ಪತ್ನಿ ಜತೆಗೆ ಜಗಳ: ಪೊಲೀಸ್ ಎಸ್ಐ ಗುಂಡೆಸೆದುಕೊಂಡು ಆತ್ಮಹತ್ಯೆ
Team Udayavani, Feb 1, 2018, 11:37 AM IST
ಮುಂಬಯಿ : ಮಹಾರಾಷ್ಟ್ರದ ಧುಳೆ ಜಿಲ್ಲೆಯಲ್ಲಿ ಇಂದು ನಸುಕಿನ ವೇಳೆ 58 ವರ್ಷ ಪ್ರಾಯದ ಪೊಲೀಸ್ ಇನ್ಸ್ಪೆಕ್ಟರ್ ಓರ್ವರು ಹೆಂಡತಿಯೊಂದಿಗಿನ ಜಗಳದ ಪರಾಕಾಷ್ಠೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ರಮೇಶ್ ಸಿಂಗ್ ಪರ್ದೇಶಿ ಅವರನ್ನು ಧಳೆ ಕ್ರೈಮ್ ಬ್ರಾಂಚ್ ಗೆ ನಿಯೋಜಿಸಲಾಗಿತ್ತು. ನಸುಕಿನ 12.30ರ ಹೊತ್ತಿಗೆ ಅವರು ಹೆಂಡತಿಯೊಂದಿಗಿನ ಜಗಳದ ಪರಾಕಾಷ್ಠೆಯಲ್ಲಿ ತಮ್ಮ ಸರ್ವಿಸ್ ರಿವಾಲ್ವರ್ನಿಂದ ತಲೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡರು ಎಂದು ಪೊಲೀಸ್ ಸುಪರಿಂಟೆಂಡೆಂಟ್ ಎಂ ರಾಮ್ ಕುಮಾರ್ ತಿಳಿಸಿದರು.
ಪತಿ ತನ್ನ ಮುಂದೆಯೇ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಾಗ ಪತ್ನಿ ಬೊಬ್ಬಿಟ್ಟುದುದನ್ನು ಕೇಳಿಸಿಕೊಂಡ ಪೊಲೀಸ್ ಸಿಬಂದಿಗಳು ಒಡನೆಯೇ ಅವರ ನಿವಾಸಕ್ಕೆ ಧಾವಿಸಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಆಸ್ಪತ್ರೆಗೆ ಒಯ್ದುರು. ಆದರೆ ಅದಾಗಲೇ ಅವರ ಸತ್ತಿರುವುದಾಗಿ ವೈದ್ಯರು ಪ್ರಕಟಿಸಿದರು.
ಪರ್ದೇಶಿ ಅವರು ಈ ವರ್ಷ ಮೇ ತಿಂಗಳಲ್ಲಿ ಸೇವೆಯಿಂದ ನಿವೃತ್ತರಾಗುವವರಿದ್ದರು. ನಿವೃತ್ತಿಯ ಬಳಿಕ ನಾಶಿಕ್ನಲ್ಲಿರುವ ತಮ್ಮ ಪುತ್ರನೊಂದಿಗೆ ವಿಶ್ರಾಂತ ಜೀವನ ನಡೆಸಲು ನಿರ್ಧರಿಸಿದ್ದರು.
ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
MUST WATCH
ಹೊಸ ಸೇರ್ಪಡೆ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ
Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ