ಭಾರತೀಯ ಮುಸ್ಲಿಮರು ರಾಮ ಮಂದಿರ ಕೆಡಹಿಲ್ಲ: ಮೋಹನ್ ಭಾಗವತ್
Team Udayavani, Apr 16, 2018, 11:47 AM IST
ಮುಂಬಯಿ : ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಮತ್ತೂಮ್ಮೆ ಅಯೋಧ್ಯೆ ವಿವಾದವನ್ನು ಕೆದಕಿದ್ದಾರೆ. “ಭಾರತೀಯ ಮುಸ್ಲಿಮರು ಅಯೋಧ್ಯೆಯಲ್ಲಿನ ಮೂಲ ರಾಮ ಮಂದಿರವನ್ನು ಕೆಡಹಿಲ್ಲ; ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ಪುನರ್ ನಿರ್ಮಿಸುವ ನಮ್ಮ ಹೋರಾಟ ಮುಂದುವರಿಯತ್ತದೆ ಮತ್ತು ನಾವದನ್ನು ನಿರ್ಮಿಸಿಯೇ ಸಿದ್ಧ ‘ ಎಂದು ಭಾಗವತ್ ಹೇಳಿದ್ದಾರೆ.
ಪಾಲಗಢ ಜಿಲ್ಲೆಗೆ ತಾಗಿಕೊಂಡಿರುವ ದಹಾಣುವಿನಲ್ಲಿ ನಡೆದ ವಿರಾಟ್ ಹಿಂದು ಸಮ್ಮೇಳನದಲ್ಲಿ ಮಾತನಾಡುತ್ತಿದ್ದ ಅವರು “ಭಾರತೀಯ ಮುಸ್ಲಿಮರು ರಾಮ ಮಂದಿರವನ್ನು ಕೆಡಹಿಲ್ಲ; ಅಂತಹ ಕೆಲಸವನ್ನು ಭಾರತೀಯ ಪ್ರಜೆಗಳು ಎಂದೂ ಮಾಡುವುದಿಲ್ಲ. ಭಾರತೀಯರ ನೈತಿಕ ಶಕ್ತಿಯನ್ನು ನಾಶ ಮಾಡುವ ಉದ್ದೇಶದಿಂದ ವಿದೇಶೀ ಶಕ್ತಿಗಳು ಭಾರತದಲ್ಲಿನ ದೇವಸ್ಥಾನಗಳನ್ನು ಕೆಡಹಿವೆ’ ಎಂದು ಹೇಳಿದರು.
ಅಯೋಧ್ಯೆಯಲ್ಲಿನ ಮೂಲ ರಾಮಮಂದಿರವನ್ನು ಪುನರ್ ಸ್ಥಾಪಿಸುವ ಹೊಣೆಗಾರಿಕೆ ಇಡಿಯ ದೇಶದ್ದಾಗಿದೆ ಎಂದು ಭಾಗವತ್ ಒತ್ತಿ ಹೇಳಿದರು.
“ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನಿರ್ಮಿಸದಿದ್ದರೆ ಹಿಂದೂ ಸಂಸ್ಕತಿಯ ಬೇರುಗಳನ್ನು ತುಂಡಾದಂತೆ. ಅಯೋಧ್ಯೆಯಲ್ಲಿ ಎಲ್ಲಿ ಮೂಲ ರಾಮ ಮಂದಿರ ಇತ್ತೋ ಅಲ್ಲೇ ಮತ್ತೆ ರಾಮ ಮಂದಿರವನ್ನು ನಿರ್ಮಿಸಲಾಗುವುದು; ಆ ಬಗ್ಗೆ ಸಂದೇಹವೇ ಬೇಡ’ ಎಂದು ಭಾಗವತ್ ಹೇಳಿದರು.
“ನಾವಿಂದು ಸ್ವತಂತ್ರರಾಗಿದ್ದೇವೆ. ಎಲ್ಲಿ ಈ ಹಿಂದೆ ಏನೆಲ್ಲ ನಾಶವಾಗಿತ್ತೋ ಅದನ್ನು ಮತ್ತೆ ಪುನರ್ ನಿರ್ಮಿಸುವ ಸ್ವಾತಂತ್ರ್ಯ ನಮಗಿದೆ. ಏಕೆಂದರೆ ಇದು ಕೇವಲ ದೇವಸ್ಥಾನವಲ್ಲ ; ಇದು ನಮ್ಮ ಅಸ್ಮಿತೆಯ ಚಿಹ್ನೆಯಾಗಿದೆ’ ಎಂದು ಭಾಗವತ್ ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್
Mumbai Indians: ಸೂರ್ಯಕುಮಾರ್ ಶೀಘ್ರ ಚೇತರಿಕೆ ಸಾಧ್ಯತೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್