ಒಂದೇ ಬಾರಿ ಚುನಾವಣೆಗೆ 2 ತಿದ್ದುಪಡಿಬೇಕು


Team Udayavani, Apr 18, 2018, 10:40 AM IST

Election-Symbol-650.jpg

ಹೊಸದಿಲ್ಲಿ: ಸಂವಿಧಾನದ ಕನಿಷ್ಠ ಎರಡು ನಿಬಂಧನೆಗಳಿಗೆ ತಿದ್ದುಪಡಿ ತಂದು, ಅದಕ್ಕೆ ರಾಜ್ಯಗಳು ಸಮ್ಮತಿ ನೀಡಿದರೆ, 2019ರ ಆರಂಭದಲ್ಲೇ ಲೋಕಸಭೆ ಮತ್ತು ವಿಧಾನಸಭೆಗೆ ಏಕಕಾಲಕ್ಕೆ ಚುನಾವಣೆ ನಡೆಸಬಹುದು ಎಂದು ಕಾನೂನು ಆಯೋಗ ಹೇಳಿದೆ. ಜನಪ್ರತಿನಿಧಿ ಕಾಯ್ದೆಯ ಕೆಲವು ನಿಬಂಧನೆಗಳಿಗೂ ಸಂಸತ್‌ನಲ್ಲಿ ಸರಳ ಬಹುಮತದೊಂದಿಗೆ ತಿದ್ದುಪಡಿ ತರಬೇಕಾಗುತ್ತದೆ ಎಂದೂ ಆಯೋಗ ತಿಳಿಸಿದೆ.

ಈ ಕುರಿತು ತಯಾರಿಸಿದ ಟಿಪ್ಪಣಿಯನ್ನು ಮಂಗಳವಾರ ಸಾರ್ವಜನಿಕ ವೇದಿಕೆಯಲ್ಲಿಟ್ಟಿರುವ ಆಯೋಗ, ವರದಿಯನ್ನು ಅಂತಿಮಗೊಳಿಸುವ ಮುನ್ನ ಸಂವಿಧಾನ ತಜ್ಞರು, ರಾಜಕೀಯ ಪಕ್ಷಗಳು ಹಾಗೂ ಸಂಬಂಧಿಸಿದ ಇತರರ ಅಭಿಪ್ರಾಯವನ್ನು ಕೋರಿದೆ. ಮೇ 8ರೊಳಗೆ ಇವರು ತಮ್ಮ ಅಭಿಪ್ರಾಯಗಳನ್ನು ತಿಳಿಸಬಹುದು ಎಂದು ಹೇಳಿದೆ. ಆಯೋಗದ ಟಿಪ್ಪಣಿಯಂತೆ, ಏಕಕಾಲದ ಚುನಾವಣೆ 2 ಹಂತಗಳಲ್ಲಿ ನಡೆಯಲಿದ್ದು, 2ನೇ ಹಂತ 2024ರಲ್ಲಿ ನಡೆಯಲಿದೆ.

ಎರಡು ತಿದ್ದುಪಡಿ: ಲೋಕಸಭೆ ಮತ್ತು ವಿಧಾನಸಭೆಗಳ ಅವಧಿಗೆ ಸಂಬಂಧಿಸಿದ ಸಂವಿಧಾನದ 83(2)ನೇ ವಿಧಿ ಮತ್ತು 172(1)ನೇ ವಿಧಿ ಹಾಗೂ ಜನಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ತರುವ ಪ್ರಸ್ತಾವವನ್ನು ಕಾನೂನು ಆಯೋಗ ಇಟ್ಟಿದೆ. ರಾಜ್ಯ ವಿಧಾನಸಭೆಗಳ ಅವಧಿಯನ್ನು ವಿಸ್ತರಿಸುವ ಉದ್ದೇಶವೂ ಇದರಲ್ಲಿ ಸೇರಿದೆ. ಒಂದು ವೇಳೆ ಸರಕಾರವು ಅವಧಿ ಮಧ್ಯೆಯೇ ಉರುಳಿದರೆ, ಅನಂತರ ಬರುವ ಹೊಸ ಸರಕಾರವು ಉಳಿದ ಅವಧಿಯವರೆಗಷ್ಟೇ ಕಾರ್ಯನಿರ್ವಹಿಸಬೇಕೇ ಹೊರತು, ಹೊಸದಾಗಿ 5 ವರ್ಷ ಆಡಳಿತ ನಡೆಸುವಂತಿಲ್ಲ ಎಂದೂ ಆಯೋಗದ ಟಿಪ್ಪಣಿಯಲ್ಲಿ ಹೇಳಲಾಗಿದೆ.

ಯಾವ ರಾಜ್ಯಗಳಿಗೆ ಯಾವಾಗ ಚುನಾವಣೆ?: ಮೊದಲ ಹಂತದಲ್ಲಿ ಆಂಧ್ರಪ್ರದೇಶ, ಅಸ್ಸಾಂ, ಬಿಹಾರ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಚುನಾವಣೆ ನಡೆದರೆ, ಉತ್ತರಪ್ರದೇಶ, ಗುಜರಾತ್‌, ಕರ್ನಾಟಕ, ದಿಲ್ಲಿ ಮತ್ತು ಪಂಜಾಬ್‌ ಎರಡನೇ ಹಂತದಲ್ಲಿ ಚುನಾವಣೆ ಎದುರಿಸಲಿವೆ. 2ನೇ ಹಂತದಲ್ಲಿ ಚುನಾವಣೆ ಎದುರಿಸುವ ರಾಜ್ಯಗಳ ವಿಧಾನಸಭೆ ಅವಧಿಯನ್ನು ವಿಸ್ತರಿಸಬೇಕಾಗುತ್ತದೆ ಎಂದೂ ಆಯೋಗದ ಟಿಪ್ಪಣಿ ಹೇಳಿದೆ.

ಟಾಪ್ ನ್ಯೂಸ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

1-eqwewq

Sunil Narine ನಿವೃತ್ತಿ ತೊರೆದು ಟಿ20 ವಿಶ್ವಕಪ್‌ ಆಡಲಿ: ಪೊವೆಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

6-fusion

UV Fusion: ಇಂಡಿ ಪಂಪ್‌ ಮಟ..

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

5-fusion

UV Fusion: ನಾಟಕದ ಜೀವನಕ್ಕೆ ಯಾತಕ್ಕಾಗಿ ದೇವರ ಹೊಣೆ

4-uv-fusion

Women: ಜಗದೆಲ್ಲ ನೋವನುಂಡರೂ ಹಿತ ಬಯಸುವವಳು ಮಾತೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.