ಹೀಗೊಂದು ತ್ಯಾಗ; 24ರ ಹರೆಯದ ಚಾರ್ಟೆರ್ಡ್ ಅಕೌಂಟೆಂಟ್ ಈಗ ಜೈನ ಮುನಿ!


Team Udayavani, Apr 20, 2018, 3:21 PM IST

Set.jpg

ಅಹಮ್ಮದಾಬಾದ್:ಮುಂಬೈ ಮೂಲದ ಶ್ರೀಮಂತ ಕುಟುಂಬದ 24ರ ಹರೆಯದ ಚಾರ್ಟೆರ್ಡ್ ಅಕೌಂಟೆಂಟ್ ವೃತ್ತಿ ಮಾಡುತ್ತಿದ್ದ ಯುವಕ ಇದೀಗ ಕೋಟ್ಯಂತರ ರೂಪಾಯಿ ಸಂಪತ್ತನ್ನು ತ್ಯಜಿಸಿ ಮೋಕ್ಷ ಪಡೆಯಲು ಜೈನ ಮುನಿಯಾಗಲು ನಿರ್ಧರಿಸಿದ್ದಾರೆ.

ಮೋಕ್ಷೇಶ್ ಶೇಟ್ ಅವರ ಕುಟುಂಬ ಜೆಕೆ ಕಾರ್ಪೋರೇಶನ್ ಮೂಲಕ ವ್ಯವಹಾರ ನಡೆಸುತ್ತಿದೆ. ಮೋಕ್ಷೇಶ್ ವಜ್ರ, ಮೆಟಲ್ ಹಾಗೂ ಶುಗರ್ ಇಂಡಸ್ಟ್ರೀಸ್ ಬಗ್ಗೆ ಆಸಕ್ತಿ ಹೊಂದಿದ್ದರು. ಆದರೆ ಎಲ್ಲವನ್ನೂ ತ್ಯಜಿಸಿ ಇತ್ತೀಚೆಗೆ ಗಾಂಧೀನಗರ-ಅಹಮ್ಮದಾಬಾದ್ ರಸ್ತೆ ಸಮೀಪದ ತಪೋವನ್ ಸರ್ಕಲ್ ನಲ್ಲಿ ನಡೆದ ಸಮಾರಂಭದಲ್ಲಿ ಜೈನ ಮುನಿಯಾಗಿ ದೀಕ್ಷೆ ಪಡೆದಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಮೋಕ್ಷೇಶ್ ಶಿಕ್ಷಣದಲ್ಲಿ ಸಾಧಿಸಿದ ಸಾಧನೆಯನ್ನು ಕೂಡಾ ಕಡೆಗಣಿಸಲು ಸಾಧ್ಯವಿಲ್ಲ. ಆದರೆ ಅವೆಲ್ಲವನ್ನೂ ತ್ಯಜಿಸುವುದು ಎಲ್ಲರಿಗೂ ಸಾಧ್ಯವಿಲ್ಲ. ಕೆಲವೇ ಕೆಲವು ಉದಾಹರಣೆ ದೊರೆಯುತ್ತದೆ, ಅದಕ್ಕೆ ಮೋಕ್ಷೇಶ್ ಸೇರ್ಪಡೆಯಾಗಿದ್ದಾರೆ.

ನಾನು 15 ವರ್ಷದ ಹುಡುಗನಾಗಿದ್ದಾಗಲೇ ಮುಂದೆ ಜೈನ ಮುನಿಯಾಗಬೇಕೆಂಬ ಇಚ್ಛೆ ಹೊಂದಿದ್ದೆ. ದೈನಂದಿನ ಯಾಂತ್ರಿಕ ಬದುಕಿನಿಂದ ನಮಗೆ ಆಂತರಿಕ ಶಾಂತಿಯನ್ನು ಪಡೆಯಲು ಸಾಧ್ಯವಿಲ್ಲ. ಅದೆಲ್ಲಕ್ಕಿಂತ ಹೆಚ್ಚಾಗಿ ಎಲ್ಲರೂ ಸಂತೋಷದಿಂದ ಇರಬೇಕು, ಅದು ಕೇವಲ ನನ್ನೊಬ್ಬನಿಗೆ ಮಾತ್ರ ಸೀಮಿತವಾಗಬಾರದು ಎಂದು ಜೈನ ಮುನಿಯಾಗಿ ದೀಕ್ಷೆ ಪಡೆದ ಮೋಕ್ಷೇಶ್ ತಿಳಿಸಿದ್ದಾರೆ.

ಅವರು ಯಾವಾಗಲೂ ಆಧ್ಯಾತ್ಮಿಕವಾಗಿ ಚಿಂತಿಸುತ್ತಿದ್ದರು. ಸುಮಾರು 8 ವರ್ಷಗಳ ಹಿಂದೆ ತಾನು ಜೈನ ಮುನಿಯಾಗಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿರುವುದಾಗಿ ಮೋಕ್ಷೇಶ್ ಚಿಕ್ಕಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಆದರೆ ನಾವು ಆತನಿಗೆ ಮೊದಲು ವಿದ್ಯಾಭ್ಯಾಸ ಪೂರ್ಣಗೊಳಿಸುವಂತೆ ಮನವರಿಕೆ ಮಾಡಿದ್ದೇವು. ಕೊನೆಗೂ ಕಳೆದ ವರ್ಷ ಜೈನ ಮುನಿಯಾಗುವ ಕನಸನ್ನು ನನಸು ಮಾಡಲು ಒಮ್ಮತದ ಒಪ್ಪಿಗೆ ನೀಡಲಾಯಿತು ಎಂದು ವಿವರಿಸಿದ್ದಾರೆ.

ಅಲ್ಲದೇ ಕರ್ನಾಟಕ, ಗುಜರಾತ್, ಮಹಾರಾಷ್ಟ್ರದ 15 ಸ್ಥಳಗಳಲ್ಲಿ ಮೋಕ್ಷೇಶ್ ಅವರ ಶೋಭಾ ಯಾತ್ರೆ ನಡೆಸಲು ಅವರ ಕುಟುಂಬ ಸಿದ್ಧತೆ ನಡೆಸಿದೆ.  ಇವರ ಕುಟುಂಬ ಮೂಲತಃ ಉತ್ತರ ಗುಜರಾತ್ ನ ಡೇಸಾದವರು. ಅಲ್ಲಿಂದ ವಲಸೆ ಬಂದು ಕಳೆದ 60 ವರ್ಷಗಳಿಂದ ಮುಂಬೈಯಲ್ಲಿ ನೆಲೆಸಿದ್ದಾರೆ. ಮೋಕ್ಷೇಶ್ ತಂದೆ ಸಂದೀಪ್ ಹಾಗೂ ಚಿಕ್ಕಪ್ಪ ಗಿರೀಶ್ ಶೇಟ್ ಜತೆಯಾಗಿ ಮುಂಬೈಯಲ್ಲಿ ವಾಸವಾಗಿದ್ದಾರೆ.

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.