ಅನರ್ಹತೆ: ದಿಲ್ಲಿ ಹೈಕೋರ್ಟ್ ಮೆಟ್ಟಲೇರಿದ 20 ಮಂದಿ ಆಪ್ ಶಾಸಕರು
Team Udayavani, Jan 23, 2018, 11:40 AM IST
ಹೊಸದಿಲ್ಲಿ : ಲಾಭದಾಯಕ ಹುದ್ದೆ ಹೊಂದಿದ ಕಾರಣಕ್ಕೆ ಚುನಾವಣಾ ಆಯೋಗದಿಂದ ಶಾಸಕತ್ವದ ಅನರ್ಹತೆಗೆ ಗುರಿಯಾಗಿರುವ 20 ಮಂದಿ ಆಪ್ ಶಾಸಕರು ದಿಲ್ಲಿ ಹೈಕೋರ್ಟ್ ಮೆಟ್ಟಲೇರಿದ್ದಾರೆ.
20 ಆಪ್ ಶಾಸಕರನ್ನು ಅನರ್ಹಗೊಳಿಸುವ ಚುನಾವಣಾ ಆಯೋಗದ ಶಿಫಾರಸಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಈ ಮೊದಲು ಸಲ್ಲಿಸಲಾಗಿದ್ದ ಅರ್ಜಿಯನ್ನು ನಿನ್ನೆ ಸೋಮವಾರ ಹಿಂದೆಗೆದುಕೊಳ್ಳಲಾಗಿತ್ತು.
ಚುನಾವಣಾ ಆಯೋಗದ ಶಿಫಾರಸಿಗೆ ರಾಷ್ಟ್ರಪತಿ ರಾಮ ನಾಥ್ ಕೋವಿಂದ್ ಅವರು ಅನುಮತಿ ನೀಡಿದ ಪರಿಣಾಮವಾಗಿ ಶಾಸಕತ್ವ ಕಳೆದುಕೊಂಡಿರುವ 20 ಆಮ್ ಆದ್ಮಿ ಶಾಸಕರೆಂದರೆ : ಅಲ್ಕಾ ಲಾಂಬಾ, ಆದರ್ಶ್ ಶಾಸ್ತ್ರೀ , ಸಂಜೀವ್ ಝಾ, ರಾಜೇಶ್ ಗುಪ್ತಾ, ಕೈಲಾಶ್ ಗೆಹಲೋತ್, ಪ್ರವೀಣ್ ಕುಮಾರ್ , ಶರತ್ ಕುಮಾರ್, ಮದನ್ ಲಾಲ್ ಖುಫಿಯಾ, ಶಿವ ಚರಣ್ ಗೋಯಲ್, ಸರಿತಾ ಸಿಂಗ್, ನರೇಶ್ ಯಾದವ್, ರಾಜೇಶ್ ರಿಷಿ, ಅನಿಲ್ ಕುಮಾರ್, ಸೋಮ ದತ್, ಅವತಾರ್ ಸಿಂಗ್, ಸುಖವೀರ್ ಸಿಂಗ್ ದಾಲಾ, ಮನೋಜ್ ಕುಮಾರ್, ನಿತಿನ್ ತ್ಯಾಗಿ ಮತ್ತು ಜರ್ನೇಲ್ ಸಿಂಗ್.
ಪ್ರಜಾಸತ್ತೆಗೇ ಅಪಾಯಕಾರಿಯಾಗಿರುವ ಶಾಸಕರ ಅನರ್ಹತೆ ಕ್ರಮವನ್ನು ಖಂಡಿಸಿರುವ ದಿಲ್ಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯ ಅವರು ಬರೆದಿರುವ ಬಹಿರಂಪ ಪತ್ರದಲ್ಲಿ ಪಕ್ಷಕ್ಕೆ ಜನರ ಬೆಂಬಲವನ್ನು ಯಾಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು