ಶೀಘ್ರ ಕರ್ನಾಟಕ, ತಮಿಳುನಾಡು ಸಿಎಂಗಳ ಭೇಟಿ ಸಾಧ್ಯತೆ
Team Udayavani, Jan 31, 2018, 6:00 AM IST
ಚೆನ್ನೈ: ಕಾವೇರಿ ನದಿ ಪಾತ್ರದ ತಮಿಳುನಾಡಿನ ಕೆಲ ಪ್ರದೇಶಗಳಲ್ಲಿ ಬೆಳೆಯುವ ಸಾಂಬಾ ಬೆಳೆಗೆ ಅಗತ್ಯ ನೀರು ಬಿಡುಗಡೆಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿಗೆ ತಮ್ಮ ನೇತೃತ್ವದಲ್ಲಿ ನಿಯೋಗವೊಂದನ್ನು ಕರೆತಂದು ಆಗ್ರಹಿಸಲು ತಮಿಳುನಾಡು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ನಿರ್ಧರಿಸಿದ್ದಾರೆ.
ಸೋಮವಾರ ಚೆನ್ನೈಯಲ್ಲಿ ಪಳನಿಸ್ವಾಮಿ ನೇತೃತ್ವದ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಸಿದ್ದರಾಮಯ್ಯ ಭೇಟಿಗಾಗಿ ಈಗಾಗಲೇ ಕರ್ನಾಟಕ ಸರಕಾರಕ್ಕೆ ಮನವಿ ಯನ್ನೂ ಸಲ್ಲಿಸಲಾಗಿದೆ ಎಂದು ಮಂಗಳವಾರ ತಮಿಳುನಾಡು ಸರಕಾರದ ವತಿಯಿಂದ ಹೊರಡಿ ಸಲಾಗಿರುವ ಪ್ರಕಟನೆಯಲ್ಲಿ ತಿಳಿಸಲಾಗಿದೆ.
ತಮಿಳುನಾಡು ವಾದವೇನು?
ಸಾಂಬಾ ಬೆಳೆ ರಕ್ಷಣೆಗಾಗಿ 2007ರಲ್ಲಿ ಕಾವೇರಿ ನ್ಯಾಯಮಂಡಳಿ ತೀರ್ಪಿನಂತೆ ನೀರು ಬಿಡುವಂತೆ ಕೋರುವುದು ಈ ಭೇಟಿಯ ಮೂಲ ಉದ್ದೇಶ. ಜ. 13ರಂದು ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದ ಪಳನಿಸ್ವಾಮಿ, ಕರ್ನಾಟಕದಿಂದ ತಮಿಳುನಾಡಿಗೆ ಈ ಸಂದರ್ಭದಲ್ಲಿ 179.871 ಟಿಎಂಸಿ ಅಡಿ ನೀರು ಹರಿದುಬರ ಬೇಕಿತ್ತು. ಆದರೆ, ಜ. 9ರ ಮಾಪನದ ಅನುಸಾರ 111.647 ಟಿಎಂಸಿ ಅಡಿಗಳಷ್ಟು ನೀರು ಹರಿದುಬಂದಿದೆ. ಹಾಗಾಗಿ, ಬಾಕಿಯಿರುವ 68.224 ಟಿಎಂಸಿ ಅಡಿಗಳಷ್ಟು ನೀರನ್ನು ಕೂಡಲೇ ಹರಿಸಬೇಕೆಂದು ಕೋರಿದ್ದರು. 2007ರ ಕಾವೇರಿ ನ್ಯಾಯಮಂಡಳಿಯ ತೀರ್ಪಿನ ಪ್ರಕಾರ, ಕರ್ನಾಟಕ ರಾಜ್ಯವು ತಮಿಳುನಾಡಿಗೆ ಪ್ರತಿ ವರ್ಷ 192 ಟಿಎಂಸಿ ಅಡಿಗಳಷ್ಟು ನೀರನ್ನು ಬಿಡಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ