ವಿಶ್ವಸಂಸ್ಥೆಯಲ್ಲಿ ಭಾರತಕ್ಕೆ ವಿಟೋ ಹಕ್ಕು: ಇರಾನ್ ಆಗ್ರಹ
Team Udayavani, Feb 17, 2018, 7:07 PM IST
ಹೊಸದಿಲ್ಲಿ : ಭಾರತಕ್ಕೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ವಿಟೋ ಹಕ್ಕು ನೀಡಬೇಕು ಎಂದು ಕರೆ ನೀಡಿರುವ ಇರಾನ್ ಅಧ್ಯಕ್ಷ ಹಸನ್ ರೊಹಾನಿ ಅವರು ಭಾರತವು ಶತಕೋಟಿಗೂ ಮಿಕ್ಕಿದ ಶಾಂತಿ ಪ್ರಿಯ ಜನರಿರುವ ದೇಶವಾಗಿದೆ ಎಂದು ವರ್ಣಿಸಿದರು. ಭಯೋತ್ಪಾದನೆ ವಿರುದ್ಧದ ಭಾರತದ ಹೋರಾಟವನ್ನು ಇರಾನ್ ಸಕಲ ರೀತಿಯಲ್ಲಿ ಬೆಂಬಲಿಸುವುದಾಗಿ ರೊಹಾನಿ ಹೇಳಿದರು.
ಪ್ರಕೃತ ಭಾರತ ಭೇಟಿಯಲ್ಲಿರುವ ಇರಾನ್ ಅಧ್ಯಕ್ಷ ರೊಹಾನಿ ಅವರು “ಒಂದು ಶತಕೋಟಿಗೂ ಮಿಕ್ಕಿದ ಜನಸಂಖ್ಯೆ ಇರುವ ಭಾರತಕ್ಕೆ ಇನ್ನೂ ಯಾಕೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ವಿಟೋ ಹಕ್ಕಿಲ್ಲ’ ಎಂದು ಅಚ್ಚರಿ ಪಟ್ಟರು. ದಿಲ್ಲಿಯಲ್ಲಿಂದು ನಡೆದ ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು.
ಅಣು ಬಾಂಬ್ ಹೊಂದಿರುವ ವಿಶ್ವದ ಐದು ದೊಡ್ಡ ದೇಶಗಳಿಗೆ ಮಾತ್ರವೇ ವಿಶ್ವಸಂಸ್ಥೆಯಲ್ಲಿ ವಿಟೋ ಹಕ್ಕು ನೀಡಲಾಗಿರುವುದು ಏಕೆ ಎಂದವರು ಪ್ರಶ್ನಿಸಿದರು.
ಇರಾನ್ ಜನರ ಭವಿಷ್ಯವನ್ನು ನಿಯಂತ್ರಿಸಲು ಯತ್ನಿಸುತ್ತಿರುವ ಅಮೆರಿಕವನ್ನು ಅವರು ಖಂಡಿಸಿದರು.
ರೊಹಾನಿ ಅವರ ಭೇಟಿಯ ಸಂದರ್ಭದಲ್ಲೇ ಭಾರತ ಮತ್ತು ಇರಾನ 9 ನಿರ್ಣಾಯಕ ಒಪ್ಪಂದಗಳಿಗೆ ಸಹಿ ಹಾಕಿವೆ. ಜತೆಗೆ ವ್ಯೂಹಾತ್ಮಕವಾಗಿ ಅತ್ಯಂತ ಮಹತ್ವದ್ದಾಗಿರುವ ಇರಾನಿನ ಚಬಹಾರ್ ಬಂದರಿಗೆ ಈ ಸಂದರ್ಭದಲ್ಲಿ ಹೆಚ್ಚಿನ ಮಹತ್ವ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್