ತಂದೆಯೊಡನೆ ಅನೈತಿಕ ಸಂಬಂಧ ಶಂಕೆ:ತಾಯಿಯಿಂದ ಮಗಳ ಕೊಲೆ
Team Udayavani, Mar 24, 2018, 8:58 AM IST
ನವೀ ಮುಂಬಯಿ: ತನ್ನ 16ರ ಹರೆಯದ ಮಗಳು ತಂದೆಯೊಡನೆ ಅನೈತಿಕ ಸಂಬಂಧ ಹೊಂದಿರುವ ಶಂಕೆಯ ಮೇಲೆ ಆಕೆಯ ತಾಯಿ ಮಗಳನ್ನು ಕತ್ತು ಹಿಸುಕಿ ಕೊಲೆಗೈದಿರುವ ಘಟನೆ ನಗರದ ಖಾರ್ಘರ್ನಲ್ಲಿ ನಡೆದಿದೆ.
ಮಾ.4ರಂದು ಈ ಘಟನೆ ನಡೆದಿದ್ದು ಈ ಘಟನೆಯ ಸಂಬಂಧ ಖಾರ್ಘರ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮಹಿಳೆಯ ಈ ಕೃತ್ಯದ ಹಿಂದೆ ಆಕೆಯ ಪತಿ ವಹಿಸಿದ್ದ ಪಾತ್ರದ ಕುರಿತಂತೆ ಇದೀಗ ಪೊಲೀಸರು ಆತನನ್ನು ತೀವ್ರ ವಿಚಾರಣೆಗೆ ಗುರಿಪಡಿಸಿದ್ದಾರೆ. ಆತ ನಿಜವಾಗಿಯೂ ತನ್ನ ಅಪ್ರಾಪ್ತ ವಯಸ್ಕ ಮಗಳೊಂದಿಗೆ ಅನೈತಿಕ ಸಂಬಂಧ ಹೊಂದಿದ್ದನೇ? ಎಂಬ ಬಗೆಗೆ ಇದೀಗ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈತ ಸಿವಿಲ್ ಗುತ್ತಿಗೆದಾರನಾಗಿದ್ದು ಈತನನ್ನು ಈವರೆಗೆ ಪೊಲೀಸರು ಬಂಧಿಸಿಲ್ಲ.
ಮಾ.4ರಂದು ತಾಯಿ-ಮಗಳೀರ್ವರೇ ಮನೆಯಲ್ಲಿ ಇದ್ದ ಸಂದರ್ಭದಲ್ಲಿ ಮಹಿಳೆ ದುಪ್ಪಟ್ಟಾವನ್ನು ಮಗಳ ಕುತ್ತಿಗೆಗೆ ಬಿಗಿದು ಆಕೆಯನ್ನು ಕೊಲೆಗೈದಿದ್ದಳು. ಕೃತ್ಯ ನಡೆಸಿದ ಬಳಿಕ ಮಹಿಳೆ ಪತಿಗೆ ಕರೆ ಮಾಡಿ ಮಗಳು ಅಸ್ವಸ್ಥಗೊಂಡಿದ್ದಾಳೆ ಎಂದು ತಿಳಿಸಿದ್ದಳು. ಆದರೆ ಆತ ಮನೆಗೆ ಮರಳಿದ ವೇಳೆ ಯುವತಿ ಸಾವನ್ನಪ್ಪಿದ್ದಳು. ಈ ಬಗ್ಗೆ ನೆರಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಯುವತಿಯ ಕುತ್ತಿಗೆಯನ್ನು ಬಿಗಿಯಲಾದ ಗುರುತುಗಳು ಕಂಡುಬಂ ದಿದ್ದವಾದರೂ ಸೂಕ್ತ ಸಾಕ್ಷ್ಯಾಧಾರಗಳು ಲಭಿಸದೇ ಇದ್ದುದರಿಂದ ಪೊಲೀಸರು ಅಸಹಜ ಸಾವಿನ ಪ್ರಕರಣವನ್ನು ದಾಖಲಿಸಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿಕೊಟ್ಟಿದ್ದರು. ಮರಣೋತ್ತರ ಪರೀಕ್ಷಾ ವರದಿಯಲ್ಲಿ ಆಕೆಯ ಕುತ್ತಿಗೆಯನ್ನು ಬಿಗಿದು ಕೊಲೆಗೈದಿರುವುದು ದೃಢಪಟ್ಟಿತ್ತು. ಇದಾದ ಬಳಿಕ ಪೊಲೀಸರು ಮೃತದೇಹವನ್ನು ಆಕೆಯ ಕುಟುಂಬಿಕರಿಗೆ ಹಸ್ತಾಂತರಿಸಿದ್ದರು. ಅದರಂತೆ ಕುಟುಂಬ ಶವವನ್ನು ರಾಜಸ್ಥಾನದಲ್ಲಿನ ತಮ್ಮ ಹುಟ್ಟೂರಿಗೆ ಕೊಂಡೊಯ್ದು ಅಂತ್ಯಕ್ರಿಯೆ ನೆರವೇರಿಸಿತ್ತು.
ಮಾ.21ರ ಬುಧವಾರದಂದು ಕುಟುಂಬ ನಗರಕ್ಕೆ ವಾಪಸಾದ ಹಿನ್ನೆಲೆಯಲ್ಲಿ ಪೊಲೀಸರು ಯುವತಿಯ ತಾಯಿಯನ್ನು ಕರೆಸಿಕೊಂಡು ತನಿಖೆ ನಡೆಸಿದಾಗ ಆಕೆ ನಿಜಾಂಶವನ್ನು ಬಾಯ್ಬಿಟ್ಟಳು. ಅದರಂತೆ ಪೊಲೀಸರು ಆಕೆಯನ್ನು ಬಂಧಿಸಿ ಐಪಿಸಿ ಸೆಕ್ಷನ್ 302ರಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ