ಧೂಳಿನ ಬಿರುಗಾಳಿಗೆ 109 ಮಂದಿ ಸಾವು


Team Udayavani, May 4, 2018, 5:40 AM IST

Storm-4-5.jpg

ಹೊಸದಿಲ್ಲಿ: ಉತ್ತರ ಪ್ರದೇಶ ಮತ್ತು ರಾಜಸ್ಥಾನಗಳ ಹಲವು ಭಾಗಗಳಲ್ಲಿ ಬುಧವಾರ ಸಂಜೆಯಿಂದ ಬೀಸಿದ ಧೂಳುಮಿಶ್ರಿತ ಬಿರುಗಾಳಿಯಲ್ಲಿ ಕನಿಷ್ಠ 109 ಮಂದಿ ಅಸುನೀಗಿ, 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಬಿರುಗಾಳಿಯ ತೀವ್ರತೆಗೆ ಎರಡೂ ರಾಜ್ಯಗಳಲ್ಲಿ ಮನೆ, ಕಟ್ಟಡಗಳು ಕುಸಿದು ಬಿದ್ದಿದ್ದು, ನೂರಾರು ಮರಗಳು ಧರೆಗುರುಳಿವೆ. ವಿದ್ಯುತ್‌, ದೂರವಾಣಿ ಕಂಬಗಳು ಮುರಿದು ಬಿದ್ದಿವೆ. ಇದರಿಂದ ಪಂಜಾಬ್‌, ಹರಿಯಾಣ, ಮಧ್ಯಪ್ರದೇಶಗಳ ಕೆಲವು ಭಾಗಗಳಲ್ಲಿ ವಿದ್ಯುತ್‌ ಪೂರೈಕೆಗೆ ತೊಂದರೆಯಾಗಿದೆ.

ಉತ್ತರ ಪ್ರದೇಶದ ಪಶ್ಚಿಮ ಭಾಗದಲ್ಲಿ ಬುಧವಾರ ಸಂಜೆ 6.30ರ ಬಳಿಕ ಬಿರುಗಾಳಿ ಬೀಸಲಾರಂಭಿಸಿತು. ಆರಂಭದಲ್ಲಿ ಅದು ಅಷ್ಟೊಂದು ತೀವ್ರವಾಗಿರಲಿಲ್ಲ. ಸಮಯ ಕಳೆದಂತೆ ಅದು ಬಿರುಸಾಗತೊಡಗಿತು. ಗಾಳಿಯ ಜತೆಗೆ ಕೆಲವು ಸ್ಥಳಗಳಲ್ಲಿ ಗುಡುಗು ಸಿಡಿಲಿನಿಂದ ಕೂಡಿ ಧಾರಾಕಾರ ಮಳೆಯೂ ಸುರಿದಿದೆ. ಇದರ ಜತೆಗೆ ಆಲಿಕಲ್ಲು ಮಳೆಯೂ ಆಗಿದೆ. ಹೀಗಾಗಿ 10 ಜಿಲ್ಲೆಗಳಲ್ಲಿ ಒಟ್ಟು 64 ಮಂದಿ ಅಸುನೀಗಿದ್ದರೆ, 47 ಮಂದಿ ಗಾಯಗೊಂಡಿದ್ದಾರೆ. ಆಗ್ರಾ ಜಿಲ್ಲೆಯಲ್ಲಿಯೇ ಅತ್ಯಂತ ಹೆಚ್ಚು ಅಂದರೆ 36 ಮಂದಿ ಅಸುನೀಗಿ, 35 ಮಂದಿ ಗಾಯಗೊಂಡಿದ್ದಾರೆ. ಇದರ ಜತೆಗೆ ಇತರ 9 ಜಿಲ್ಲೆಗಳಲ್ಲಿ ಕೂಡ ಗಮನಾರ್ಹ ಹಾನಿ ಉಂಟಾಗಿದೆ. ಕರ್ನಾಟಕ ಚುನಾವಣ ಪ್ರಚಾರದಲ್ಲಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಮುಖ್ಯ ಕಾರ್ಯದರ್ಶಿ ಜತೆ ಮಾತನಾಡಿ ಮಾಹಿತಿ ಪಡೆದುಕೊಂಡಿದ್ದಾರೆ. ಎಲ್ಲ ಜಿಲ್ಲೆಗಳಲ್ಲಿ ಕೂಡ ಬಿರುಗಾಳಿ ಆರ್ಭಟಿಸಿದೆ. ಮನೆಗಳ ಛಾವಣಿ ಹಾರಿಹೋಗಿವೆ. ಹಲವು ಮನೆಗಳು ಕುಸಿದು ಬಿದ್ದಿವೆ.


ರಾಜಸ್ಥಾನ 33 ಮಂದಿ ಸಾವು

ರಾಜಸ್ಥಾನದ ಮೂರು ಜಿಲ್ಲೆಗಳಲ್ಲಿ ಬೀಸಿದ ಗಾಳಿಯಿಂದಾಗಿ 33 ಮಂದಿ ಅಸುನೀಗಿ, 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಧೋಲ್ಪುರ, ಭರತ್‌ಪುರ, ಅಲ್ವಾರ್‌ ಹಾನಿಗೀಡಾದ ಜಿಲ್ಲೆಗಳು. ಮುಖ್ಯಮಂತ್ರಿ ವಸುಂಧರಾ ರಾಜೆ ಟ್ವೀಟ್‌ ಮಾಡಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ಚುರುಕುಗೊಳಿಸಲು ಸೂಚನೆ ನೀಡಿದ್ದಾರೆ. ಭರತ್‌ಪುರದಲ್ಲಿ 12 ಮಂದಿ ಸಾವಿಗೀಡಾಗಿದ್ದಾರೆ.

ಮತ್ತೂಂದು ಬಿರುಗಾಳಿ?
ಭಾರತೀಯ ಹವಾಮಾನ ಇಲಾಖೆ ಗುರುವಾರ ಹೊರಡಿಸಿರುವ ಮತ್ತೂಂದು ಎಚ್ಚರಿಕೆಯ ಪ್ರಕಾರ, ಮುಂದಿನ 48 ಗಂಟೆಗಳ ಒಳಗಾಗಿ ಉತ್ತರ ಪ್ರದೇಶ, ರಾಜಸ್ಥಾನಗಳಲ್ಲಿ ಮತ್ತೂಂದು ಧೂಳಿನ ಬಿರುಗಾಳಿ ಬೀಸಲಿದೆ. ಉ.ಪ್ರ., ರಾಜಸ್ಥಾನದ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.


ಪ್ರಧಾನಿ ಸಂತಾಪ

ಉತ್ತರ ಪ್ರದೇಶ, ರಾಜಸ್ಥಾನದಲ್ಲಿ ಧೂಳಿನ ಬಿರುಗಾಳಿಯಿಂದ 109 ಮಂದಿ ಅಸುನೀಗಿದ ಬಗ್ಗೆ ಪ್ರಧಾನಿ ಮೋದಿ ಶೋಕ ವ್ಯಕ್ತಪಡಿಸಿದ್ದಾರೆ. ದೇಶದ ಹಲವು ಭಾಗಗಳಲ್ಲಿ ಧೂಳಿನ ಬಿರುಗಾಳಿಯಿಂದ ಸಾವು ನೋಟು ಉಂಟಾದ ಬಗ್ಗೆ ದುಃಖವಿದೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ. ಅಗಲಿದ ವ್ಯಕ್ತಿಗಳ ಕುಟುಂಬ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಪ್ರಧಾನಿ ತಮ್ಮ ಸಂದೇಶದಲ್ಲಿ ಹೇಳಿದ್ದಾರೆ.

ಕಾರಣವೇನು?
– ಅತ್ಯಂತ ಹೆಚ್ಚಿನ ಪ್ರಮಾಣದ ತಾಪಮಾನ ಹಾಗೂ ಪಶ್ಚಿಮ ಭಾಗದಲ್ಲಿ ಉಂಟಾದ ಹವಾಮಾನ ವೈಪರೀತ್ಯದಿಂದ ಉಂಟಾದ ಬಿರುಗಾಳಿ, ತೇವಾಂಶ ಧೂಳಿನ ಬಿರುಗಾಳಿಗೆ ಕಾರಣವಾಗಿದೆ ಎನ್ನುತ್ತಾರೆ ಭಾರತೀಯ ಹವಾಮಾನ ಇಲಾಖೆಯ ಹಿರಿಯ ಅಧಿಕಾರಿ ಕುಲದೀಪ್‌ ಶ್ರೀವಾಸ್ತವ

– ರಾಜಸ್ಥಾನದ ಕೆಲ ಭಾಗಗಳಲ್ಲಿನ ಗರಿಷ್ಠ ಉಷ್ಣತೆ 45 ಡಿಗ್ರಿ ಸೆಲ್ಷಿಯಸ್‌ ವರೆಗೆ ತಲುಪಿತ್ತು. ಹೀಗಾಗಿ ಅಲ್ಲಿನ ಉತ್ತರ ಭಾಗದಲ್ಲಿ ಒಂದು ರೀತಿಯ ಒತ್ತಡದ ವಾತಾವರಣ ಕಂಡುಬಂದಿತ್ತು. 

– ಹೆಚ್ಚಿನ ಪ್ರಮಾಣದ ತಾಪಮಾನ ತೇವಾಂಶ ಹೆಚ್ಚಾಗುವಂತೆ ಮಾಡುತ್ತದೆ. ಇದರ ಜತೆಗೆ ಮೋಡಗಳಿಂದಾಗಿ ಧಾರಾಕಾರ ಮಳೆ ಮತ್ತು ಬಿರುಗಾಳಿ ಉಂಟಾಗುತ್ತವೆ.

– ಏಕಾಏಕಿ ಈ ರೀತಿ ಉಂಟಾಗುತ್ತದೆ ಎನ್ನುತ್ತಾರೆ ಸ್ಕೈಮೆಟ್‌ ಹವಾಮಾನ ಸಂಸ್ಥೆಯ ಮುಖ್ಯ ಹವಾಮಾನ ತಜ್ಞ ಮಹೇಶ್‌ ಪಲಾವಟ್‌.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.