ತಮಿಳುನಾಡಿನಲ್ಲಿ ಇಂದು ಬಂದ್‌ ಕಾವು


Team Udayavani, Apr 5, 2018, 7:00 AM IST

37.jpg

ಚೆನ್ನೈ: ಕಾವೇರಿ ಜಲ ನಿರ್ವಹಣೆ ಮಂಡಳಿ ರಚನೆಗೆ ಒತ್ತಾಯಿಸಿ ತಮಿಳುನಾಡಿನ ಎಲ್ಲ ಪಕ್ಷಗಳು ಗುರುವಾರ ರಾಜ್ಯವ್ಯಾಪಿ ಬಂದ್‌ ಘೋಷಿಸಿದೆ. ಸಾರಿಗೆ ಸಂಚಾರ ಬಂದ್‌ ಆಗಿದ್ದು,  ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ  ಬೆಳಗ್ಗೆ 6 ರಿಂದಲೇ ತಮಿಳುನಾಡಿಗೆ ಬಸ್‌ ಸಂಚಾರವನ್ನು ರದ್ದುಗೊಳಿಸಿದೆ.  ಬಂದ್‌ಗೆ ಎಲ್ಲ ರಾಜಕೀಯ ಪಕ್ಷಗಳು, ರೈತ ಸಂಘಟನೆಗಳು, ವ್ಯಾಪಾರಿಗಳು, ವಿದ್ಯಾರ್ಥಿಗಳು ಮತ್ತು ಯುವ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಹೀಗಾಗಿ ಜನಜೀವನ ಅಸ್ತವ್ಯಸ್ತಗೊಳ್ಳಲಿದೆ. ಈಗಾಗಲೇ ತಮಿಳುನಾಡು ಸಿಎಂ ಪಳನಿಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಪನ್ನೀರಸೆಲ್ವಂ ಉಪವಾಸ ಸತ್ಯಾಗ್ರಹವನ್ನೂ ನಡೆಸುತ್ತಿದ್ದಾರೆ. ವಿರೋಧ ಪಕ್ಷ ಡಿಎಂಕೆ ಕೆಲವು ದಿನಗಳ ಹಿಂದಷ್ಟೇ ಸರ್ವಪಕ್ಷ ಸಭೆ ಕರೆದು ಈ ನಿರ್ಧಾರವನ್ನು ಘೋಷಿಸಿತ್ತು. ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್‌ ನೇತೃತ್ವದಲ್ಲಿ ಎಲ್ಲ ಪಕ್ಷಗಳೂ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿವೆ.

ಆಡಳಿತಾರೂಢ ಎಐಎಡಿಎಂಕೆ ಮುಖಂಡರು ನಡೆಸುತ್ತಿರುವ ಉಪವಾಸ ಕೇವಲ ನಾಟಕ ಎಂದು ಡಿಎಂಕೆ ಮುಖಂಡರು ಕಿಡಿ ಕಾರಿದ್ದಾರೆ. ಇನ್ನೊಂದೆಡೆ, ರಾಜ್ಯ ಸರಕಾರವು ಕೇಂದ್ರ ಸರಕಾರದ ಅಡಿಯಾಳಿ ನಂತೆ ಕೆಲಸ ಮಾಡುತ್ತಿದೆ. ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ ಮಾತ್ರಕ್ಕೆ ತನ್ನ ಕರ್ತವ್ಯ ಮುಗಿಯಿತು ಎಂದು ರಾಜ್ಯ ಸರಕಾರ ಭಾವಿಸಿದಂತಿದೆ ಎಂದು ಮಕ್ಕಳ್‌ ನೀತಿ ಮಯ್ಯಂ ಪಕ್ಷದ ನಾಯಕ ಹಾಗೂ ನಟ ಕಮಲ್‌  ಹಾಸನ್‌ ಕೂಡ ಟೀಕಿಸಿದ್ದಾರೆ.

ಕಾವೇರಿ ವಿಷಯಕ್ಕೆ ಕಾದಾಡಬೇಡಿ!: ಕಾವೇರಿ ನದಿ ನೀರು ನಿರ್ವಹಣೆ ಮಂಡಳಿ ರಚನೆಗೆ ಒತ್ತಾಯಿಸಿ  ಸಂಬಂಧಿಸಿದಂತೆ ತಮಿಳುನಾಡಿನಲ್ಲಿ ರಾಜಕೀಯ ಹಾಗೂ ಪ್ರತಿಭಟನೆಗಳ ಕಾವು ಏರುತ್ತಿದ್ದಂತೆಯೇ ಶಾಂತಿ ಕಾಪಾಡಿಕೊಳ್ಳುವಂತೆ ಸುಪ್ರೀಂಕೋರ್ಟ್‌ ಸಲಹೆ ನೀಡಿದೆ. ತಮಿಳುನಾಡಿನ ಜನತೆಗೆ ಶಾಂತವಾಗಿರುವಂತೆ ಸೂಚಿಸಿ. ನಾವು ಕಾವೇರಿ ಸಮಸ್ಯೆಯನ್ನು ನೋಡಿಕೊಳ್ಳುತ್ತೇವೆ ಎಂದು ಮುಖ್ಯನ್ಯಾಯಮೂರ್ತಿ ದೀಪಕ್‌ ಮಿಶ್ರಾ ಬುಧವಾರ ಹೇಳಿದ್ದಾರೆ. ಸುಪ್ರೀಂಕೋರ್ಟ್‌ ತೀರ್ಪಿನಲ್ಲಿ ಸೂಚಿಸಿದಂತೆ ಕಾವೇರಿ ಜಲ ನಿರ್ವಹಣೆ ಮಂಡಳಿಯನ್ನು ಕೇಂದ್ರ ನಿರ್ಮಿಸಲಿಲ್ಲ ಎಂಬ ಅಂಶವನ್ನು ಮುಂದಿಟ್ಟುಕೊಂಡು ತಮಿಳುನಾಡು ಸರಕಾರವು ಕೇಂದ್ರ ಸರಕಾರದ ವಿರುದ್ಧ ಸಲ್ಲಸದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ವೇಳೆ ಸಿಜೆಐ ಮಿಶ್ರಾ ಈ ಹೇಳಿಕೆ ನೀಡಿದ್ದಾರೆ.

ಐಪಿಎಲ್‌ಗೆ ವಿರೋಧ
ತಮಿಳುಪರ ಸಂಘಟನೆಗಳು ಐಪಿಎಲ್‌ ವಿರು ದ್ಧವೂ ಕಿಡಿ ಕಾರಿದ್ದಾರೆ. ಕಾವೇರಿ ವಿಷಯ ಇತ್ಯರ್ಥವಾಗದಿದ್ದರೆ ಐಪಿಎಲ್‌ ಪಂದ್ಯಗಳನ್ನು ನಡೆಯಲು ಬಿಡುವುದಿಲ್ಲ ಎಂದು ಎರಡು ಸಂಘಟನೆಗಳು ಹೇಳಿಕೆ ನೀಡಿವೆ. ರಾಜ್ಯ ಸರಕಾರವು ಪಂದ್ಯ ನಡೆಯಲು ಅವಕಾಶ ನೀಡಬಾರದು. ಪಂದ್ಯ ನಡೆದರೆ ಕ್ರೀಡಾಂಗಣಕ್ಕೆ ನುಗ್ಗಿ ನಿಲ್ಲಿಸುತ್ತೇವೆ ಎಂದು ಎರಡೂ ಸಂಘಟ ನೆಗಳು ಹೇಳಿಕೊಂಡಿವೆ. ಈ ಮಧ್ಯೆ ಕೆಲವು ದಿನಗಳ ಹಿಂದೆ ಪ್ರತಿಭಟನೆಯ ವೇಳೆ ಸೀಮೆಎಣ್ಣೆ  ಕುಡಿದಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.