UPSC ಮೊದಲ ಯತ್ನದಲ್ಲೇ 151ನೇ ರ್ಯಾಂಕ್: ಕಿರಿಯ ವಯಸ್ಸಲ್ಲೇ ಸಾಧನೆ
Team Udayavani, May 1, 2018, 8:05 AM IST
ಹೊಸದಿಲ್ಲಿ: ಅತಿಕಿರಿಯ ವಯಸ್ಸಿನಲ್ಲೇ ನಾಗರಿಕ ಸೇವಾ ಪರೀಕ್ಷೆಯಲ್ಲಿ ಉತ್ತೀರ್ಣಳಾಗುವ ಮೂಲಕ ಕೇರಳದ ಯುವತಿಯೊಬ್ಬಳು ಈಗ ದೇಶದ ಗಮನ ಸೆಳೆದಿದ್ದಾಳೆ. ಕೊಲ್ಲಂನ 22ರ ಯುವತಿ ಸುಶ್ರೀ, ಯುಪಿಎಸ್ಸಿ ಮೊದಲ ಪ್ರಯತ್ನದಲ್ಲೇ 151ನೇ ರ್ಯಾಂಕ್ ಪಡೆದಿದ್ದಾಳೆ. ಈಕೆಯ ತಂದೆ ಸುನಿಲ್ಕುಮಾರ್, ಕೇಂದ್ರ ಮೀಸಲು ಪೊಲೀಸ್ ಪಡೆಯ ನಿವೃತ್ತ ಯೋಧರಾಗಿದ್ದು, ಡಾ.ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಅವರ ಭದ್ರತಾ ತಂಡದಲ್ಲೂ ಕಾರ್ಯನಿರ್ವಹಿಸಿದ್ದರು.
2008ರಲ್ಲಿ ಪ್ರಧಾನಿ ಸಿಂಗ್ ಭೇಟಿಯನ್ನು ಮೆಲುಕು ಹಾಕಿಕೊಂಡ ಸುಶ್ರೀ, ’14ನೇ ವಯಸ್ಸಿನಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಅವರ ಪತ್ನಿ ಗುರುಶರಣ್ ಕೌರ್ ಅವರಿಗೆ ಹೂಗುಚ್ಛ ನೀಡುವ ಅವಕಾಶ ಸಿಕ್ಕಿತ್ತು. ಆಗ ಪ್ರಧಾನಿ ಸಿಂಗ್, ನಿನ್ನ ಕನಸು ಏನು ಎಂದು ಕೇಳಿದ್ದರು. ಆಗ ನಾನು ಸಿವಿಲ್ ಸರ್ವೆಂಟ್ ಆಗಬೇಕೆಂದುಕೊಂಡಿದ್ದೇನೆ ಎಂದಾಗ, ಒಳ್ಳೆಯದಾಗಲಿ ಎಂದು ಆಶೀರ್ವದಿಸಿದ್ದರು. ಅದು ನನಗೆ ಸಂತೋಷ ನೀಡಿದ್ದರ ಜತೆಗೆ ಪ್ರೇರಣೆ ಕೂಡ ಆಯಿತು’ ಎಂದು ಹೇಳಿದ್ದಾಳೆ. ಅಷ್ಟೇ ಅಲ್ಲದೆ, ತಂದೆಯ ಸೇವಾ ನಿಷ್ಠೆಯೂ ಆಕೆಯ ಮೇಲೆ ಪ್ರಭಾವ ಬೀರಿದೆಯಂತೆ. ಕಿರಿಯ ವಯಸ್ಸಿನಲ್ಲೇ ಹಿರಿಯ ಸಾಧನೆ ಮಾಡಿರುವ ಸುಶ್ರೀಗೆ ತನ್ನ ಬಂಧುಗಳು, ಸ್ನೇಹಿತರು ಫೋನ್ ಮಾಡಿ, ಮನೆಗೆ ಬಂದು ಅಭಿನಂದನೆ ಸಲ್ಲಿಸುತ್ತಿದ್ದಾರೆ. ಅಷ್ಟೇ ಅಲ್ಲದೇ, ಸಿಆರ್ಪಿಎಫ್, ಎಸ್ಪಿಜಿ ಹಿರಿಯ ಅಧಿಕಾರಿಗಳು ಸಹ ಟ್ವಿಟರ್ನಲ್ಲಿ ಅಭಿನಂದನೆ ಸಲ್ಲಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ