ದಯಾಮರಣಕ್ಕಾಗಿ ರಾಷ್ಟ್ರಪತಿಗೆ ಪತ್ರ ಬರೆದ ಉ.ಪ್ರ. ಮಹಿಳೆ, ಪುತ್ರಿ
Team Udayavani, Mar 13, 2018, 12:40 PM IST
ಕಾನ್ಪುರ : ಅಸ್ಥಿ ಮಜ್ಜೆ ದುರ್ಬಲಗೊಂಡು ದೇಹವು ನಿಶ್ಚೇಷ್ಟಿತವಾಗಿ ಇದ್ದಲ್ಲೇ ಬಿದ್ದಿರುವ ಕಾಯಿಲೆಯಿಂದ ನರಳುತ್ತಿರುವ, ಉತ್ತರ ಪ್ರದೇಶದ ಕಾನ್ಪುರದವರಾದ, 59 ವರ್ಷ ಪ್ರಾಯದ ಶಶಿ ಮಿಶ್ರಾ ಮತ್ತು ಆಕೆಯ 33 ವರ್ಷ ಪ್ರಾಯದ ಪುತ್ರಿ ಅನಾಮಿಕಾ ಮಿಶ್ರಾ ಅವರು ತಮಗೆ ಪರೋಕ್ಷ ದಯಾ ಮರಣವನ್ನು ದಯಪಾಲಿಸಬೇಕೆಂದು ರಾಷ್ಟ್ರಪತಿ ರಾಮ ನಾಥ್ ಕೋವಿಂದ್ ಅವರಿಗೆ ಪತ್ರ ಬರೆದು ಬೇಡಿಕೊಂಡಿದ್ದಾರೆ.
ಸಿಟಿ ಮ್ಯಾಜಿಸ್ಟ್ರೇಟ್ ರಾಜ ನಾರಾಯಣ ಪಾಂಡೆ ಅವರು, ತಾಯಿ – ಮಗಳ ಈ ಪತ್ರವನ್ನು ರಾಷ್ಟ್ರಪತಿಗಳ ಕಾರ್ಯಾಲಯಕ್ಕೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.
ಅನಾಮಿಕಾ ಮಿಶ್ರಾ ಅವರು, ತಾನು ಹಾಗೂ ತನ್ನ ತಾಯಿ ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಮತ್ತು ಸುಪ್ರೀಂ ಕೋರ್ಟ್ ವರಿಷ್ಠ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರಿಗೂ ಪತ್ರ ಬರೆದು ತಮಗೆ ಪರೋಕ್ಷ ದಯಾಮರಣವನ್ನು ಕರುಣಿಸಬೇಕೆಂದು ಪತ್ರ ಬರೆದಿರುವುದಾಗಿ ಹೇಳಿದ್ದಾರೆ.
ಈ ತಾಯಿ – ಮಗಳು ಮಸ್ಕ್ಯುಲರ್ ಡಿಸ್ಟ್ರೋಫಿ ಎಂಬ ಅಸ್ಥಿಮಜ್ಜೆ ಕಾಯಿಲೆಯಿಂದ ಬಳಲುತ್ತಿದ್ದು ಹಾಸಿಗೆಯಿಂದ ಏಳಲಾರದ, ಚಲಿಸಲಾರದ ಸ್ಥಿತಿಯಲ್ಲಿ ವರ್ಷಾನುಗಟ್ಟೆಲೆಯಿಂದ ಇದ್ದಾರೆ. ಇದು ಆನುವಂಶಿಕ ಕಾಯಿಲೆಯಾಗಿದ್ದು ತನ್ನ ತಂದೆ 15 ವರ್ಷಗಳ ಹಿಂದೆ ಮೃತಪಟ್ಟಿದ್ದರೆ ಎಂದು ಅನಾಮಿಕಾ ಮಿಶ್ರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ