ಭಾರತ್ ಬಂದ್ : ಆಗ್ರಾದಲ್ಲಿ ಹಿಂಸೆ, ವಿವಿಧ ರಾಜ್ಯಗಳಲ್ಲಿ ರೈಲು ತಡೆ
Team Udayavani, Apr 2, 2018, 11:07 AM IST
ಹೊಸದಿಲ್ಲಿ : ಸುಪ್ರೀಂ ಕೋರ್ಟ್ ಸೂಚಿಸಿರುವ ಪ್ರಕಾರ ಎಸ್ಸಿ/ಎಸ್ಟಿ ಕಾಯಿದೆಯ ತಿದ್ದುಪಡಿಗಳನ್ನು ಕೇಂದ್ರ ಸರಕಾರ ಹಿಂಪಡೆಯಬೇಕು ಎಂದು ಆಗ್ರಹಿಸಿ ನಡೆಯುತ್ತಿರುವ ಭಾರತ್ ಬಂದ್ ಪ್ರಯುಕ್ತ ಆಗ್ರಾದಲ್ಲಿ ಇಂದು ಸೋಮವಾರ ಬೆಳಗ್ಗೆ ಪ್ರತಿಭಟನಕಾರರು ಭದ್ರತಾ ಸಿಬಂದಿಗಳೊಂದಿಗೆ ಸಂಘರ್ಷಕ್ಕೆ ಇಳಿದರು. ಪಂಜಾಬ್, ಬಿಹಾರ ಮತ್ತು ಒಡಿಶಾದಲ್ಲಿ ಪ್ರತಿಭಟನಕಾರರು ರೈಲುಗಳನ್ನು ತಡೆದಿರುವ ವರದಿಗಳು ಬಂದಿವೆ.
ಹಿಂಸಾತ್ಮಕ ಪ್ರತಿಭಯನೆಯಲ್ಲಿ ಹಲವಾರು ಅಂಗಡಿಗಳನ್ನು ನಾಶಗೈಯಲಾಯಿತು. ಅನೇಕ ಪ್ರತಿಭಟನಕಾರರು ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಎಸ್ಸಿ/ಎಸ್ಸಿ ಕಾಯಿದೆಯ ಪ್ರಸ್ತಾವಿತ ತಿದ್ದುಪಡಿಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಅನೇಕ ದಲಿತ ಸಮೂಹಗಳು ದೇಶಾದ್ಯಂತ ಇಂದು ಸೋಮವಾರ ಭಾರತ್ ಬಂದ್ ಗೆ ಕರೆ ನೀಡಿವೆ.
ಆಗ್ರಾ ಮಾತ್ರವಲ್ಲದೆ ಪಂಜಾಬ್ ನ ಲೂಧಿಯಾನ ಮತ್ತು ಝಿರಾಕ್ಪುರ ಹಾಗೂ ಇತರ ಅನೇಕ ಭಾಗಗಳಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ಇಂದು ಬೆಳಗ್ಗೆ ನಡೆದಿರುವ ವರದಿಗಳು ಬಂದಿವೆ.
ದೇಶದ ವಿವಿಧ ಕಡೆಗಳಲ್ಲಿ ರೈಲು ಸೇವೆ ಬಾಧಿತವಾಗಿದೆ.ಪ್ರತಿಭಟನಕಾರರು ರೈಲು ಹಳಿಗಳಲ್ಲಿ ಜಮಾಯಿಸಿ ರೈಲುಗಳ ಸಂಚಾರವನ್ನು ತಡೆದಿದ್ದಾರೆ. ಭಾರತ್ ಬಂದ್ ಭಾಗವಾಗಿ ಕೆಲವು ರಾಜ್ಯಗಳಲ್ಲಿ ಈ ಹಿಂಸಾತ್ಮಕ ಪ್ರತಿಭಟನೆಗಳ ಪರಿಣಾಮವಾಗಿ ಮಾರಕಟ್ಟೆಗಳು ಬಂದ್ ಆಗಿವೆ. ಅಂಗಡಿ ಮುಂಗಟ್ಟುಗಳು ಮುಚ್ಚಿವೆ.
ಭಾರತ್ ಬಂದ್ ಅಂಗವಾಗಿ ಬಿಹಾರದ ಅರ್ಹಾ ದಲ್ಲಿ ಸಿಪಿಎಂ ಲಿಬರೇಶನ್, ಅಥವಾ ಸಿಪಿಐ (ಎಂಎಲ್) ಸಂಘಟನೆಗಳ ಪ್ರತಿಭಟಕಾರರು ರೈಲುಗಳನ್ನು ತಡೆದಿರುವುದಾಗಿ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
MUST WATCH
ಹೊಸ ಸೇರ್ಪಡೆ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ
CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ