ಸ್ತ್ರೀ ಸಬಲೀಕರಣದಿಂದ ಕುಟುಂಬದ ಪ್ರಗತಿ
Team Udayavani, Feb 25, 2018, 8:15 AM IST
ಚೆನ್ನೈ: ಮಹಿಳೆಯ ಸಶಕ್ತೀಕರಣದಿಂದ ಆಕೆಯ ಕುಟುಂಬ ಸಶಕ್ತವಾಗುತ್ತದೆ. ಆಕೆಗೆ ಶಿಕ್ಷಣ ನೀಡಿದರೆ ಅದು ಇಡೀ ಕುಟುಂಬಕ್ಕೇ ಶಿಕ್ಷಣ ನೀಡಿದಂತೆ. ಮಹಿಳೆಯ ಭವಿಷ್ಯ ಸುಭದ್ರಗೊಳಿಸಿದರೆ, ಆಕೆಯ ಕುಟುಂಬದ ಭವಿಷ್ಯವೂ ಸುಭದ್ರಗೊಳ್ಳುತ್ತದೆ ಎಂದು ಪ್ರಧಾನಿ ಮೋದಿ ಅಭಿಪ್ರಾಯಪ್ಟಟರು.
ಚೆನ್ನೈನಲ್ಲಿ, ತಮಿಳುನಾಡು ಸರಕಾರದ ವತಿಯಿಂದ ಏರ್ಪಡಿಸಲಾಗಿದ್ದ “ಅಮ್ಮ ದ್ವಿಚಕ್ರ ವಾಹನ’ ಯೋಜನೆ ಉದ್ಘಾಟಿಸಿ ಮಾತನಾಡಿದ ಅವರು, ಕುಟುಂಬದ ಅಭಿವೃದ್ಧಿಯಲ್ಲಿ ಮಹಿಳೆಯರು ವಹಿಸುವ ಪಾತ್ರವನ್ನು ಕೊಂಡಾಡಿದರು. ಸರಕಾರದ ಮಹಿಳಾ ಸಬಲೀಕರಣ ಯೋಜನೆಗಳು ಶಾಶ್ವತವಾಗಿ ಅವರನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತವೆ. ತಮ್ಮ ಸರಕಾರ, ಮಹಿಳೆಯರೂ ಸೇರಿದಂತೆ ಜನ ಸಾಮಾನ್ಯರ ಜೀವನ ಗುಣಮಟ್ಟ ಹೆಚ್ಚಿಸಲು ಶ್ರಮಿಸುತ್ತಿದೆ” ಎಂದರು.
ತಮ್ಮ ಭಾಷಣದಲ್ಲಿ ಮಾಜಿ ಸಿಎಂ ದಿವಂಗತ ಜಯಲಲಿತಾರನ್ನು ನೆನೆದ ಮೋದಿ, “”ಇಂದು ಜಯಲಲಿತಾ ಇದ್ದಿದ್ದರೆ ಈ ಯೋಜನೆಯ ಲಾಭ ಪಡೆದ ಮಹಿಳೆಯರ ಮೊಗದಲ್ಲಿನ ಮಂದಹಾಸ ನೋಡಿ ಖುಷಿಪಡುತ್ತಿದ್ದರು” ಎಂದರು.
ತಮಿಳುನಾಡು ಸರಕಾರದ “ಅಮ್ಮಾ ಸ್ಕೂಟರ್ ಯೋಜನೆ’ಗೆ ಚಾಲನೆ ನೀಡಿದ ಪ್ರಧಾನಿ ಮೋದಿ ಅವರು ಉದ್ಯೋಗಸ್ಥ ಮಹಿಳೆಯರಿಗೆ ದ್ವಿಚಕ್ರ ವಾಹನಗಳ ಕೀಲಿಕೈ ಮತ್ತು ನೋಂದಣಿ ಪ್ರಮಾಣಪತ್ರ ಹಸ್ತಾಂತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು