ಮ.ಪ್ರ.ಚುನಾವಣೆ: 5 ಧಾರ್ಮಿಕ ನಾಯಕರಿಗೆ ಸಹಾಯಕ ಸಚಿವ ಸ್ಥಾನಮಾನ
Team Udayavani, Apr 4, 2018, 5:23 PM IST
ಭೋಪಾಲ್ : ಈ ವರ್ಷಾಂತ್ಯ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನವೇ ಮಧ್ಯಪ್ರದೇಶದ ಬಿಜೆಪಿ ಸರಕಾರ ಐವರು ಹಿಂದೂ ಧಾರ್ಮಿಕ ನಾಯಕರಿಗೆ ಸಹಾಯಕ ಸಚಿವ ಸ್ಥಾನಮಾನವನ್ನು ನೀಡಿದ್ದು ಸರಕಾರದ ಈ ವಿವಾದಾತ್ಮಕ ಕ್ರಮವನ್ನು ವಿರೋಧ ಪಕ್ಷ ಕಾಂಗ್ರೆಸ್ ಬಲವಾಗಿ ಖಂಡಿಸಿದೆ.
ಮಧ್ಯಪ್ರದೇಶ ಸರಕಾರದ ಸಾಮಾನ್ಯ ಆಡಳಿತೆ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಕೆ ಕೆ ಕಟಿಯಾ ಅವರು ಹೊರಡಿಸಿರುವ ಆದೇಶದ ಪ್ರಕಾರ ನರ್ಮದಾನಂದ ಮಹಾರಾಜ್, ಹರಿಹರಾನಂದ ಮಹಾರಾಜ್, ಕಂಪ್ಯೂಟರ್ ಬಾಬಾ, ಭಯ್ಯು ಮಹಾರಾಜ್ ಮತ್ತು ಪಂಡಿತ್ ಯೋಗೇಂದ್ರ ಮಹಾಂತ್ ಅವರಿಗೆ ಸಹಾಯಕ ಸಚಿವ ಸ್ಥಾನಮಾನ ಪ್ರಾಪ್ತವಾಗಿದೆ.
ಕಳೆದ ಮಾರ್ಚ್ 31ರಂದು ಈ ಐವರು ಧಾರ್ಮಿಕ ನಾಯಕರುಗಳನ್ನು ನರ್ಮದಾ ನದೀ ಸಂರಕ್ಷಣ ಸಮಿತಿಗೆ ನೇಮಕ ಮಾಡಲಾಗಿದೆ. ಸಮಿತಿಯ ಸದಸ್ಯರಾಗಿರುವ ಕಾರಣ ಇವರಿಗೆ ಸಹಾಯಕ ಸಚಿವ ಸ್ಥಾನಮಾನ ಪ್ರಾಪ್ತವಾಗಿದೆ ಎಂದು ಜಿಎಡಿ ಅಧಿಕಾರಿ ತಿಳಿಸಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಗಳು ಈ ವರ್ಷಾಂತ್ಯ ನಡೆಯಲಿಕ್ಕಿದ್ದು ಅದಕ್ಕೆ ಮುನ್ನ ಈ ಐವರು ನಾಯಕರ ಧಾರ್ಮಿಕ ಪ್ರಭಾವವನ್ನು ಚುನವಾಣೆಯ ದೃಷ್ಟಿಯಲ್ಲಿ ಬಳಸಿಕೊಂಡು ಜನರ ಮತಗಳನ್ನು ಬಾಚಿಕೊಳ್ಳುವ ಹುನ್ನಾರ ಬಿಜೆಪಿ ಸರಕಾರದ್ದಾಗಿದೆ ಎಂದು ವಿಪಕ್ಷ ಕಾಂಗ್ರೆಸ್ ಕಿಡಿಕಾರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ