2019ರಲ್ಲಿ ರಾಹುಲ್ ಪ್ರಧಾನಿಯಾಗುವುದನ್ನು ಯಾರೂ ತಡೆಯಲಾರರು
Team Udayavani, Mar 17, 2018, 3:27 PM IST
ಹೊಸದಿಲ್ಲಿ : 2019ರಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ದೇಶದ ಪ್ರಧಾನಿಯಾಗುವುದು ನಿಶ್ಚಿತ; ಅವರು ಪ್ರಧಾನಿಯಾಗುವುದನ್ನು ಯಾರೂ ತಡೆಯಲಾರರು ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ಶನಿವಾರ ಕಾಂಗ್ರೆಸ್ ಪೂರ್ಣಾಧಿವೇಶನದಲ್ಲಿ ಹೇಳಿದ್ದಾರೆ.
2019ರಲ್ಲಿ ಬಿಜೆಪಿ – ಆರ್ಎಸ್ಎಸ್ ಅನ್ನು ಸೋಲಿಸಲು ಸಮಾನ ಮನಸ್ಕ ರಾಜಕೀಯ ಪಕ್ಷಗಳೊಂದಿಗೆ ಸಹಕರಿಸುವ ಪ್ರಗತಿಪರ ತಂತ್ರೋಪಾಯವನ್ನು ರೂಪಿಸುವ ನಿರ್ಧಾರವನ್ನು ಕಾಂಗ್ರೆಸ್ ಪೂರ್ಣಾಧಿವೇಶನದಲ್ಲಿ ಕೈಗೊಳ್ಳಲಾಯಿತು.
2019ರ ಮಹಾ ಚುನಾವಣೆಗೆ ಮುನ್ನವೇ ವಿವಿಧ ರಾಜಕೀಯ ಪಕ್ಷಗಳೊಂದಿಗೆ ಮೈತ್ರಿ ಹೊಂದುವ ಸಾಧ್ಯತೆಯ ಬಗ್ಗೆಯೂ ಕಾಂಗ್ರೆಸ್ ಈ ಅಧಿವೇಶನದಲ್ಲಿ ಚಿಂತನೆ ನಡೆಸಿತು.
ರಾಷ್ಟ್ರ ಪಿತರ ದೂರದರ್ಶಿತ್ವವನ್ನು ಸಾಕಾರಗೊಳಿಸಲು ಪುನರುಜ್ಜೀವನ ಪಡೆದ ಕಾಂಗ್ರೆಸ್ನಿಂದ ಮಾತ್ರವೇ ಸಾಧ್ಯ ಎಂಬ ಕರಡು ನಿರ್ಣಯವನ್ನು ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮಂಡಿಸಿದರು.
ಮೂರು ದಿನಗಳ ಕಾಂಗ್ರೆಸ್ ಪೂರ್ಣಾಧಿವೇಶನದಲ್ಲಿ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪಕ್ಷದ ಮುಂದಿರುವ ಸವಾಲುಗಳನ್ನು ಹಾಗೂ ಸಾಧಿಸಬೇಕಾದ ಗುರಿಗಳನ್ನು ಪಟ್ಟಿ ಮಾಡಿದರು.
ಕಾಂಗ್ರೆಸ್ ಪಕ್ಷದ ಭವಿಷ್ಯವನ್ನು ಉಜ್ವಲಗೊಳಿಸುವ ಪ್ರಯತ್ನದಲ್ಲಿ ಎಲ್ಲ ಕಾರ್ಯಕರ್ತರು ನಿಷ್ಠೆಯಿಂದ ಕೈಜೋಡಿಸಿ ಪರಿಶ್ರಮಿಸಬೇಕು ಎಂದು ರಾಹುಲ್ ಕರೆ ನೀಡಿದರು.
ಕೇಂದ್ರದಲ್ಲಿನ ದುರಾಡಳಿತೆಗಾಗಿ ರಾಹುಲ್ ಗಾಂಧಿ, ಮೋದಿ ನೇತೃತ್ವದ ಬಿಜೆಪಿ ಸರಕಾರದ ವಿರುದ್ಧ ಕಟುವಾದ ವಾಕ್ ದಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್