ಪ್ರಧಾನಿ ಶಾಸ್ತ್ರೀ PNB ಕಾರು ಸಾಲವನ್ನು ವಿಧವೆ ಪತ್ನಿ ತೀರಿಸಿದ್ದರು


Team Udayavani, Feb 21, 2018, 11:36 AM IST

PM-Shastri-Car-700.jpg

ಹೊಸದಿಲ್ಲಿ : ಬಿಲಿಯಾಧಿಪತಿ ವಜ್ರಾಭರಣ ವ್ಯಾಪಾರಿ ನೀರವ್‌ ಮೋದಿ ಅವರಿಂದ ಸಾವಿರಾರು ಕೋಟಿ ರೂ. ವಂಚನೆಗೆ ಗುರಿಯಾಗಿರುವ ಪಂಜಾಬ್‌ ನ್ಯಾಶನಲ್‌ ಬ್ಯಾಂಕ್‌ನಿಂದ 1965ರಲ್ಲಿ ಅಂದಿನ ಪ್ರಧಾನಿ ಲಾಲ್‌ ಬಹಾದ್ದೂರ್‌ ಶಾಸ್ತ್ರೀ ಫಿಯೆಟ್‌ ಕಾರೊಂದನ್ನು ಕೊಳ್ಳಲು 5,000 ರೂ. ಸಾಲ ತೆಗೆದುಕೊಂಡಿದ್ದರು. ಅವರ ನಿಧನಾನಂತರವೂ ಉಳಿದುಕೊಂಡಿದ್ದ ಸಾಲವನ್ನು ಅವರ ಪತ್ನಿ ಲಲಿತಾ ಶಾಸ್ತ್ರೀ ಅವರು ಫ್ಯಾಮಿಲಿ ಪೆನ್‌ಶನ್‌ ಹಣದಿಂದ ತೀರಿಸಿದ್ದರು ಎಂಬ ಪ್ರಾಮಾಣಿಕತೆಯ ವಿಷಯ ಈಗ ಎಲ್ಲರಿಗೂ ಒಂದು ಪಾಠವಾಗಿ ಬೆಳಕಿಗೆ ಬಂದಿದೆ. 

ಪ್ರಧಾನಿ ಲಾಲ್‌ ಬಹಾದ್ದೂರ್‌ ಶಾಸ್ತೀ ಅವರ ಬಳಿ ಸ್ವಂತ ಕಾರು ಇರಲಿಲ್ಲ. ಕಾರು ಖರೀದಿಸಬೇಕೆಂಬ ಒತ್ತಡ ಮನೆಯವರಿಂದ ತೀವ್ರವಾಗಿತ್ತು. ಆಗ ಶಾಸ್ತ್ರೀ ಅವರು ತಮ್ಮ ಕಾರ್ಯದರ್ಶಿ ಫಿಯೆಟ್‌ ಕಾರು ಖರೀದಿಸಲು ಎಷ್ಟು ಹಣ ಬೇಕು ಎಂದು ಕೇಳಿದ್ದರು. ಅದಕ್ಕೆ 12,000 ರೂ. ತಗಲುವುದೆಂದು ಅವರಿಗೆ ತಿಳಿಸಲಾಯಿತು. ಶಾಸ್ತ್ರೀ ಅವರ ಬ್ಯಾಂಕ್‌ ಖಾತೆಯಲ್ಲಿ ಕೇವಲ 7,000 ರೂ. ಇತ್ತು. ಉಳಿದ 5,000 ರೂ. ಗಳನ್ನು ಅವರು ಪಂಜಾಬ್‌ ನ್ಯಾಶನಲ್‌ ಬ್ಯಾಂಕಿನಂದ ಸಾಲವಾಗಿ ಪಡೆಯಲು ಮುಂದಾದರು.

ಬ್ಯಾಂಕಿನವರು ಪ್ರಧಾನಿ ಶಾಸ್ತ್ರೀ ಅವರಿಗೆ ಎರಡೇ ತಾಸೊಳಗೆ ಸಾಲ ಮಂಜೂರು ಮಾಡಿದರು. ಆಗ ಶಾಸ್ತ್ರೀಜೀ ಅವರು “ನೀವು ನಿಮ್ಮ ಸಾಮಾನ್ಯ ಗ್ರಾಹಕರಿಗೂ ಇಷ್ಟೇ ಸುಲಭದಲ್ಲಿ ಸಾಲ ನೀಡುತ್ತೀರಾ?’ ಎಂದು ಪ್ರಶ್ನಿಸಿದ್ದರು. ಎಲ್ಲ  ಗ್ರಾಹಕರಿಗೂ ಸಮಾನ ಆದ್ಯತೆಯನ್ನು ನೀವು ನೀಡಬೇಕು ಎಂದು ಪಿಎನ್‌ಬಿ ಅಧಿಕಾರಿಗಳಿಗೆ ಶಾಸ್ತ್ರೀ ಸಲಹೆ ನೀಡಿದ್ದರು. 

5,000 ರೂ. ಸಾಲವನ್ನು ಪೂರ್ತಿಯಾಗಿ ಪಾವತಿಸುವ ಮುನ್ನವೇ ಶಾಸ್ತ್ರೀ ಅವರು ತಾಷ್‌ಕೆಂಟ್‌ನಲ್ಲಿ ನಿಧನ ಹೊಂದಿದರು. ಅವರ ನಿಧನಾನಂತರ ಸಾಲ ಮರುಪಾವತಿಸುವಂತೆ ಬ್ಯಾಂಕಿನವರು ಶಾಸ್ತ್ರೀ ಅವರ ಪತ್ನಿಗೆ ನೊಟೀಸ್‌ ಕಳುಹಿಸಿದರು. ಶಾಸ್ತ್ರೀ ಅವರ ಪತ್ನಿ ಉಳಿದ ಸಾಲ ಮೊತ್ತವನ್ನು ಕಂತು ಕಂತಿನಲ್ಲಿ ಫ್ಯಾಮಿಲಿ ಪೆನ್‌ಶನ್‌ ಹಣದಿಂದ ಪಾವತಿಸಿದರು. 

ಶಾಸ್ತ್ರೀ ಅವರು ಅಂದು 5,000 ರೂ. ಸಾಲ ಮಾಡಿ ಖರೀದಿಸಿದ್ದ  1964ರ ಮಾಡೆಲ್‌ನ ಕ್ರೀಮ್‌ ಕಲರ್‌ನ  ಫಿಯೆಟ್‌ ಕಾರನ್ನು (ಡಿಇಎಲ್‌ 6) ಈಗ ದಿಲ್ಲಿ ಯ ನಂ.1, ಮೋತಿಲಾಲ್‌ ನೆಹರೂ ಮಾರ್ಗದಲ್ಲಿರುವ ಲಾಲ್‌ ಬಹಾದ್ದೂರ್‌ ಶಾಸ್ತ್ರೀ ಮೆಮೋರಿಯಲ್‌ನಲ್ಲಿ ಪ್ರದರ್ಶನಕ್ಕೆ ಇಡಲಾಗಿದೆ. 

ಇಂದಿನ ದಿನಗಳಲ್ಲಿ ಬ್ಯಾಂಕುಗಳಿಂದ ಕೋಟಿಗಟ್ಟಲೆ ಸಾಲ ಪಡೆಯುವ ಸಿರಿವಂತ ಉದ್ಯಮಿಗಳಲ್ಲಿ , ರಾಜಕೀಯ ಮುಖಂಡರಲ್ಲಿ  ಸಾಲ ಮರುಪಾವತಿಸುವ ನೈತಿಕತೆಯೇ ಇಲ್ಲವಾಗಿದೆ. ಬ್ಯಾಂಕುಗಳು ಸಿರಿವಂತ ಗ್ರಾಹಕರ ಸುಸ್ತಿ ಸಾಲದ ಹೊರೆ ತಾಳಲಾರದೆ ಕುಸಿಯುವ ಭೀತಿಗೆ ಗುರಿಯಾಗಿದೆ. 

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.