ವಿಶ್ವಸಂಸ್ಥೆಯಲ್ಲಿ ಹಿಂದಿಯಿಂದ ಯಾವುದೇ ಲಾಭವಿಲ್ಲ: ತರೂರ್
Team Udayavani, Jan 29, 2018, 6:40 AM IST
ಜೈಪುರ: ವಿಶ್ವಸಂಸ್ಥೆಯಲ್ಲಿ ಭಾರತದ ಅಧಿಕೃತ ಭಾಷೆ ಹಿಂದಿ ಎಂದು ಕೇಂದ್ರ ಸರ್ಕಾರ ದಾಖಲಿಸಲು ಪ್ರಯತ್ನಿಸುತ್ತಿದೆ. ಆದರೆ ವಿಶ್ವಸಂಸ್ಥೆಯಲ್ಲಿರುವ ಯಾರಿಗೂ ಹಿಂದಿ ಮಾತನಾಡಲು ಬಾರದು. ಇದರಿಂದ ಯಾವ ಪ್ರಯೋಜನವೂ ಇಲ್ಲ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ. ಈ ಹಿಂದೆ ಹಿಂದಿಯನ್ನು ವಿಶ್ವಸಂಸ್ಥೆಯಲ್ಲಿ ಭಾರತದ ಅಧಿಕೃತ ಭಾಷೆ ಎಂದು ದಾಖಲಿಸುವ ಸಂಬಂಧ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮತ್ತು ಶಶಿ ತರೂರ್ ಮಧ್ಯೆ ಲೋಕಸಭೆಯಲ್ಲಿ ವಾಗ್ವಾದ ನಡೆದಿತ್ತು.
ಈಗ ಮತ್ತೂಮ್ಮೆ ಈ ವಿಷಯವನ್ನು ಜೈಪುರ ಸಾಹಿತ್ಯ ಸಮ್ಮೇಳನದಲ್ಲಿ ಪ್ರಸ್ತಾಪಿಸಿದ ಶಶಿ ತರೂರ್, ಸರ್ಕಾರ ಇದಕ್ಕಾಗಿ 400 ಕೋಟಿ ರೂ. ವೆಚ್ಚ ಮಾಡಲು ತಯಾರಾಗಿದೆ. ಆದರೆ ಇದರಿಂದ ಭಾರತದ ಅಧಿಕಾರಿಗಳಿಗೇ ಕಷ್ಟವಾಗುತ್ತದೆ. ಅಲ್ಲದೆ ಹಲವು ನಾಯಕರು ದೇಶದ ವಿವಿಧ ಪ್ರದೇಶದವರಾಗಿರುತ್ತಾರೆ. ಉದಾಹರಣೆಗೆ ಮಾಜಿ ಸಚಿವ ಪಿ.ಚಿದಂಬರಂ ಮತ್ತು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಮಾತೃಭಾಷೆ ಹಿಂದಿಯಲ್ಲ. ಇವರು ವಿಶ್ವಸಂಸ್ಥೆಯಲ್ಲಿ ಮಾತನಾಡುವ ಪ್ರಸಂಗ ಉಂಟಾದಾಗ ಕಷ್ಟವಾಗುತ್ತದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ