ಮ.ಪ್ರ.ಚುನಾವಣೆ: 5 ಧಾರ್ಮಿಕ ನಾಯಕರಿಗೆ ಸಹಾಯಕ ಸಚಿವ ಸ್ಥಾನಮಾನ
Team Udayavani, Apr 4, 2018, 5:23 PM IST
ಭೋಪಾಲ್ : ಈ ವರ್ಷಾಂತ್ಯ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನವೇ ಮಧ್ಯಪ್ರದೇಶದ ಬಿಜೆಪಿ ಸರಕಾರ ಐವರು ಹಿಂದೂ ಧಾರ್ಮಿಕ ನಾಯಕರಿಗೆ ಸಹಾಯಕ ಸಚಿವ ಸ್ಥಾನಮಾನವನ್ನು ನೀಡಿದ್ದು ಸರಕಾರದ ಈ ವಿವಾದಾತ್ಮಕ ಕ್ರಮವನ್ನು ವಿರೋಧ ಪಕ್ಷ ಕಾಂಗ್ರೆಸ್ ಬಲವಾಗಿ ಖಂಡಿಸಿದೆ.
ಮಧ್ಯಪ್ರದೇಶ ಸರಕಾರದ ಸಾಮಾನ್ಯ ಆಡಳಿತೆ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಕೆ ಕೆ ಕಟಿಯಾ ಅವರು ಹೊರಡಿಸಿರುವ ಆದೇಶದ ಪ್ರಕಾರ ನರ್ಮದಾನಂದ ಮಹಾರಾಜ್, ಹರಿಹರಾನಂದ ಮಹಾರಾಜ್, ಕಂಪ್ಯೂಟರ್ ಬಾಬಾ, ಭಯ್ಯು ಮಹಾರಾಜ್ ಮತ್ತು ಪಂಡಿತ್ ಯೋಗೇಂದ್ರ ಮಹಾಂತ್ ಅವರಿಗೆ ಸಹಾಯಕ ಸಚಿವ ಸ್ಥಾನಮಾನ ಪ್ರಾಪ್ತವಾಗಿದೆ.
ಕಳೆದ ಮಾರ್ಚ್ 31ರಂದು ಈ ಐವರು ಧಾರ್ಮಿಕ ನಾಯಕರುಗಳನ್ನು ನರ್ಮದಾ ನದೀ ಸಂರಕ್ಷಣ ಸಮಿತಿಗೆ ನೇಮಕ ಮಾಡಲಾಗಿದೆ. ಸಮಿತಿಯ ಸದಸ್ಯರಾಗಿರುವ ಕಾರಣ ಇವರಿಗೆ ಸಹಾಯಕ ಸಚಿವ ಸ್ಥಾನಮಾನ ಪ್ರಾಪ್ತವಾಗಿದೆ ಎಂದು ಜಿಎಡಿ ಅಧಿಕಾರಿ ತಿಳಿಸಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಗಳು ಈ ವರ್ಷಾಂತ್ಯ ನಡೆಯಲಿಕ್ಕಿದ್ದು ಅದಕ್ಕೆ ಮುನ್ನ ಈ ಐವರು ನಾಯಕರ ಧಾರ್ಮಿಕ ಪ್ರಭಾವವನ್ನು ಚುನವಾಣೆಯ ದೃಷ್ಟಿಯಲ್ಲಿ ಬಳಸಿಕೊಂಡು ಜನರ ಮತಗಳನ್ನು ಬಾಚಿಕೊಳ್ಳುವ ಹುನ್ನಾರ ಬಿಜೆಪಿ ಸರಕಾರದ್ದಾಗಿದೆ ಎಂದು ವಿಪಕ್ಷ ಕಾಂಗ್ರೆಸ್ ಕಿಡಿಕಾರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ