ಮ.ಪ್ರ.ಚುನಾವಣೆ: 5 ಧಾರ್ಮಿಕ ನಾಯಕರಿಗೆ ಸಹಾಯಕ ಸಚಿವ ಸ್ಥಾನಮಾನ
Team Udayavani, Apr 4, 2018, 5:23 PM IST
ಭೋಪಾಲ್ : ಈ ವರ್ಷಾಂತ್ಯ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನವೇ ಮಧ್ಯಪ್ರದೇಶದ ಬಿಜೆಪಿ ಸರಕಾರ ಐವರು ಹಿಂದೂ ಧಾರ್ಮಿಕ ನಾಯಕರಿಗೆ ಸಹಾಯಕ ಸಚಿವ ಸ್ಥಾನಮಾನವನ್ನು ನೀಡಿದ್ದು ಸರಕಾರದ ಈ ವಿವಾದಾತ್ಮಕ ಕ್ರಮವನ್ನು ವಿರೋಧ ಪಕ್ಷ ಕಾಂಗ್ರೆಸ್ ಬಲವಾಗಿ ಖಂಡಿಸಿದೆ.
ಮಧ್ಯಪ್ರದೇಶ ಸರಕಾರದ ಸಾಮಾನ್ಯ ಆಡಳಿತೆ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಕೆ ಕೆ ಕಟಿಯಾ ಅವರು ಹೊರಡಿಸಿರುವ ಆದೇಶದ ಪ್ರಕಾರ ನರ್ಮದಾನಂದ ಮಹಾರಾಜ್, ಹರಿಹರಾನಂದ ಮಹಾರಾಜ್, ಕಂಪ್ಯೂಟರ್ ಬಾಬಾ, ಭಯ್ಯು ಮಹಾರಾಜ್ ಮತ್ತು ಪಂಡಿತ್ ಯೋಗೇಂದ್ರ ಮಹಾಂತ್ ಅವರಿಗೆ ಸಹಾಯಕ ಸಚಿವ ಸ್ಥಾನಮಾನ ಪ್ರಾಪ್ತವಾಗಿದೆ.
ಕಳೆದ ಮಾರ್ಚ್ 31ರಂದು ಈ ಐವರು ಧಾರ್ಮಿಕ ನಾಯಕರುಗಳನ್ನು ನರ್ಮದಾ ನದೀ ಸಂರಕ್ಷಣ ಸಮಿತಿಗೆ ನೇಮಕ ಮಾಡಲಾಗಿದೆ. ಸಮಿತಿಯ ಸದಸ್ಯರಾಗಿರುವ ಕಾರಣ ಇವರಿಗೆ ಸಹಾಯಕ ಸಚಿವ ಸ್ಥಾನಮಾನ ಪ್ರಾಪ್ತವಾಗಿದೆ ಎಂದು ಜಿಎಡಿ ಅಧಿಕಾರಿ ತಿಳಿಸಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಗಳು ಈ ವರ್ಷಾಂತ್ಯ ನಡೆಯಲಿಕ್ಕಿದ್ದು ಅದಕ್ಕೆ ಮುನ್ನ ಈ ಐವರು ನಾಯಕರ ಧಾರ್ಮಿಕ ಪ್ರಭಾವವನ್ನು ಚುನವಾಣೆಯ ದೃಷ್ಟಿಯಲ್ಲಿ ಬಳಸಿಕೊಂಡು ಜನರ ಮತಗಳನ್ನು ಬಾಚಿಕೊಳ್ಳುವ ಹುನ್ನಾರ ಬಿಜೆಪಿ ಸರಕಾರದ್ದಾಗಿದೆ ಎಂದು ವಿಪಕ್ಷ ಕಾಂಗ್ರೆಸ್ ಕಿಡಿಕಾರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!