ತೃತೀಯರಂಗದ ಚರ್ಚೆಗೆ ಚಾಲನೆ ಕೊಟ್ಟ ಫ‌ಲಿತಾಂಶ


Team Udayavani, Mar 5, 2018, 11:40 AM IST

triteeya.jpg

ಲಕ್ನೋ/ಹೈದರಾಬಾದ್‌: ಈಶಾನ್ಯದ ಮೂರು ರಾಜ್ಯ ಗಳಲ್ಲಿ ಬಿಜೆಪಿ ಮೇಲುಗೈ ಸಾಧಿಸಿರುವಂತೆಯೇ 2019ರ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ತೃತೀಯ ರಂಗ ರಚನೆ ಯತ್ನಗಳು ಮತ್ತೆ ಶುರುವಾಗಿವೆ.

ಕಾಂಗ್ರೆಸ್‌ ನಾಯಕ ಎಂ.ವೀರಪ್ಪ ಮೊಲಿ, ಎಐಎಂಐಎಂ ಸಂಸದ ಅಸಾದುದ್ದೀನ್‌ ಒವೈಸಿ ಈ ಬಗ್ಗೆ ರವಿವಾರ ಬಹಿರಂಗವಾಗಿಯೇ ಮಾತನಾಡಿದ್ದಾರೆ. ಅದಕ್ಕೆ ಚಾಲನೆ ಸಿಕ್ಕಿದ್ದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ ಅವರ ಹೇಳಿಕೆ. ಶನಿವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಕೆಸಿಆರ್‌ ಅವರು, ಕಾಂಗ್ರೆಸ್‌ ಮತ್ತು ಬಿಜೆಪಿಗೆ ಪರ್ಯಾಯವಾಗಿ ರಾಜಕೀಯ ಮೈತ್ರಿಕೂಟ ರಚನೆಯಾಗಬೇಕು ಎಂದಿದ್ದರು. ಅದನ್ನೇ ಪುಷ್ಟೀಕರಿಸಿರುವ ಅಸಾದುದ್ದೀನ್‌ ಒವೈಸಿ, ದೂರದೃಷ್ಟಿ ಇರಿಸಿಕೊಂಡು ತೆಲಂಗಾಣ ಮುಖ್ಯಮಂತ್ರಿ ಪರ್ಯಾಯ ರಾಜಕೀಯ ಒಕ್ಕೂಟ ರಚನೆಯ ಮಾತುಗಳನ್ನಾಡಿದ್ದಾರೆ. ಈ ನಿಟ್ಟಿನಲ್ಲಿ ಅವರೇ ಮುಂದಾಳತ್ವ ವಹಿಸಿಕೊಳ್ಳಬೇಕು ಎಂದು ಪ್ರತಿಪಾದಿಸಿದ್ದಾರೆ.

“ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆ ವೇಳೆ ಅವರನ್ನು ಮತ್ತು ಅವರ ನಿಲುವುಗಳನ್ನು ವಿರೋಧಿಸಿದ್ದೆವು. ಅಂತಿ ಮ ವಾಗಿ ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆ ಮಾಡುವಲ್ಲಿ ಅವರು ಯಶಸ್ವಿಯಾಗಿದ್ದಾರೆ. ಎಲ್ಲಾ ಪ್ರಾದೇಶಿಕ ಪಕ್ಷಗಳನ್ನು ಒಟ್ಟು ಸೇರಿಸಿ ಕೇಂದ್ರದಲ್ಲಿ ಸರಕಾರ ರಚಿಸುವ ಚಾಕಚಕ್ಯತೆ ಅವರಲ್ಲಿದೆ’ ಎಂದಿದ್ದಾರೆ ಒವೈಸಿ.

ಕೆಸಿಆರ್‌ಗೆ ಮಮತಾ ಫೋನ್‌: ಇದಾದ ಬಳಿಕ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ಗೆ ಫೋನ್‌ ಮಾಡಿ ಮಾತನಾಡಿರುವ ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ.

ಜಾತ್ಯತೀತ ಪಕ್ಷಗಳು ಒಟ್ಟಾಗಬೇಕು: ಒವೈಸಿ ಧ್ವನಿಯಲ್ಲೇ ಮಾತನಾಡಿರುವ ಕಾಂಗ್ರೆಸ್‌ ನಾಯಕ, ಕೇಂದ್ರದ ಮಾಜಿ ಸಚಿವ ವೀರಪ್ಪ ಮೊಲಿ, ಮುಂದಿನ ದಿನಗಳಲ್ಲಿ ಜಾತ್ಯತೀತ  ಪಕ್ಷಗಳು ಏಕಾಂಗಿಗಳಾಗಿ ಕೆಲಸ ಮಾಡದೆ ಒಗ್ಗೂಡಬೇಕು ಎಂದಿದ್ದಾರೆ. “ಚುನಾವಣೆಯಲ್ಲಿ ಗೆಲವು ಸಾಧಿಸಲೋಸುಗ ಅವುಗಳೆಲ್ಲವೂ ಕೈಜೋಡಿಸಬೇಕು. ನಾವೆಲ್ಲರೂ ಬಿಜೆಪಿಯೆಂಬ ಕೋಮುವಾದಿ ಭೂತವನ್ನು ಎದುರಿಸಬೇಕು. ಹೀಗಾಗಿ ಕೋಮು ಶಕ್ತಿಗಳ ವಿರುದ್ಧ ಹೋರಾಟಕ್ಕೆ ಎಲ್ಲರ ನಡುವೆ ಸಹಕಾರ ಅಗತ್ಯ’ ಎಂದು ಹೇಳಿದ್ದಾರೆ.

ದೇಶ ಕಾಂಗ್ರೆಸ್‌ ಮುಕ್ತ ಭಾರತವಾಗುತ್ತದೆ ಎಂಬ ವಾದವನ್ನು ತಿರಸ್ಕರಿಸಿದ ಅವರು, ಮುಂದಿನ ಕೆಲವೇ ವರ್ಷಗಳಲ್ಲಿ ಎಡಪಕ್ಷಗಳೇ ಇಲ್ಲದಂತಾಗುತ್ತವೆ. ಆದರೆ, ಕಾಂಗ್ರೆಸ್‌ ಮಧ್ಯಪ್ರೇಶದ ಉಪಚುನಾವಣೆಗಳಲ್ಲಿ ಉತ್ತಮ ಸಾಧನೆ ಮಾಡಿದೆ. ರಾಜಸ್ಥಾನದಲ್ಲೂ ಪಕ್ಷ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಉ.ಪ್ರ.ಉಪ ಚುನಾವಣೆ: ಎಸ್‌ಪಿಗೆ ಬೆಂಬಲ ಇಲ್ಲ
ಕರ್ನಾಟಕ ಹೊರತುಪಡಿಸಿ ಬೇರೆ ಯಾವುದೇ ರಾಜ್ಯ ಗಳಲ್ಲಿ ಇತರ ಪಕ್ಷಗಳ ಜತೆ ಚುನಾವಣಾ ಹೊಂದಾ ಣಿಕೆ ಇಲ್ಲ ಎಂದಿದ್ದಾರೆ ಬಿಎಸ್‌ಪಿ ನಾಯಕಿ ಮಾಯಾವತಿ. ಉತ್ತರ ಪ್ರದೇಶದ ಗೋರಖ್‌ಪುರ, ಫ‌ೂಲ್ಪುರ ಲೋಕಸಭೆ ಕ್ಷೇತ್ರಗಳಿಗೆ ಮಾ.11ರಂದು ನಡೆಯಲಿರುವ ಉಪ ಚುನಾವಣೆ ಯಲ್ಲಿ ಸಮಾಜವಾದಿ ಪಕ್ಷಕ್ಕೆ ಬೆಂಬಲ ನೀಡಲಾಗುತ್ತದೆ ಎಂದು ಪಕ್ಷದ ನಾಯಕರೊಬ್ಬರು ಟ್ವೀಟ್‌ ಮಾಡಿರುವ ಹಿನ್ನೆಲೆಯಲ್ಲಿ ಅವರು ಈ ಸ್ಪಷ್ಟನೆ ನೀಡಿದ್ದಾರೆ. ಆದರೆ  ವಿಧಾನಪರಿಷತ್‌ ಮತ್ತು ರಾಜ್ಯಸಭೆ ಚುನಾವಣೆಯಲ್ಲಿ ಎರಡೂ ಪಕ್ಷಗಳು ಪರಸ್ಪರ ಹೊಂದಾಣಿಕೆ ಮಾಡಿಕೊಳ್ಳುವುದು ಖಚಿತವಾಗಿದೆ. ಲಕ್ನೋದಲ್ಲಿ ಮಾತನಾಡಿದ ಅವರು ಉತ್ತರ ಪ್ರದೇಶದಲ್ಲಿ ಎಸ್‌ಪಿ ನಡುವೆ ಮೈತ್ರಿ ಮಾಡುವ ವಿಚಾರ ಇದ್ದರೆ ಅದನ್ನು ಸಾರ್ವಜನಿಕವಾಗಿ ಘೋಷಿಸಲಾಗುತ್ತದೆ. ರಹಸ್ಯವಾಗಿ ಏನನ್ನೂ ಮಾಡುವುದಿಲ್ಲ ಎಂದಿದ್ದಾರೆ.

ಮೈತ್ರಿಕೂಟ ಮಾತುಕತೆ ಚುರುಕು
ತ್ರಿಪುರ ಫ‌ಲಿತಾಂಶದಿಂದ ಕಂಗೆಟ್ಟಿರುವ ಸಿಪಿಎಂ, ಹಾಲಿ ಹಿನ್ನಡೆಗೆ ಪಕ್ಷದ ಮಾಜಿ ಪ್ರಧಾನ ಕಾರ್ಯ ದರ್ಶಿ ಪ್ರಕಾಶ್‌ ಕಾರಟ್‌ ಕಾರಣ ಎಂದು ಸೀತಾ ರಾಮ್‌ ಯೆಚೂರಿ ಬೆಂಬಲಿಗರು ದೂರಿದ್ದಾರೆ. ಬಿಜೆಪಿ ವಿರೋಧಿ ಪಕ್ಷಗಳ ಜತೆ ಮೈತ್ರಿ ಮಾಡಿಕೊಳ್ಳದೇ ಇರುವ ಕಾರಟ್‌ ನಿಲುವಿನಿಂದಲೇ ಸೋಲಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ನಡುವೆ ಸುದ್ದಿ ಸಂಸ್ಥೆ ಜತೆ ಮಾತನಾಡಿದ ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್‌ ಯೆಚೂರಿ, ಎಪ್ರಿಲ್‌ನಲ್ಲಿ ನಡೆಯಲಿರುವ ಸಭೆಯಲ್ಲಿ ಸೋಲಿನ ಕಾರಣಗಳ ಬಗ್ಗೆ ಚರ್ಚಿಸಲಾಗುತ್ತದೆ ಎಂದಿದ್ದಾರೆ. ಕಾಂಗ್ರೆಸ್‌ ಮತ್ತು ಬಿಜೆಪಿಗೆ ಪರ್ಯಾಯವಾಗಿರುವ ಆಯ್ಕೆಗಳನ್ನು ಮತದಾರರಿಗೆ ನೀಡಬೇಕಾಗಿತ್ತು ಎಂದು ಪಶ್ಚಿಮ ಬಂಗಾಲದ ಸಿಪಿಎಂ ನಾಯಕರೊ ಬ್ಬರು ಹೇಳಿಕೊಂಡಿದ್ದಾರೆ. ಆದರೆ ಈ ಬಗ್ಗೆ ಪ್ರಕಾಶ್‌ ಕಾರಟ್‌ ಬೆಂಬಲಿಗರು ಒಪ್ಪಲಿಲ್ಲ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.