ಭಾರತ್ ಬಂದ್ : ಆಗ್ರಾದಲ್ಲಿ ಹಿಂಸೆ, ವಿವಿಧ ರಾಜ್ಯಗಳಲ್ಲಿ ರೈಲು ತಡೆ
Team Udayavani, Apr 2, 2018, 11:07 AM IST
ಹೊಸದಿಲ್ಲಿ : ಸುಪ್ರೀಂ ಕೋರ್ಟ್ ಸೂಚಿಸಿರುವ ಪ್ರಕಾರ ಎಸ್ಸಿ/ಎಸ್ಟಿ ಕಾಯಿದೆಯ ತಿದ್ದುಪಡಿಗಳನ್ನು ಕೇಂದ್ರ ಸರಕಾರ ಹಿಂಪಡೆಯಬೇಕು ಎಂದು ಆಗ್ರಹಿಸಿ ನಡೆಯುತ್ತಿರುವ ಭಾರತ್ ಬಂದ್ ಪ್ರಯುಕ್ತ ಆಗ್ರಾದಲ್ಲಿ ಇಂದು ಸೋಮವಾರ ಬೆಳಗ್ಗೆ ಪ್ರತಿಭಟನಕಾರರು ಭದ್ರತಾ ಸಿಬಂದಿಗಳೊಂದಿಗೆ ಸಂಘರ್ಷಕ್ಕೆ ಇಳಿದರು. ಪಂಜಾಬ್, ಬಿಹಾರ ಮತ್ತು ಒಡಿಶಾದಲ್ಲಿ ಪ್ರತಿಭಟನಕಾರರು ರೈಲುಗಳನ್ನು ತಡೆದಿರುವ ವರದಿಗಳು ಬಂದಿವೆ.
ಹಿಂಸಾತ್ಮಕ ಪ್ರತಿಭಯನೆಯಲ್ಲಿ ಹಲವಾರು ಅಂಗಡಿಗಳನ್ನು ನಾಶಗೈಯಲಾಯಿತು. ಅನೇಕ ಪ್ರತಿಭಟನಕಾರರು ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಎಸ್ಸಿ/ಎಸ್ಸಿ ಕಾಯಿದೆಯ ಪ್ರಸ್ತಾವಿತ ತಿದ್ದುಪಡಿಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಅನೇಕ ದಲಿತ ಸಮೂಹಗಳು ದೇಶಾದ್ಯಂತ ಇಂದು ಸೋಮವಾರ ಭಾರತ್ ಬಂದ್ ಗೆ ಕರೆ ನೀಡಿವೆ.
ಆಗ್ರಾ ಮಾತ್ರವಲ್ಲದೆ ಪಂಜಾಬ್ ನ ಲೂಧಿಯಾನ ಮತ್ತು ಝಿರಾಕ್ಪುರ ಹಾಗೂ ಇತರ ಅನೇಕ ಭಾಗಗಳಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ಇಂದು ಬೆಳಗ್ಗೆ ನಡೆದಿರುವ ವರದಿಗಳು ಬಂದಿವೆ.
ದೇಶದ ವಿವಿಧ ಕಡೆಗಳಲ್ಲಿ ರೈಲು ಸೇವೆ ಬಾಧಿತವಾಗಿದೆ.ಪ್ರತಿಭಟನಕಾರರು ರೈಲು ಹಳಿಗಳಲ್ಲಿ ಜಮಾಯಿಸಿ ರೈಲುಗಳ ಸಂಚಾರವನ್ನು ತಡೆದಿದ್ದಾರೆ. ಭಾರತ್ ಬಂದ್ ಭಾಗವಾಗಿ ಕೆಲವು ರಾಜ್ಯಗಳಲ್ಲಿ ಈ ಹಿಂಸಾತ್ಮಕ ಪ್ರತಿಭಟನೆಗಳ ಪರಿಣಾಮವಾಗಿ ಮಾರಕಟ್ಟೆಗಳು ಬಂದ್ ಆಗಿವೆ. ಅಂಗಡಿ ಮುಂಗಟ್ಟುಗಳು ಮುಚ್ಚಿವೆ.
ಭಾರತ್ ಬಂದ್ ಅಂಗವಾಗಿ ಬಿಹಾರದ ಅರ್ಹಾ ದಲ್ಲಿ ಸಿಪಿಎಂ ಲಿಬರೇಶನ್, ಅಥವಾ ಸಿಪಿಐ (ಎಂಎಲ್) ಸಂಘಟನೆಗಳ ಪ್ರತಿಭಟಕಾರರು ರೈಲುಗಳನ್ನು ತಡೆದಿರುವುದಾಗಿ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ