ಉತ್ತರ ಪ್ರದೇಶ: ಸೋಲಿನ ಯೋಗ
Team Udayavani, Mar 15, 2018, 6:00 AM IST
ಹೊಸದಿಲ್ಲಿ: ಉತ್ತರ ಪ್ರದೇಶದ ಎರಡು ಹೈವೋಲ್ಟೆಜ್ ಕ್ಷೇತ್ರ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಉಪ
ಮುಖ್ಯ ಮಂತ್ರಿ ಕೇಶವ್ ಪ್ರಸಾದ ಮೌರ್ಯ ಕ್ಷೇತ್ರಗಳಾದ ಗೋರಖ್ಪುರ ಮತ್ತು ಫೂಲ್ಪುರದಲ್ಲಿ ಬಿಜೆಪಿ ಮುಖಭಂಗ ಅನುಭವಿಸಿದೆ.
ಯೋಗಿ ಆದಿತ್ಯನಾಥ್ ಮತ್ತು ಕೇಶವ ಪ್ರಸಾದ್ ಮೌರ್ಯ ಅವರು ಸಿಎಂ ಮತ್ತು ಡಿಸಿಎಂ ಸ್ಥಾನಕ್ಕೇರಿದ ಬಳಿಕ ಲೋಕ ಸಭೆ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರಿಂದ ಈ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿತ್ತು. ಈ ಎರಡೂ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಸಮಾಜವಾದಿ, ಬಹುಜನ ಸಮಾಜವಾದಿ ಪಕ್ಷಗಳು ಮೈತ್ರಿ ಮಾಡಿಕೊಂಡ ತಂತ್ರಗಾರಿಕೆ ಕೆಲಸ ಮಾಡಿದ್ದು, ಅಖೀಲೇಶ್ ಅಭ್ಯರ್ಥಿಗಳೇ ಗೆದ್ದಿದ್ದಾರೆ. ಆದರೆ, ಈ ಸೋಲು ಬಿಜೆಪಿ ಪಾಲಿಗೆ ಭರಿಸಲಾಗದ ಪೆಟ್ಟು ನೀಡಿದೆ. ಇನ್ನು 1989ರಿಂದಲೂ ಗೋರಖ್ಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳೇ ಗೆಲ್ಲುತ್ತಾ ಬಂದಿದ್ದು ಭದ್ರ ಕೋಟೆಯಂತಿತ್ತು. ಫೂಲ್ಪು ರ ಕ್ಷೇತ್ರ ಕಳೆದ ಬಾರಿ ಯಷ್ಟೇ ಬಿಜೆಪಿ ಮುಡಿಗೆ ಬಂದಿತ್ತು. ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ನ ಎರಡೂ ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ.
ಹಾವು ಮತ್ತು ಮುಂಗುಸಿ ಒಟ್ಟಾಗಿದ್ದರಿಂದ ಬಿಜೆಪಿ ಈ ಸ್ಥಾನವನ್ನು ಕಳೆದುಕೊಂಡಿತು ಎಂದು ಎಸ್ಪಿ ಹಾಗೂ ಬಿಎಸ್ಪಿಯನ್ನು ಉಲ್ಲೇಖೀಸಿ ಉ.ಪ್ರ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಜತೆಗೆ ಪಕ್ಷದ ಅತಿ ಯಾದ ಆತ್ಮ
ವಿಶ್ವಾಸವೂ ಸೋಲಿಗೆ ಕಾರಣವಾಗಿದೆ ಎಂದು ಹೇಳಿದ್ದಾರೆ.
2019ರಲ್ಲೂ ಇದೇ ಒಪ್ಪಂದ?:
ಗೆಲುವು ಖಚಿತವಾಗುತ್ತಿದ್ದಂತೆಯೇ, ಅಖೀಲೇಶ್ ಯಾದವ್ ಸುದ್ದಿಗೋಷ್ಠಿಯಲ್ಲಿ ಮಾಯಾವತಿಗೆ ಧನ್ಯವಾದ ತಿಳಿಸಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲೂ ಈ ಮೈತ್ರಿ ಮುಂದುವರಿಯುವ ಸಾಧ್ಯತೆಗಳಿವೆ.
ಬಿಹಾರದಲ್ಲಿ ಆರ್ಜೆಡಿ ಮೇಲುಗೈ
ಇದೇ ವೇಳೆ ಬಿಹಾರದಲ್ಲಿ ಆರ್ಜೆಡಿ ಮೇಲುಗೈ ಸಾಧಿಸಿದೆ. ಅರಾರಿಯಾ ಮತ್ತು ಜೆಹಾನಾಬಾದ್ ಲೋಕ ಸಭಾ ಕ್ಷೇತ್ರಗಳಲ್ಲಿ ಆರ್ಜೆಡಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಇನ್ನು ಬಭುವಾ ಕ್ಷೇತ್ರದಲ್ಲಿ ಬಿಜೆ ಪಿಯ ರಿಂಕಿ ರಾಣಿ ಪಾಂಡೆ ಗೆದ್ದಿದ್ದಾರೆ. ಗಮನಾರ್ಹ ಅಂಶವೆಂದರೆ ಆಯಾಯ ಕ್ಷೇತ್ರಗಳಲ್ಲಿ ಆರ್ಜೆಡಿ ಮತ್ತು ಬಿಜೆಪಿ ಗೆದ್ದಿದ್ದರೂ, ಸರ್ಕಾರಕ್ಕೆ ಹಿನ್ನಡೆ ಎಂದೇ ವ್ಯಾಖ್ಯಾನಿಸಲಾಗುತ್ತಿದೆ.
ನಮ್ಮ ಅತಿಯಾದ ಆತ್ಮವಿಶ್ವಾಸ ಮತ್ತು ಎದುರಾಳಿಗಳ ಒಳ ಮೈತ್ರಿಯನ್ನು ನಾವು ಸರಿಯಾಗಿ ವಿಶ್ಲೇಷಣೆ ನಡೆಸದೇ ಇರುವುದು ನಮ್ಮ ಸೋಲಿಗೆ ಕಾರಣವಾಯಿತು.
-ಯೋಗಿ ಆದಿತ್ಯನಾಥ್, ಉ.ಪ್ರ. ಸಿಎಂ
ಬಿಜೆಪಿ ಬಗ್ಗೆ ಜನರು ಕೋಪ ಗೊಂಡಿದ್ದಾರೆ ಎಂಬುದು ಈ ಫಲಿತಾಂಶಗಳಿಂದ ಸ್ಪಷ್ಟವಾಗಿ ಗೊತ್ತಾಗುತ್ತದೆ.ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ನ ಶಕ್ತಿ ವೃದ್ಧಿಗೆ ಪ್ರಯತ್ನ ನಡೆಸುತ್ತೇವೆ.
ರಾಹುಲ್ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
MUST WATCH
ಹೊಸ ಸೇರ್ಪಡೆ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್