48 ಮಂದಿ ಎಂಪಿ,ಎಂಎಲ್‌ಎಗಳ ಮೇಲಿವೆ ಮಹಿಳಾ ದೌರ್ಜನ್ಯದ ಕೇಸ್‌!


Team Udayavani, Apr 19, 2018, 3:07 PM IST

100.jpg

 ಹೊಸದಿಲ್ಲಿ: ದೇಶದಲ್ಲಿ ಅತ್ಯಾಚಾರ ಮತ್ತು ಮಹಿಳಾ ದೌರ್ಜನ್ಯದ ವಿರುದ್ಧ ಆಕ್ರೋಶ ತೀವ್ರವಾಗಿದ್ದು ಈ ವೇಳೆ 48 ಜನಪ್ರತಿನಿಧಿಗಳ ಮೇಲೆ ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ ಪ್ರಕರಣ ಗಳು ದಾಖಲಾಗಿರುವ ಬಗ್ಗೆ ಅಧ್ಯಯನ ವರದಿಯೊಂದು ಬಹಿರಂಗಪಡಿಸಿದೆ. 

ಅಸೋಸಿಯೇಷನ್‌ ಫಾರ್‌ ಡೆಮಾಕ್ರಾಟಿಕ್‌ ರಿಫಾರ್ಮ್ಸ್‌(ADR) ಬಹಿರಂಗ ಪಡಿಸಿರುವ ವರದಿಯಲ್ಲಿ ಈ ಕಳವಳಕಾರಿ ಅಂಶ ಬಯಲಾಗಿದ್ದು, ಕಳೆದ 5 ವರ್ಷಗಳಲ್ಲಿ ಪ್ರಮುಖ ರಾಜಕೀಯ ಪಕ್ಷಗಳು 327 ಮಂದಿ ಮಹಿಳಾ ದೌರ್ಜನ್ಯ ಕೇಸ್‌  ದಾಖಲಾದವರಿಗೆ ಟಿಕೆಟ್‌ ನೀಡಿದ್ದು, 118 ಮಂದಿ ಪಕ್ಷೇತರವಾಗಿ ಕಣಕ್ಕಿಳಿದಿದ್ದಾರೆ ಎಂದು ವರದಿ ಹೇಳಿದೆ.

ರಾಜ್ಯ ಸಭೆ ಮತ್ತು ಲೋಕಸಭೆಗೂ 40 ಮಂದಿ ಇಂತಹ ಕೇಸ್‌ ಹೊಂದಿದ್ದವರಿಗೆ ಟಿಕೆಟ್‌ಗಳನ್ನು ನೀಡಲಾಗಿದೆ. ವಿಧಾನಸಭಾ ಚುನಾವಣೆಗೆ ವಿವಿಧ ಪಕ್ಷಗಳು ಕೇಸ್‌ ಹೊಂದಿದ್ದ 287 ಅಭ್ಯರ್ಥಿಗಳಿಗೆ ಟಿಕೆಟ್‌ ನೀಡಿವೆ ಎಂದು ವರದಿ ಹೇಳಿದೆ. 

ಮಹಾರಾಷ್ಟ್ರದಲ್ಲಿ ಜನಪ್ರತಿನಿಧಿಗಳ ಮೇಲೆ ಗರಿಷ್ಠ ಅಂದರೆ 12 ಮಂದಿಯ ಮೇಲೆ ಮಹಿಳಾ ದೌರ್ಜನ್ಯದ ಕೇಸ್‌ ಗಳು ದಾಖಲಾಗಿವೆ. ಪಶ್ಚಿಮ ಬಂಗಾಲದಲ್ಲಿ 12 ಮಂದಿ, ಒಡಿಶಾ ಮತ್ತು ಆಂಧ್ರದಲ್ಲಿ ತಲಾ 5 ಮಂದಿಯ ಮೇಲೆ ಮಹಿಳಾ ದೌರ್ಜನ್ಯದ ಪ್ರಕರಣಗಳಿವೆ ಎಂದು ವರದಿ ಹೇಳಿದೆ. 

ಮಹಾರಾಷ್ಟ್ರದಲ್ಲಿ ಮಹಿಳಾ ದೌರ್ಜನ್ಯ ಎದುರಿಸುತ್ತಿರುವ 65 ಮಂದಿಗೆ ಟಿಕೆಟ್‌ ನೀಡಲಾಗಿದ್ದರೆ ಬಿಹಾರದಲ್ಲಿ 62 ಮತ್ತು ಪಶ್ಚಿಮ ಬಂಗಾಲದಲ್ಲಿ 52 ಮಂದಿಗೆ ಟಿಕೆಟ್‌ ನೀಡಲಾಗಿದೆ ಎಂದು ವರದಿ ಹೇಳಿದೆ.

ಪಕ್ಷಗಳ ಪೈಕಿ ಇಂತಹ ಪ್ರಕರಣ ಹೊಂದಿರುವವರ ಗರಿಷ್ಠ ಸಂಖ್ಯೆ ಬಿಜೆಪಿಯದ್ದಾಗಿದ್ದು, 12 ಮಂದಿಯ ವಿರುದ್ಧ ಪ್ರಕರಣಗಳಿದ್ದು, ಶಿವಸೇನೆಯ 7 ಮಂದಿ, ತೃಣಮೂಲ ಕಾಂಗ್ರೆಸ್‌ನ 7 ಮಂದಿ ಸಂಸದ, ಶಾಸಕರ ಮೇಲೆ ಪ್ರಕರಣಗಳಿವೆ ಎಂದು ವರದಿ ಹೇಳಿದೆ. 

ಬಿಜೆಪಿ ಮಹಿಳಾ ದೌರ್ಜನ್ಯ ಕೇಸ್‌ ಎದುರಿಸುತ್ತಿರುವ 47 ಮಂದಿಗೆ ಟಿಕೆಟ್‌ ನೀಡಿದ್ದು, ಬಿಎಸ್‌ಪಿ 35 ಮಂದಿಗೆ ಟಿಕೆಟ್‌ ನೀಡಿದ್ದು, ಕಾಂಗ್ರೆಸ್‌ 24 ಮಂದಿಗೆ ನೀಡಿದೆ. 

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

1-wwewqe

Lok Sabha ಅಖಾಡಕ್ಕೆ ಲಾಲು ಪ್ರಸಾದ್‌ ಪುತ್ರಿ ಡಾ| ರೋಹಿಣಿ ಹೆಜ್ಜೆ

RBI

Cyber ​​attack: ಭದ್ರತೆ ಹೆಚ್ಚಿಸಲು ಬ್ಯಾಂಕ್‌ಗಳಿಗೆ ಆರ್‌ಬಿಐ ಸೂಚನೆ

K-Kavitha

ED; ದಿಲ್ಲಿ ಲಿಕ್ಕರ್‌ ಕೇಸ್‌ ಡೀಲ್‌ಗೆ ಕೆಸಿಆರ್‌ ಪುತ್ರಿ ಕವಿತಾ ಸಂಚು

supreem

Himachal Pradesh; 6 ಕೈ ಶಾಸಕರ ಅನರ್ಹತೆ ಆದೇಶಕ್ಕೆ ತಡೆ ಇಲ್ಲ: ಸುಪ್ರೀಂ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.