ಹಾಲು ಕಲಬೆರಕೆ ಜಾಮೀನು ರಹಿತ ಅಪರಾಧವಾಗಲಿದೆ !


Team Udayavani, Mar 14, 2018, 3:02 PM IST

2-bggg.jpg

ಮುಂಬಯಿ: ರಾಜ್ಯದಲ್ಲಿ ಇನ್ನು ಹಾಲು ಕಲಬೆರಕೆ ಮಾಡಿದರೆ, ದೀರ್ಘ‌ಕಾಲದ ವರೆಗೆ ಜೈಲಿನಲ್ಲಿ ಉಳಿಯಬೇಕಾಗುತ್ತದೆ! ಜೀವಕ್ಕೆ ಮಾರಕವಾಗಿರುವ ಹಾಲು ಕಲಬೆರಕೆ ಪ್ರವೃತ್ತಿ ವಿರುದ್ಧ ಕಠಿನ ಕ್ರಮ ಕೈಗೊಳ್ಳಲು ಮುಂದಾ ಗಿರುವ ಮಹಾರಾಷ್ಟ್ರ ಸರಕಾರವು, ರಾಜ್ಯದಲ್ಲಿ ಹಾಲು ಕಲಬೆರಕೆಯನ್ನು ಜಾಮೀನು ರಹಿತ ಅಪರಾಧದ ಶ್ರೇಣಿಯಲ್ಲಿ ಇರಿಸಲು ಹಾಗೂ ಇದರ ಅಡಿಯಲ್ಲಿ ಅಪರಾಧಿಗಳಿಗೆ ಮೂರು ವರ್ಷಗಳ ತನಕ ಜೈಲು ಶಿಕ್ಷೆಯನ್ನು ವಿಧಿಸಲು ಚಿಂತನೆ ನಡೆಸಿದೆ.

ಹಾಲು ಕಲಬೆರಕೆಯ ಶಿಕ್ಷೆಯನ್ನು ಮೂರು ವರ್ಷಕ್ಕೆ ಹೆಚ್ಚಿಸಿದಲ್ಲಿ, ಆರೋಪಿಗಳಿಗೆ ಜಾಮೀನು ಪಡೆಯಲು ಯಾವುದೇ ಅವಕಾಶ ಸಿಗುವುದಿಲ್ಲ ಎಂದು ರಾಜ್ಯದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಗಿರೀಶ್‌ ಬಾಪಟ್‌ ಅವರು ಮಂಗಳವಾರ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಅವರು ಕೆಳಮನೆಯಲ್ಲಿ ಬಿಜೆಪಿ ಶಾಸಕ ಅಮೀತ್‌ ಸತಮ್‌ ಹಾಗೂ ಇತರರು ಗಮನ ಸೆಳೆವ ಸೂಚನೆಯ ಮೂಲಕ ಹಾಲು ಕಲಬೆರಕೆ ವಿಷಯದ ಬಗ್ಗೆ ಬೆಳೆಸಿದ ಚರ್ಚೆಗೆ ಪ್ರತಿಕ್ರಿಯಿಸುತ್ತಿದ್ದರು.

ಸದ್ಯಕ್ಕೆ ರಾಜ್ಯದಲ್ಲಿ ಹಾಲು ಕಲಬೆರಕೆಯು  ಗರಿಷ್ಠ 6 ತಿಂಗಳ ಜೈಲು ಶಿಕ್ಷೆಯನ್ನು ಒಳಗೊಂಡಿರುವ ಒಂದು ಜಾಮೀನು ಸಹಿತ ಅಪರಾಧವಾಗಿದ್ದು, ಇದನ್ನು ಜಾಮೀನು ರಹಿತ ಅಪರಾಧವನ್ನಾಗಿ ಪರಿಗಣಿಸಲು ರಾಜ್ಯ ಸರಕಾರವು ಪೊಲೀಸ್‌ ಮಹಾನಿರ್ದೇಶಕರು ಹಾಗೂ ಕಾನೂನು ಮತ್ತು ನ್ಯಾಯಾಂಗ ಇಲಾಖೆಯೊಂದಿಗೆ ಚರ್ಚೆ ನಡೆಸಿದೆ ಎಂದು ಬಾಪಟ್‌ ತಿಳಿಸಿದರು.ಶಿಕ್ಷೆಯ ಅವಧಿಯು ಮೂರು ವರ್ಷಗಳ ವರೆಗೆ ವಿಸ್ತರಿಸಲ್ಪಟ್ಟರೆ, ಆರೋಪಿಗಳಿಗೆ ಜಾಮೀನು ಪಡೆಯಲು ಯಾವುದೇ ಅವಕಾಶ ಸಿಗುವುದಿಲ್ಲ ಎಂದು ತಿಳಿಸಿದ ಎಫ್‌ಡಿಎ ಸಚಿವ ಬಾಪಟ್‌ ಅವರು, ಇದಕ್ಕೆ ಸಂಬಂಧಪಟ್ಟ ಕಾನೂನುವೊಂದನ್ನು  ಸರಕಾರವು ಶೀಘ್ರದಲ್ಲೇ ಜಾರಿಗೆ ತರಲಿದೆ ಎಂದರು.

ಇಂತಹ ಅಪರಾಧಗಳಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಬೇಕೆಂದು ಸದನದಲ್ಲಿ ಹಲವು ಮಂದಿ ಸದಸ್ಯರು ಒತ್ತಾಯಿಸಿದರು. ಆದರೆ, ಸಚಿವರು  ಜೀವಾವಧಿ ಶಿಕ್ಷೆಯನ್ನು ಒಳಗೊಂಡ ಕಾನೂನನ್ನು ಜಾರಿಗೆ ತರುವಲ್ಲಿ ಹಲವು ತೊಡಕುಗಳನ್ನು ಉಲ್ಲೇಖೀಸಿದರು. ಪ್ರಸ್ತುತ ಹಾಲಿನ ಕಲಬೆರಕೆಯನ್ನು ಪರೀಕ್ಷಿಸಲು ರಾಜ್ಯದಲ್ಲಿ ಮೂರು ಮೊಬೈಲ್‌ ವ್ಯಾನ್‌ಗಳಿಗೆವೆ ಎಂದು ತಿಳಿಸಿದ ಬಾಪಟ್‌ ಅವರು, ಈ ಪರೀಕ್ಷೆಗಳನ್ನು ನಿಯಮಿತವಾಗಿ ನಡೆಸಲಾಗುವುದಿಲ್ಲ ಎಂಬುದನ್ನು ಒಪ್ಪಿಕೊಂಡರು.ಆದಾಗ್ಯೂ, ನಿಯಮಿತ ಪರೀಕ್ಷೆಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಲಾಗುವುದು ಎಂದವರು ಸದನಕ್ಕೆ ಭರವಸೆಯನ್ನು ನೀಡಿದರು.ಆರಂಭದಲ್ಲಿ ಬಿಜೆಪಿ ಶಾಸಕ ಸತಮ್‌ ಅವರು, ಮುಂಬಯಿಯಲ್ಲಿ ಸಿಗುವ ಶೇ. 30ಕ್ಕೂ ಅಧಿಕ ಹಾಲು ಕಲಬೆರಕೆಯಿಂದ ಕೂಡಿದ್ದಾಗಿದೆ ಎಂದು ಪ್ರತಿಪಾದಿಸಿದರು.ಮೊಬೈಲ್‌ ವ್ಯಾನ್‌ಗಳು ಹಾಗೂ ಸಿಬಂದಿಗಳ ಕೊರತೆಯಿಂದಾಗಿ ಮುಂಬಯಿಗೆ ತರಿಸಲಾಗುವ ಹಾಲುಗಳ ಅನಿರೀಕ್ಷಿತ ಪರೀಕ್ಷೆ ನಡೆಸಲಾಗುತ್ತಿಲ್ಲ ಎಂದವರು ತಿಳಿಸಿದರು.
 

ಟಾಪ್ ನ್ಯೂಸ್

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

man hits his wife because he could not afford the treatment!

ಚಿಕಿತ್ಸೆ ವೆಚ್ಚ ಭರಿಸಲಾಗದೆ ಹೆಂಡತಿಯನ್ನೇ ಕೊಂದ!

Teacher Recruitment Scam: Supreme Court Slams Bengal Govt

West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CSIR: Opportunity to wear unironed clothes every Monday!

CSIR: ಪ್ರತೀ ಸೋಮವಾರ ಇಸ್ತ್ರಿ ಹಾಕದ ವಸ್ತ್ರ ಧರಿಸಲು ಅವಕಾಶ!

Teacher Recruitment Scam: Supreme Court Slams Bengal Govt

West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

Torture of husband by burning with cigarette: Wife arrested based on CCTV video

Bijnor; ಸಿಗರೇಟಿಂದ ಸುಟ್ಟು ಪತಿಗೆ ಚಿತ್ರಹಿಂಸೆ: ಸಿಸಿಟಿವಿ ವಿಡಿಯೋ ಆಧರಿಸಿ ಪತ್ನಿ ಸೆರೆ

Encounter in Kashmir:

ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

Man shot a Cow on head twice

Manipur; ಹಸುವಿಗೆ ಗುಂಡಿಟ್ಟು ಕೊಂದ ಕ್ರೂರಿ!: ವ್ಯಾಪಕ ಆಕ್ರೋಶ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.