ಹಾಲು ಕಲಬೆರಕೆ ಜಾಮೀನು ರಹಿತ ಅಪರಾಧವಾಗಲಿದೆ !


Team Udayavani, Mar 14, 2018, 3:02 PM IST

2-bggg.jpg

ಮುಂಬಯಿ: ರಾಜ್ಯದಲ್ಲಿ ಇನ್ನು ಹಾಲು ಕಲಬೆರಕೆ ಮಾಡಿದರೆ, ದೀರ್ಘ‌ಕಾಲದ ವರೆಗೆ ಜೈಲಿನಲ್ಲಿ ಉಳಿಯಬೇಕಾಗುತ್ತದೆ! ಜೀವಕ್ಕೆ ಮಾರಕವಾಗಿರುವ ಹಾಲು ಕಲಬೆರಕೆ ಪ್ರವೃತ್ತಿ ವಿರುದ್ಧ ಕಠಿನ ಕ್ರಮ ಕೈಗೊಳ್ಳಲು ಮುಂದಾ ಗಿರುವ ಮಹಾರಾಷ್ಟ್ರ ಸರಕಾರವು, ರಾಜ್ಯದಲ್ಲಿ ಹಾಲು ಕಲಬೆರಕೆಯನ್ನು ಜಾಮೀನು ರಹಿತ ಅಪರಾಧದ ಶ್ರೇಣಿಯಲ್ಲಿ ಇರಿಸಲು ಹಾಗೂ ಇದರ ಅಡಿಯಲ್ಲಿ ಅಪರಾಧಿಗಳಿಗೆ ಮೂರು ವರ್ಷಗಳ ತನಕ ಜೈಲು ಶಿಕ್ಷೆಯನ್ನು ವಿಧಿಸಲು ಚಿಂತನೆ ನಡೆಸಿದೆ.

ಹಾಲು ಕಲಬೆರಕೆಯ ಶಿಕ್ಷೆಯನ್ನು ಮೂರು ವರ್ಷಕ್ಕೆ ಹೆಚ್ಚಿಸಿದಲ್ಲಿ, ಆರೋಪಿಗಳಿಗೆ ಜಾಮೀನು ಪಡೆಯಲು ಯಾವುದೇ ಅವಕಾಶ ಸಿಗುವುದಿಲ್ಲ ಎಂದು ರಾಜ್ಯದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಗಿರೀಶ್‌ ಬಾಪಟ್‌ ಅವರು ಮಂಗಳವಾರ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಅವರು ಕೆಳಮನೆಯಲ್ಲಿ ಬಿಜೆಪಿ ಶಾಸಕ ಅಮೀತ್‌ ಸತಮ್‌ ಹಾಗೂ ಇತರರು ಗಮನ ಸೆಳೆವ ಸೂಚನೆಯ ಮೂಲಕ ಹಾಲು ಕಲಬೆರಕೆ ವಿಷಯದ ಬಗ್ಗೆ ಬೆಳೆಸಿದ ಚರ್ಚೆಗೆ ಪ್ರತಿಕ್ರಿಯಿಸುತ್ತಿದ್ದರು.

ಸದ್ಯಕ್ಕೆ ರಾಜ್ಯದಲ್ಲಿ ಹಾಲು ಕಲಬೆರಕೆಯು  ಗರಿಷ್ಠ 6 ತಿಂಗಳ ಜೈಲು ಶಿಕ್ಷೆಯನ್ನು ಒಳಗೊಂಡಿರುವ ಒಂದು ಜಾಮೀನು ಸಹಿತ ಅಪರಾಧವಾಗಿದ್ದು, ಇದನ್ನು ಜಾಮೀನು ರಹಿತ ಅಪರಾಧವನ್ನಾಗಿ ಪರಿಗಣಿಸಲು ರಾಜ್ಯ ಸರಕಾರವು ಪೊಲೀಸ್‌ ಮಹಾನಿರ್ದೇಶಕರು ಹಾಗೂ ಕಾನೂನು ಮತ್ತು ನ್ಯಾಯಾಂಗ ಇಲಾಖೆಯೊಂದಿಗೆ ಚರ್ಚೆ ನಡೆಸಿದೆ ಎಂದು ಬಾಪಟ್‌ ತಿಳಿಸಿದರು.ಶಿಕ್ಷೆಯ ಅವಧಿಯು ಮೂರು ವರ್ಷಗಳ ವರೆಗೆ ವಿಸ್ತರಿಸಲ್ಪಟ್ಟರೆ, ಆರೋಪಿಗಳಿಗೆ ಜಾಮೀನು ಪಡೆಯಲು ಯಾವುದೇ ಅವಕಾಶ ಸಿಗುವುದಿಲ್ಲ ಎಂದು ತಿಳಿಸಿದ ಎಫ್‌ಡಿಎ ಸಚಿವ ಬಾಪಟ್‌ ಅವರು, ಇದಕ್ಕೆ ಸಂಬಂಧಪಟ್ಟ ಕಾನೂನುವೊಂದನ್ನು  ಸರಕಾರವು ಶೀಘ್ರದಲ್ಲೇ ಜಾರಿಗೆ ತರಲಿದೆ ಎಂದರು.

ಇಂತಹ ಅಪರಾಧಗಳಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಬೇಕೆಂದು ಸದನದಲ್ಲಿ ಹಲವು ಮಂದಿ ಸದಸ್ಯರು ಒತ್ತಾಯಿಸಿದರು. ಆದರೆ, ಸಚಿವರು  ಜೀವಾವಧಿ ಶಿಕ್ಷೆಯನ್ನು ಒಳಗೊಂಡ ಕಾನೂನನ್ನು ಜಾರಿಗೆ ತರುವಲ್ಲಿ ಹಲವು ತೊಡಕುಗಳನ್ನು ಉಲ್ಲೇಖೀಸಿದರು. ಪ್ರಸ್ತುತ ಹಾಲಿನ ಕಲಬೆರಕೆಯನ್ನು ಪರೀಕ್ಷಿಸಲು ರಾಜ್ಯದಲ್ಲಿ ಮೂರು ಮೊಬೈಲ್‌ ವ್ಯಾನ್‌ಗಳಿಗೆವೆ ಎಂದು ತಿಳಿಸಿದ ಬಾಪಟ್‌ ಅವರು, ಈ ಪರೀಕ್ಷೆಗಳನ್ನು ನಿಯಮಿತವಾಗಿ ನಡೆಸಲಾಗುವುದಿಲ್ಲ ಎಂಬುದನ್ನು ಒಪ್ಪಿಕೊಂಡರು.ಆದಾಗ್ಯೂ, ನಿಯಮಿತ ಪರೀಕ್ಷೆಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಲಾಗುವುದು ಎಂದವರು ಸದನಕ್ಕೆ ಭರವಸೆಯನ್ನು ನೀಡಿದರು.ಆರಂಭದಲ್ಲಿ ಬಿಜೆಪಿ ಶಾಸಕ ಸತಮ್‌ ಅವರು, ಮುಂಬಯಿಯಲ್ಲಿ ಸಿಗುವ ಶೇ. 30ಕ್ಕೂ ಅಧಿಕ ಹಾಲು ಕಲಬೆರಕೆಯಿಂದ ಕೂಡಿದ್ದಾಗಿದೆ ಎಂದು ಪ್ರತಿಪಾದಿಸಿದರು.ಮೊಬೈಲ್‌ ವ್ಯಾನ್‌ಗಳು ಹಾಗೂ ಸಿಬಂದಿಗಳ ಕೊರತೆಯಿಂದಾಗಿ ಮುಂಬಯಿಗೆ ತರಿಸಲಾಗುವ ಹಾಲುಗಳ ಅನಿರೀಕ್ಷಿತ ಪರೀಕ್ಷೆ ನಡೆಸಲಾಗುತ್ತಿಲ್ಲ ಎಂದವರು ತಿಳಿಸಿದರು.
 

ಟಾಪ್ ನ್ಯೂಸ್

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.