ರೈತರು ಸಾಯುತ್ತಿರುವಾಗ ಬಿಜೆಪಿ, ಕಾಂಗ್ರೆಸ್ ಉಪವಾಸ ಪ್ರಹಸನ: ಶಿವಸೇನೆ
Team Udayavani, Apr 14, 2018, 4:38 PM IST
ಮುಂಬಯಿ : ”ಸಂಸತ್ ಕಲಾಪ ಹಾಳಾಗಿ ಹೋದುದಕ್ಕೆ ಪ್ರತಿಭಟನೆಯಾಗಿ ಈಚೆಗೆ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಕೈಗೊಂಡ ಉಪವಾಸ ಸತ್ಯಾಗ್ರಹ ಕೇವಲ ಒಂದು ಪ್ರಹಸನ” ಎಂದು ಶಿವಸೇನೆ ಲೇವಡಿ ಮಾಡಿದೆ.
ಎರಡೂ ಪಕ್ಷಗಳ “ಉಪವಾಸ ನಿರತ’ ನಾಯಕರು ಪುಷ್ಕಳ ಭೋಜನ ಸವಿದ ಫೋಟೋಗಳು ಮಾಧ್ಯಮಗಳಲ್ಲಿ ವೈರಲ್ ಆಗಿರುವುದನ್ನು ಕಂಡಾಗ “ಉಪವಾಸ ಸತ್ಯಾಗ್ರಹ ಎನ್ನುವುದು ಕೇವಲ ಒಂದು ಪ್ರಹಸನ’ ಎಂಬುದು ಯಾರಿಗಾದರೂ ಮನವರಿಕೆಯಾಗುತ್ತದೆ ಎಂದು ಶಿವಸೇನೆ ತನ್ನ ತನ್ನ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಚಾಟಿ ಬೀಸಿದೆ.
“ಈ ಉಪವಾಸ ಸತ್ಯಾಗ್ರಹದಿಂದ ಏನು ಸಾಧಿತವಾಯಿತು ಎಂಬುದನ್ನು ಯಾರೂ ನಿಖರವಾಗಿ ಹೇಳಲಾರರು. ಈ ದೇಶದ ಹೆಚ್ಚಿನ ಜನರು ಈಗಲೂ ಹಸಿವಿನಿಂದ ಇದ್ದಾರೆ. ಹಸಿವು ಮತ್ತು ಬಡತನದ ಪರಿಣಾಮವಾಗಿ ರೈತರ ಕುಟುಂಬದವರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಸರಕಾರ ಅಧಿಕಾರದಲ್ಲಿರುವಾಗಲೇ ಮೂರು ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ; ದೇಶದಲ್ಲಿ ನಾಲ್ಕು ಲಕ್ಷ ರೈತರು ಈ ಮಾರ್ಗವನ್ನು ಅನುಸರಿಸಿದ್ದಾರೆ’ ಎಂದು ಸೇನಾ ತನ್ನ ಸಂಪಾದಕೀಯದಲ್ಲಿ ಬರೆದಿದೆ.
ಬಜೆಟ್ ಅಧಿವೇಶನದ ಸಂಸತ್ ಸದನ ಕಲಾಪ ಸಂಪೂರ್ಣವಾಗಿ ನಷ್ಟವಾದ ಕಾರಣಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳ ನಾಯಕರು ಈಚೆಗೆ ನಡೆಸಿದ್ದ ಉಪವಾಸ ಸತ್ಯಾಗ್ರಹ ವಿವಾದದಲ್ಲೇ ಮುಳುಗಿ ಹೋಯಿತು ಎಂದು ಸೇನೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ