ಉಪ ಚುನಾವಣೆ: ಕಾಂಗ್ರೆಸ್, ಟಿಎಂಸಿ ಜಯಭೇರಿ
Team Udayavani, Feb 2, 2018, 6:20 AM IST
ಹೊಸದಿಲ್ಲಿ: ಜನವರಿ 29ರಂದು ರಾಜಸ್ಥಾನದ ಅಜ್ಮಿàರ್ ಹಾಗೂ ಅಲ್ವಾರ್ ಸಂಸತ್ ಕ್ಷೇತ್ರಗಳಿಗೆ ಹಾಗೂ ಮದಲ್ಗಡ್ ವಿಧಾನಸಭಾ ಕ್ಷೇತ್ರಕ್ಕೆ ನಡೆದಿದ್ದ ಉಪ ಚುನಾವಣೆಗಳ ಫಲಿತಾಂಶ ಗುರುವಾರ ಹೊರಬಿದ್ದಿದ್ದು, ಈ ಮೂರೂ ಚುನಾವಣೆ ಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಇದು ಆಡಳಿತಾರೂಢ ಬಿಜೆಪಿಯನ್ನು ಮುಜುಗರಕ್ಕೀಡು ಮಾಡಿದೆ.
ಅಜ್ಮಿàರ್, ಅಲ್ವಾರ್ ಲೋಕಸಭಾ ಕ್ಷೇತ್ರಗಳಲ್ಲಿ ಕ್ರಮವಾಗಿ ರಘು ಶರ್ಮಾ ಹಾಗೂ ಕರಣ್ ಸಿಂಗ್ ಯಾದವ್ ಜಯ ಗಳಿಸಿದ್ದರೆ, ಮದಲ್ಗಡ್ ವಿಧಾನಸಭಾ ಕ್ಷೇತ್ರದಲ್ಲಿ ವಿವೇಕ್ ಧಾಕಡ್ ವಿಜಯಿಯಾಗಿದ್ದಾರೆ.
ಅಜ್ಮಿàರ್ನಲ್ಲಿ ರಘು ಶರ್ಮಾ ಅವರು, ಬಿಜೆಪಿಯ ರಾಮ್ ಸ್ವರೂಪ್ ಲಂಬಾ ವಿರುದ್ಧ 84,000 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದರೆ, ಅಲ್ವಾರ್ ಸಂಸತ್ ಕ್ಷೇತ್ರದಲ್ಲಿ ಕರಣ್ ಸಿಂಗ್ ಯಾದವ್ ಅವರು, ಬಿಜೆಪಿಯ ಜಸ್ವಂತ್ ಸಿಂಗ್ ಯಾದವ್ ವಿರುದ್ಧ 1.96 ಲಕ್ಷ ಮತಗಳಿಂದ ಗೆಲುವು ಪಡೆದಿದ್ದಾರೆ. ಇನ್ನು ಮದಲ್ಗಡ್ ವಿಧಾನಸಭಾ ಕ್ಷೇತ್ರದಲ್ಲಿ ಧಾಕಡ್ ಅವರು, ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಶಕ್ತಿ ಸಿಂಗ್ ಹಾಡಾ ವಿರುದ್ಧ 12, 976 ಮತಗಳ ಅಂತರದಲ್ಲಿ ಸೋಲಿಸಿದ್ದಾರೆ.
ಬಂಗಾಳದಲ್ಲೂ ಬಿಜೆಪಿಗೆ ಹಿನ್ನಡೆ
ಇನ್ನು ಪ. ಬಂಗಾಳದ ನೊವಾಪರಾ ವಿಧಾನಸಭಾ ಕ್ಷೇತ್ರದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ನ (ಟಿಎಂಸಿ) ಸಜಾª ಅಹ್ಮದ್ ಗೆಲವು ಸಾಧಿಸಿದ್ದರೆ, ಉಲುಬೆರಿಯಾ ಲೋಕಸಭಾ ಕ್ಷೇತ್ರದಲ್ಲಿ ಟಿಎಂಸಿಯ ಸುನಿಲ್ ಸಿಂಗ್ ಜಯಶಾಲಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ