪಿದ್ದಾರೆ ಎಂದು ಅಗ್ನಿ ಶಾಮಕ ದಳದ ಮೂಲಗಳು ತಿಳಿಸಿವೆ.
ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, ಈಗಾಗಲೇ ಒಂಬತ್ತು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಹಲವರು ಕಟ್ಟಡದೊಳಗೆ ಸಿಲುಕಿದ್ದಾರೆ ಎಂದು ಊಹಿಸಲಾಗಿದ್ದು, ಮೃತರ ಸಂಖ್ಯೆ ಹೆಚ್ಚಾಗುವ ಭೀತಿ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ