ಲೋಕಸಭೆಯಲ್ಲಿ ಹೈಡ್ರಾಮಾ:ಕಾಂಗ್ರೆಸ್‌- AIADMK ಸದಸ್ಯರ ನಡುವೆ ವಾಗ್ವಾದ


Team Udayavani, Mar 28, 2018, 9:05 AM IST

Kharge-27-3.jpg

ನವದೆಹಲಿ: ಲೋಕಸಭೆ, ರಾಜ್ಯಸಭೆಯಲ್ಲಿ ಸತತ 16ನೇ ದಿನವಾದ ಮಂಗಳವಾರ ಕೂಡ ಎಐಎಡಿಎಂಕೆ, ವೈಎಸ್ಸಾರ್‌ ಕಾಂಗ್ರೆಸ್‌ನ ಗದ್ದಲದಿಂದಾಗಿ ಕಲಾಪ ಕೊಚ್ಚಿಹೋಯಿತು. ಇದರ ನಡುವೆಯೇ ಲೋಕಸಭೆಯು ಹೈಡ್ರಾಮಾಗೆ ಸಾಕ್ಷಿಯಾಯಿತು. ಕಲಾಪ ಮುಂದೂಡಿಕೆಯಾದ ಬಳಿಕ ಕಾಂಗ್ರೆಸ್‌ ಮತ್ತು ಎಐಎಡಿಎಂಕೆ ಸಂಸದರ ನಡುವೆ ಭಾರೀ ಮಾತಿನ ಚಕಮಕಿ ನಡೆಯಿತು. ಲೋಕಸಭೆಯಲ್ಲಿ ಕೇಂದ್ರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಚರ್ಚೆ ಮತ್ತು ಕಲಾಪ ನಡೆಯದಂತೆ ಮಾಡಲು ಎಐಎಡಿಎಂಕೆ ಬಿಜೆಪಿ ಜತೆಗೆ ಮ್ಯಾಚ್‌ಫಿಕ್ಸಿಂಗ್‌ ಮಾಡಿಕೊಂಡಿದೆ ಎಂದು ಕಾಂಗ್ರೆಸ್‌ ಸಂಸದ ಕೆ.ಸಿ.ವೇಣುಗೋಪಾಲ್‌ ಹೇಳಿದ್ದು, ತಮಿಳುನಾಡಿನ ಪಕ್ಷದ ಕೋಪಕ್ಕೆ ಕಾರಣವಾಯಿತು. ಕೋಪೋದ್ರಿಕ್ತಗೊಂಡ ಸಂಸದರು ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ವೇಣುಗೋಪಾಲ್‌ರತ್ತ ಧಾವಿಸಿ ಬಂದರು. ಮೊದಲ ಸಾಲಿನಲ್ಲಿ ಖರ್ಗೆ ಜತೆಗೆ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡ ಇದ್ದರು. ಎಐಎಡಿಎಂಕೆ ಸದಸ್ಯರು ಖರ್ಗೆಯವರನ್ನು ಎಳೆದಾಡಲು ಮುಂದಾದರಾದರೂ, ಕೂಡಲೇ ಆರ್‌ಜೆಡಿ, ಟಿಎಂಸಿ, ಎಡಪಕ್ಷಗಳು ಮತ್ತು ಕಾಂಗ್ರೆಸ್‌ನ ಕೆಲ ಸಂಸದರು ಅಡ್ಡ ನಿಂತು, ತಡೆಯುವಲ್ಲಿ ಯಶಸ್ವಿಯಾದರು. ಈ ಹಂತದಲ್ಲಿ ಕಾಂಗ್ರೆಸ್‌ ಮತ್ತು ಎಐಎಡಿಎಂಕೆ ಸದಸ್ಯರ ನಡುವೆ ಮಾತಿನ ಚಕಮಕಿಯೂ ನಡೆಯಿತು. ಅದೇ ವೇಳೆ ಸೋನಿಯಾ ಮಧ್ಯಪ್ರವೇಶಿಸಿ ವೇಣುಗೋಪಾಲ್‌ ಜತೆ ಮಾತನಾಡಿದರು. 

ಲೋಕಸಭೆಯಿಂದ ಹೊರಗೆ ಬಂದು ಮಾತನಾಡಿದ ಖರ್ಗೆ, ಇದೊಂದು ಕೇಂದ್ರ ಸರ್ಕಾರವೇ ಪ್ರಾಯೋಜಿಸಿದ ಪ್ರತಿಭಟನೆಯಂತಿದೆ. ಎಐಎಡಿಎಂಕೆ ಸದಸ್ಯರನ್ನು ಪ್ರತಿಭಟಿಸಲು ಪ್ರೇರೇಪಣೆ ಮಾಡಿದಂತಿದೆ ಎಂದಿದ್ದಾರೆ. ಇದೇ ವೇಳೆ ಬಿಕ್ಕಟ್ಟು ಪರಿಹರಿಸಲು ಸ್ಪೀಕರ್‌ ಸುಮಿತ್ರಾ ಮಹಾಜನ್‌ ಸರ್ವಪಕ್ಷಗಳ ಸಭೆ ಕರೆಯಲು ಮುಂದಾಗಿದ್ದಾರೆ.

ಏ.6ಕ್ಕೆ ಮುಕ್ತಾಯ: ಬಜೆಟ್‌ ಅಧಿವೇಶನದ ಎರಡನೇ ಭಾಗ ಏ.6ರಂದು ಪೂರ್ಣಗೊಳ್ಳಲಿದೆ. ಈ ಹಂತದಲ್ಲಿ ಒಟ್ಟು 22 ಸಿಟ್ಟಿಂಗ್‌ಗಳು ನಡೆಯಬೇಕಾಗಿತ್ತು. 

ಮುಂದೂಡಿಕೆ ಬಳಿಕವೂ ಧರಣಿ: ರಾಜ್ಯಸಭೆಯಲ್ಲಿ ಕೇವಲ 20  ನಿಮಿಷಗಳಷ್ಟು ಕಾಲ ಮಾತ್ರ ಸದನ ಸಮಾವೇಶಗೊಂಡಿತ್ತು. ಗದ್ದಲದ ಹಿನ್ನೆಲೆ ಕಲಾಪ ಮುಂದೂಡಲ್ಪಟ್ಟಿತು. ನಂತರವೂ ಪ್ರತಿಪಕ್ಷಗಳ ಸದಸ್ಯರು ಸುಮಾರು ಮುಂಭಾಗದಲ್ಲಿ ಸೇರಿ ಘೋಷಣೆ ಕೂಗುತ್ತಿದ್ದರು. ಸದಸ್ಯತ್ವದ ಅವಧಿ ಪೂರ್ಣಗೊಂಡಿರುವ 40 ಮಂದಿಗೆ ಬೀಳ್ಕೊಡುಗೆಯೂ‌ ಸಾಧ್ಯವಾಗಲಿಲ್ಲ. 

ಪ್ರತಿಪಕ್ಷಗಳ ಹೊಸ ಐಡಿಯಾ: ಕಲಾಪ ನಡೆಯದ ಕಾರಣ ಪ್ರತಿಪಕ್ಷಗಳ ಸದಸ್ಯರು ಕೇಂದ್ರದ ವಿರುದ್ಧ ಅವಿಶ್ವಾಸ ನಿರ್ಣಯ ಇದೆ ಎಂದು ಪ್ರಕಟಿಸಲು 1ರಿಂದ 80ರ ವರೆಗೆ ಸಂಖ್ಯೆಗಳಿರುವ ಫ‌ಲಕಗಳನ್ನು ಪ್ರದರ್ಶಿಸಿದರು. ಇದರ ಜತೆಗೆ ‘ಅವಿಶ್ವಾಸ ಗೊತ್ತುವಳಿಗಾಗಿ’ ಎಂದೂ ಬರೆದುಕೊಂಡಿದ್ದರು.

ಸರ್ಕಾರ ಚರ್ಚೆಗೆ ಸಿದ್ಧವಿದೆ ಎಂದು ಎಲ್ಲರಲ್ಲಿಯೂ ಮನವಿ ಮಾಡುತ್ತಿದ್ದೇನೆ. ಸಂಸತ್‌ನ ಹೊರಗೆ ಮತ್ತು ಒಳಗೆ ನಮಗೆ ಬಹುಮತವಿದೆ. ಕಾಂಗ್ರೆಸ್‌ ಈಗ ಸಣ್ಣ ಪಕ್ಷವಾಗಿ ಮಾರ್ಪಾಡಾಗಿದೆ. ಇತರ ಪಕ್ಷಗಳ ಜತೆಗೆ ಮೈತ್ರಿಗಾಗಿ ನೋಡುತ್ತಿದೆ. ಅವಿಶ್ವಾಸ ಗೊತ್ತುವಳಿಯಲ್ಲಿಯೂ ಅದು ಮೈತ್ರಿಗೆ ಮುಂದಾಗಿದೆ. ಈ ಬಗ್ಗೆ ಖರ್ಗೆ ಆತ್ಮವಿಮರ್ಶೆ ಮಾಡಿಕೊಳ್ಳಬೇಕು.
– ಅನಂತಕುಮಾರ್‌, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.