ಅಪಮೌಲ್ಯದ ಅವಧಿಯಲ್ಲಿ 15 ಲ. ರೂ. ಠೇವಣಿ ಇಟ್ಟವರಿಗೆ ಸಂಕಷ್ಟ!
Team Udayavani, Feb 4, 2018, 1:15 PM IST
ಹೊಸದಿಲ್ಲಿ: ನೋಟು ಅಪಮೌಲ್ಯದ ಅವಧಿಯಲ್ಲಿ 15 ಲಕ್ಷ ರೂ. ಗಳಿಗಿಂತ ಹೆಚ್ಚು ಮೊತ್ತವನ್ನು ಖಾತೆಯಲ್ಲಿ ಠೇವಣಿ ಯಿಟ್ಟವರಿಗೆ ಸಂಕಷ್ಟ ಎದುರಾಗಿದೆ. ಅಷ್ಟೊಂದು ಮೊತ್ತ ಹೇಗೆ ಬಂತು ಎಂಬ ವಿವರವನ್ನೂ ನೀಡದೇ ರಿಟರ್ನ್ಸ್ ಅನ್ನೂ ಸಲ್ಲಿಸದೇ ಇದ್ದ ಸುಮಾರು 1.98 ಲಕ್ಷ ಖಾತೆದಾರರು ಕಾನೂನಿನ ಅನ್ವಯ ಕಠಿನ ಕ್ರಮ ಎದುರಿಸಬೇಕಾಗುತ್ತದೆ.
ಸಂಶಯಾಸ್ಪದ ಖಾತೆಗಳನ್ನು ಪತ್ತೆ ಹಚ್ಚಿರುವ ಆದಾಯ ತೆರಿಗೆ ಇಲಾಖೆಯು ಕಳೆದ ಡಿಸೆಂಬರ್ ಹಾಗೂ ಜನವರಿ ತಿಂಗಳಲ್ಲಿ ಖಾತೆದಾರರಿಗೆ 2 ಲಕ್ಷದಷ್ಟು ನೋಟಿಸ್ಗಳನ್ನು ಜಾರಿ ಮಾಡಿದೆ. ಆದರೆ, ಯಾರೂ ಅದಕ್ಕೆ ಉತ್ತರ ನೀಡಿಲ್ಲ. ಹೀಗಾಗಿ, ಅಂಥವರ ವಿರುದ್ಧ ಕಾನೂನು ಪ್ರಕಾರ ಕಠಿನ ಕ್ರಮ ಅಥವಾ ದಂಡ ವಿಧಿಸಲಾಗುತ್ತದೆ ಎಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ) ಅಧ್ಯಕ್ಷ ಸುಶೀಲ್ ಚಂದ್ರ ಹೇಳಿದ್ದಾರೆ.
ದೇಶಾದ್ಯಂತ ಕಳೆದ 3 ತಿಂಗಳಲ್ಲಿ ಸುಮಾರು 3 ಸಾವಿರ ಪ್ರಕರಣಗಳು ದಾಖಲಾಗಿವೆ ಎಂದೂ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ