CRPF ಕ್ಯಾಂಪ್ ಮೇಲೆ ಉಗ್ರ ದಾಳಿ ವಿಫಲ: ಶೋಧ ಕಾರ್ಯಾಚರಣೆ
Team Udayavani, Feb 12, 2018, 12:02 PM IST
ಶ್ರೀನಗರ : ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಇಂದು ಮಂಜಾನೆ ಇಬ್ಬರು ಭಾರೀ ಶಸ್ತ್ರಧಾರಿ ಉಗ್ರರು ಸಿಆರ್ಪಿಎಫ್ ಕ್ಯಾಂಪ್ ಕಡೆಗೆ ಧಾವಿಸಿ ಬರುತ್ತಿರುವುದನ್ನು ಠಾಣೆಯಲ್ಲಿ ಕರ್ತವ್ಯ ನಿರತ ಯೋಧರು ಒಡನೆಯೇ ಗಮನಿಸಿ ಗುಂಡಿನ ದಾಳಿ ನಡೆಸಿದರು. ಉಗ್ರರು ತತ್ಕ್ಷಣ ಸ್ಥಳದಿಂದ ಪರಾರಿಯಾದರು.
ಉಗ್ರರು ಬೆನ್ನಿಗೆ ಭಾರವಾದ ಚೀಲ ಮತ್ತು ಎಕೆ 47 ರೈಫಲ್ ಹೊಂದಿದ್ದರು. ಪರಾರಿಯಾಗಿರುವ ಈ ಇಬ್ಬರು ಉಗ್ರರಿಗಾಗಿ ಈಗ ವ್ಯಾಪಕ ಶೋಧ ಕಾರ್ಯಾಚರಣೆ ನಡೆದಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
ಉಗ್ರರು ಸಿಆರ್ಪಿಎಫ್ ಕ್ಯಾಂಪ್ ಮೇಲೆ ದಾಳಿ ನಡೆಸುವ ಉದ್ದೇಶದದಿಂದಲೇ ಬಳಿ ಸಾರಿ ಬಂದಿದ್ದರು ಎಂಬುದು ಸ್ಪಷ್ಟವಾಗಿತ್ತು.
ಸಂಜುವಾನ್ ಸೇನಾ ಶಿಬಿರಗದ ಮೇಲೆ ಉಗ್ರರು ನಡೆಸಿದ್ದ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದರು. ಜತೆಗೆ ಒಬ್ಬ ಪೌರ ಕೂಡ ಹತರಾಗಿದ್ದರು; ಅನೇಕರು ಗಾಯಗೊಂಡಿದ್ದರು.
ಈ ದಾಳಿಯ ವೇಳೆ ಪ್ರತಿದಾಳಿ ಸಂಘಟಿಸಿದ ಯೋಧರು ನಾಲ್ಕು ಉಗ್ರರನ್ನು ಗುಂಡು ಹೊಡೆದು ಕೊಂದಿದ್ದರು. ಈ ಕಾರ್ಯಾಚರಣೆ ಒಂದು ದಿನ ಮೀರಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ