ಭಾರತ್ ಬಂದ್ : ಆಗ್ರಾದಲ್ಲಿ ಹಿಂಸೆ, ವಿವಿಧ ರಾಜ್ಯಗಳಲ್ಲಿ ರೈಲು ತಡೆ
Team Udayavani, Apr 2, 2018, 11:07 AM IST
ಹೊಸದಿಲ್ಲಿ : ಸುಪ್ರೀಂ ಕೋರ್ಟ್ ಸೂಚಿಸಿರುವ ಪ್ರಕಾರ ಎಸ್ಸಿ/ಎಸ್ಟಿ ಕಾಯಿದೆಯ ತಿದ್ದುಪಡಿಗಳನ್ನು ಕೇಂದ್ರ ಸರಕಾರ ಹಿಂಪಡೆಯಬೇಕು ಎಂದು ಆಗ್ರಹಿಸಿ ನಡೆಯುತ್ತಿರುವ ಭಾರತ್ ಬಂದ್ ಪ್ರಯುಕ್ತ ಆಗ್ರಾದಲ್ಲಿ ಇಂದು ಸೋಮವಾರ ಬೆಳಗ್ಗೆ ಪ್ರತಿಭಟನಕಾರರು ಭದ್ರತಾ ಸಿಬಂದಿಗಳೊಂದಿಗೆ ಸಂಘರ್ಷಕ್ಕೆ ಇಳಿದರು. ಪಂಜಾಬ್, ಬಿಹಾರ ಮತ್ತು ಒಡಿಶಾದಲ್ಲಿ ಪ್ರತಿಭಟನಕಾರರು ರೈಲುಗಳನ್ನು ತಡೆದಿರುವ ವರದಿಗಳು ಬಂದಿವೆ.
ಹಿಂಸಾತ್ಮಕ ಪ್ರತಿಭಯನೆಯಲ್ಲಿ ಹಲವಾರು ಅಂಗಡಿಗಳನ್ನು ನಾಶಗೈಯಲಾಯಿತು. ಅನೇಕ ಪ್ರತಿಭಟನಕಾರರು ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಎಸ್ಸಿ/ಎಸ್ಸಿ ಕಾಯಿದೆಯ ಪ್ರಸ್ತಾವಿತ ತಿದ್ದುಪಡಿಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಅನೇಕ ದಲಿತ ಸಮೂಹಗಳು ದೇಶಾದ್ಯಂತ ಇಂದು ಸೋಮವಾರ ಭಾರತ್ ಬಂದ್ ಗೆ ಕರೆ ನೀಡಿವೆ.
ಆಗ್ರಾ ಮಾತ್ರವಲ್ಲದೆ ಪಂಜಾಬ್ ನ ಲೂಧಿಯಾನ ಮತ್ತು ಝಿರಾಕ್ಪುರ ಹಾಗೂ ಇತರ ಅನೇಕ ಭಾಗಗಳಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ಇಂದು ಬೆಳಗ್ಗೆ ನಡೆದಿರುವ ವರದಿಗಳು ಬಂದಿವೆ.
ದೇಶದ ವಿವಿಧ ಕಡೆಗಳಲ್ಲಿ ರೈಲು ಸೇವೆ ಬಾಧಿತವಾಗಿದೆ.ಪ್ರತಿಭಟನಕಾರರು ರೈಲು ಹಳಿಗಳಲ್ಲಿ ಜಮಾಯಿಸಿ ರೈಲುಗಳ ಸಂಚಾರವನ್ನು ತಡೆದಿದ್ದಾರೆ. ಭಾರತ್ ಬಂದ್ ಭಾಗವಾಗಿ ಕೆಲವು ರಾಜ್ಯಗಳಲ್ಲಿ ಈ ಹಿಂಸಾತ್ಮಕ ಪ್ರತಿಭಟನೆಗಳ ಪರಿಣಾಮವಾಗಿ ಮಾರಕಟ್ಟೆಗಳು ಬಂದ್ ಆಗಿವೆ. ಅಂಗಡಿ ಮುಂಗಟ್ಟುಗಳು ಮುಚ್ಚಿವೆ.
ಭಾರತ್ ಬಂದ್ ಅಂಗವಾಗಿ ಬಿಹಾರದ ಅರ್ಹಾ ದಲ್ಲಿ ಸಿಪಿಎಂ ಲಿಬರೇಶನ್, ಅಥವಾ ಸಿಪಿಐ (ಎಂಎಲ್) ಸಂಘಟನೆಗಳ ಪ್ರತಿಭಟಕಾರರು ರೈಲುಗಳನ್ನು ತಡೆದಿರುವುದಾಗಿ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್