ಹಾಲು ಕಲಬೆರಕೆ ಜಾಮೀನು ರಹಿತ ಅಪರಾಧವಾಗಲಿದೆ !


Team Udayavani, Mar 14, 2018, 3:02 PM IST

2-bggg.jpg

ಮುಂಬಯಿ: ರಾಜ್ಯದಲ್ಲಿ ಇನ್ನು ಹಾಲು ಕಲಬೆರಕೆ ಮಾಡಿದರೆ, ದೀರ್ಘ‌ಕಾಲದ ವರೆಗೆ ಜೈಲಿನಲ್ಲಿ ಉಳಿಯಬೇಕಾಗುತ್ತದೆ! ಜೀವಕ್ಕೆ ಮಾರಕವಾಗಿರುವ ಹಾಲು ಕಲಬೆರಕೆ ಪ್ರವೃತ್ತಿ ವಿರುದ್ಧ ಕಠಿನ ಕ್ರಮ ಕೈಗೊಳ್ಳಲು ಮುಂದಾ ಗಿರುವ ಮಹಾರಾಷ್ಟ್ರ ಸರಕಾರವು, ರಾಜ್ಯದಲ್ಲಿ ಹಾಲು ಕಲಬೆರಕೆಯನ್ನು ಜಾಮೀನು ರಹಿತ ಅಪರಾಧದ ಶ್ರೇಣಿಯಲ್ಲಿ ಇರಿಸಲು ಹಾಗೂ ಇದರ ಅಡಿಯಲ್ಲಿ ಅಪರಾಧಿಗಳಿಗೆ ಮೂರು ವರ್ಷಗಳ ತನಕ ಜೈಲು ಶಿಕ್ಷೆಯನ್ನು ವಿಧಿಸಲು ಚಿಂತನೆ ನಡೆಸಿದೆ.

ಹಾಲು ಕಲಬೆರಕೆಯ ಶಿಕ್ಷೆಯನ್ನು ಮೂರು ವರ್ಷಕ್ಕೆ ಹೆಚ್ಚಿಸಿದಲ್ಲಿ, ಆರೋಪಿಗಳಿಗೆ ಜಾಮೀನು ಪಡೆಯಲು ಯಾವುದೇ ಅವಕಾಶ ಸಿಗುವುದಿಲ್ಲ ಎಂದು ರಾಜ್ಯದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಗಿರೀಶ್‌ ಬಾಪಟ್‌ ಅವರು ಮಂಗಳವಾರ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಅವರು ಕೆಳಮನೆಯಲ್ಲಿ ಬಿಜೆಪಿ ಶಾಸಕ ಅಮೀತ್‌ ಸತಮ್‌ ಹಾಗೂ ಇತರರು ಗಮನ ಸೆಳೆವ ಸೂಚನೆಯ ಮೂಲಕ ಹಾಲು ಕಲಬೆರಕೆ ವಿಷಯದ ಬಗ್ಗೆ ಬೆಳೆಸಿದ ಚರ್ಚೆಗೆ ಪ್ರತಿಕ್ರಿಯಿಸುತ್ತಿದ್ದರು.

ಸದ್ಯಕ್ಕೆ ರಾಜ್ಯದಲ್ಲಿ ಹಾಲು ಕಲಬೆರಕೆಯು  ಗರಿಷ್ಠ 6 ತಿಂಗಳ ಜೈಲು ಶಿಕ್ಷೆಯನ್ನು ಒಳಗೊಂಡಿರುವ ಒಂದು ಜಾಮೀನು ಸಹಿತ ಅಪರಾಧವಾಗಿದ್ದು, ಇದನ್ನು ಜಾಮೀನು ರಹಿತ ಅಪರಾಧವನ್ನಾಗಿ ಪರಿಗಣಿಸಲು ರಾಜ್ಯ ಸರಕಾರವು ಪೊಲೀಸ್‌ ಮಹಾನಿರ್ದೇಶಕರು ಹಾಗೂ ಕಾನೂನು ಮತ್ತು ನ್ಯಾಯಾಂಗ ಇಲಾಖೆಯೊಂದಿಗೆ ಚರ್ಚೆ ನಡೆಸಿದೆ ಎಂದು ಬಾಪಟ್‌ ತಿಳಿಸಿದರು.ಶಿಕ್ಷೆಯ ಅವಧಿಯು ಮೂರು ವರ್ಷಗಳ ವರೆಗೆ ವಿಸ್ತರಿಸಲ್ಪಟ್ಟರೆ, ಆರೋಪಿಗಳಿಗೆ ಜಾಮೀನು ಪಡೆಯಲು ಯಾವುದೇ ಅವಕಾಶ ಸಿಗುವುದಿಲ್ಲ ಎಂದು ತಿಳಿಸಿದ ಎಫ್‌ಡಿಎ ಸಚಿವ ಬಾಪಟ್‌ ಅವರು, ಇದಕ್ಕೆ ಸಂಬಂಧಪಟ್ಟ ಕಾನೂನುವೊಂದನ್ನು  ಸರಕಾರವು ಶೀಘ್ರದಲ್ಲೇ ಜಾರಿಗೆ ತರಲಿದೆ ಎಂದರು.

ಇಂತಹ ಅಪರಾಧಗಳಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಬೇಕೆಂದು ಸದನದಲ್ಲಿ ಹಲವು ಮಂದಿ ಸದಸ್ಯರು ಒತ್ತಾಯಿಸಿದರು. ಆದರೆ, ಸಚಿವರು  ಜೀವಾವಧಿ ಶಿಕ್ಷೆಯನ್ನು ಒಳಗೊಂಡ ಕಾನೂನನ್ನು ಜಾರಿಗೆ ತರುವಲ್ಲಿ ಹಲವು ತೊಡಕುಗಳನ್ನು ಉಲ್ಲೇಖೀಸಿದರು. ಪ್ರಸ್ತುತ ಹಾಲಿನ ಕಲಬೆರಕೆಯನ್ನು ಪರೀಕ್ಷಿಸಲು ರಾಜ್ಯದಲ್ಲಿ ಮೂರು ಮೊಬೈಲ್‌ ವ್ಯಾನ್‌ಗಳಿಗೆವೆ ಎಂದು ತಿಳಿಸಿದ ಬಾಪಟ್‌ ಅವರು, ಈ ಪರೀಕ್ಷೆಗಳನ್ನು ನಿಯಮಿತವಾಗಿ ನಡೆಸಲಾಗುವುದಿಲ್ಲ ಎಂಬುದನ್ನು ಒಪ್ಪಿಕೊಂಡರು.ಆದಾಗ್ಯೂ, ನಿಯಮಿತ ಪರೀಕ್ಷೆಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಲಾಗುವುದು ಎಂದವರು ಸದನಕ್ಕೆ ಭರವಸೆಯನ್ನು ನೀಡಿದರು.ಆರಂಭದಲ್ಲಿ ಬಿಜೆಪಿ ಶಾಸಕ ಸತಮ್‌ ಅವರು, ಮುಂಬಯಿಯಲ್ಲಿ ಸಿಗುವ ಶೇ. 30ಕ್ಕೂ ಅಧಿಕ ಹಾಲು ಕಲಬೆರಕೆಯಿಂದ ಕೂಡಿದ್ದಾಗಿದೆ ಎಂದು ಪ್ರತಿಪಾದಿಸಿದರು.ಮೊಬೈಲ್‌ ವ್ಯಾನ್‌ಗಳು ಹಾಗೂ ಸಿಬಂದಿಗಳ ಕೊರತೆಯಿಂದಾಗಿ ಮುಂಬಯಿಗೆ ತರಿಸಲಾಗುವ ಹಾಲುಗಳ ಅನಿರೀಕ್ಷಿತ ಪರೀಕ್ಷೆ ನಡೆಸಲಾಗುತ್ತಿಲ್ಲ ಎಂದವರು ತಿಳಿಸಿದರು.
 

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.