ಈಗ ಗಡ್ಕರಿಯಲ್ಲಿ ಕೇಜ್ರಿ ಕ್ಷಮೆಯಾಚನೆ: ಮಾನಹಾನಿ ಕೇಸು ಹಿಂದಕ್ಕೆ
Team Udayavani, Mar 19, 2018, 3:33 PM IST
ಹೊಸದಿಲ್ಲಿ : ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಲ್ಲಿ ಕ್ಷಮೆಯಾಚಿಸುವ ಮೂಲಕ ಪಟಿಯಾಲ ಹೌಸ್ ಕೋರ್ಟ್ನಲ್ಲಿ ಬಾಕಿ ಇರುವ ಗಡ್ಕರಿ ವಿರುದ್ಧದ ಮಾನಹಾನಿ ದಾವೆಯನ್ನು ಹಿಂಪಡೆಯುವ ಸಲುವಾಗಿ ಗಡ್ಕರಿ ಜತೆಗಿನ ಜಂಟಿ ಹೇಳಿಕೆಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
“ವೈಯಕ್ತಿಕವಾಗಿ ನನಗೆ ನಿಮಗೆ ವಿರುದ್ಧ ಏನೂ ಹೇಳಲಿಕ್ಕಿಲ್ಲ. ಸತ್ಯಾಂಶಗಳನ್ನು ಪರಿಶೀಲಿಸದೆಯೇ ನಾನು ನಿಮ್ಮ ವಿರುದ್ಧ ಮಾಡಿರುವ ಆರೋಪಗಳಿಗೆ ವಿಷಾದ ವ್ಯಕ್ತಪಡಿಸಿ ಕ್ಷಮೆಯಾಚಿಸುತ್ತೇನೆ. ದಯವಿಟ್ಟು ಹಿಂದಿನದನ್ನು ಮರೆತು ಬಿಡಿ’ ಎಂದು ಸಚಿವ ಗಡ್ಕರಿ ಅವರಿಗೆ ಬರೆದಿರುವ ಪತ್ರದಲ್ಲಿ ಹೇಳಿದ್ದಾರೆ.
ಈ ಕ್ಷಮೆಯಾಚನೆಯನ್ನು ಅನುಸರಿಸಿ ನಿತಿನ್ ಗಡ್ಕರಿ ಅವರು ಅರವಿಂದ ಕೇಜ್ರಿವಾಲ್ ಜತೆಗಿನ ಜಂಟಿ ಹೇಳಿಕೆಗೆ ಸಹಿ ಹಾಕಿ ದಿಲ್ಲಿಯ ಪಟಿಯಾಲ ಕೋರ್ಟ್ ಹೌಸ್ ನ್ಯಾಯಾಲಯಕ್ಕೆ ಸಲ್ಲಿಸಿ ಅಲ್ಲಿ ವಿಚಾರಣೆ ಹಂತದಲ್ಲಿರುವ ಮಾನಹಾನಿ ದಾವೆಯನ್ನು ಹಿಂಪಡೆದುಕೊಂಡಿದ್ದಾರೆ.
ಅರವಿಂದ ಕೇಜ್ರಿವಾಲ್ ಅವರು ಪಂಜಾಬ್ ಮಾಜಿ ಕಂದಾಯ ಸಚಿವ ಬಿಕ್ರಂ ಸಿಂಗ್ ಮಜೀತಿಯ ಅವರಲ್ಲಿ ಕಳೆದ ವಾರವಷ್ಟೇ ಕ್ಷಮೆಯಾಚಿಸಿ ಅವರೊಂದಿಗಿನ ಮಾನಹಾನಿ ದಾವೆಯನ್ನು ಕೋರ್ಟಿನಲ್ಲಿ ಇತ್ಯರ್ಥಪಡಿಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ